6:04 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಎಂಸಿಎಫ್ ಸಾಮಾಜಿಕ ಬದ್ಧತಾ ನಿಧಿಯಡಿ ಕೃತಕ ಮಂಡಿ ಜೋಡಣೆ, ವೀಲ್ ಚೇರ್ ಮತ್ತಿತರ ಸಲಕರಣೆಗಳ ವಿತರಣೆ: ಅಂತಾರಾಷ್ಟ್ರೀಯ ಗುಣಮಟ್ಟದ ಕೃತಕ ಅಂಗಾಂಗಗಳ ವ್ಯವಸ್ಥೆ

04/01/2024, 23:07

ಮಂಗಳೂರು(reporterkarnataka.com):ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ವೈ ಅವರ ಶಿಫಾರಸ್ಸಿನಂತೆ ಎಂಸಿಎಫ್ ಕಂಪೆನಿಯ ಸಾಮಾಜಿಕ ಬದ್ಧತಾ ನಿಧಿಯಡಿ ಕೃತಕ ಮಂಡಿ ಜೋಡಣೆ, ವೀಲ್ ಚೇರ್ ಮತ್ತಿತರ ಸಲಕರಣೆಗಳ ವಿತರಣೆ ಎಂಸಿಎಫ್ ಸಭಾಂಗಣದಲ್ಲಿ ಜರಗಿತು.
ಶಾಸಕ ಡಾ.ಭರತ್ ಶೆಟ್ಟಿ ವೈ, ಸುರತ್ಕಲ್ ಅಥರ್ವ ಆಸ್ಪತ್ರೆಯ ಡಾ.ಪ್ರಶಾಂತ್ ಮೋಹನ್ ಅವರು ಫಲಾನುಭವಿಗಳಿಗೆ ಕೃತಕ ಅಂಗಾಂಗ ಜೋಡಣಾ ಸಲಕರಣೆ ವಿತರಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಕಳೆದ ಐದು ವರ್ಷಗಳಲ್ಲಿ ಅಗತ್ಯವುಳ್ಳವರಿಗೆ ಅಂತಾರಾಷ್ರ್ಟೀಯ ಗುಣಮಟ್ಟದ ಕೃತಕ ಅಂಗಾಂಗ ಜೋಡಣೆಯ ವ್ಯವಸ್ಥೆಯನ್ನು ಮಾಡುವ ಮೂಲಕ ಎಂಸಿಎಫ್ ಸಾಮಾಜಿಕ ಜವಾಬ್ದಾರಿಯನ್ನು ನಿಭಾಯಿಸುತ್ತಿದೆ ಎಂದು ಶ್ಲಾಘಿಸಿದರು. ಕ್ಲಾಸ್ ರೂಂ ನವೀಕರಣ, ಅಂಗನವಾಡಿ ಕೇಂದ್ರದ ನವೀಕರಣ, ಸರಕಾರಿ ಲೇಡಿಗೋಶನ್ ಆಸ್ಪತ್ರೆಗೆ ಟ್ರೋಲಿ, ಆಮ್ಲಜನಕ ಉತ್ಪಾದನಾ ಘಟಕ ಸೇರಿದಂತೆ ವಿವಿಧ ಸಹಾಯ, ಸಹಕಾರ ಮತ್ತು ಅಭಿವೃದ್ಧಿ ಕಾರ್ಯಗಳು ನಡೆದಿವೆ ಸಂಸ್ಥೆಗೆ ಈ ಸಂದರ್ಭದಲ್ಲಿ ಕೃತಜ್ನತೆ ಅರ್ಪಿಸುವುದಾಗಿ ಶಾಸಕರು ನುಡಿದರು.
ಎಂಸಿಎಫ್‍ನ ಸಿಇಒ ಆಗಿರುವ ನಿತಿನ್ ಎಂ. ಕಾಂತಕ್ ಅವರು ಮಾತನಾಡಿ, ಸಿಎಸ್‍ಆರ್ ನಿಧಿಯಡಿ ಸಾರ್ವಜನಿಕರಿಗೆ ಅನುಕೂಲವಾಗುವ ಯೋಜನೆ ಜಾರಿಗೆ ಮುಂದೆಯೂ ಸಹಕಾರ ನೀಡುತ್ತೇವೆ ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಎಂಸಿಎಫ್ ಉತ್ಪಾದನಾ ವಿಭಾಗದ ಮುಖ್ಯಸ್ಥ ಗಿರೀಶ್ ಎಸ್. ಅವರು ಸಿಎಸ್‍ಆರ್ ಯೋಜನೆಯ ಕುರಿತಂತೆ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಮನಪಾ ಸದಸ್ಯೆ ಜಯಲಕ್ಷ್ಮೀ ಶೆಟ್ಟಿ,ಎಂಸಿಎಫ್‍ನ ಪ್ರಮುಖ ಅಧಿಕಾರಿಗಳು,ಸಿಎಸ್‍ಆರ್ ವಿಭಾಗದ ಅಧಿಕಾರಿಗಳು,ಎಂಡೋಲೈಟ್ ಸಂಸ್ಥೆಯ ಪ್ರಮುಖರು ಮತ್ತಿತರರು ಉಪಸ್ಥಿತರಿದ್ದರು.
ಎಂಸಿಎಫ್ ಸಂಸ್ಥೆಯ ಡಾ.ಯೋಗೀಶ್ ನಿರೂಪಿಸಿದರು. ಚೇತನ್ ಮೆಂಡೋನ್ಸಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು