1:47 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

Budget Session | ಅಕ್ರಮ ಮಧ್ಯ ಮಾರಾಟ ತಡೆಗೆ ಕ್ರಮ: ಸಚಿವ ಎಚ್.ಕೆ.ಪಾಟೀಲ್ ಭರವಸೆ

04/03/2025, 21:11

ಬೆಂಗಳೂರು(reporterkarnataka.com): ಅಕ್ರಮವಾಗಿ ಮದ್ಯ ಮಾರಾಟ ಮಾಡುವುದನ್ನು ತಡೆಗಟ್ಟಲು ಅಬಕಾರಿ ಇಲಾಖೆಯಿಂದ ವಲಯ ವ್ಯಾಪ್ತಿಯ ರೂಟ್‍ಗಳಲ್ಲಿ ನಿರಂತರವಾಗಿ ಗಸ್ತು ನಡೆಸಲಾಗುತ್ತಿದೆ. ಗಸ್ತಿನ ಸಮಯದಲ್ಲಿ ಮತ್ತು ಸಾರ್ವಜನಿಕರಿಂದ ವಿಶೇಷವಾಗಿ ಮಹಿಳೆ / ಮಹಿಳಾ ಸಂಘಗಳಿಂದ ದೂರುಗಳು ಸ್ವೀಕೃತವಾದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಸ್ಥಳಗಳ ಮೇಲೆ ದಾಳಿ ನಡೆಸಿ, ಅಕ್ರಮಗಳು ಕಂಡುಬಂದಲ್ಲಿ ಅಬಕಾರಿ ಕಾಯ್ದೆ ಮತ್ತು ನಿಯಮಗಳನುಸಾರ ಪ್ರಕರಣಗಳನ್ನು ದಾಖಲಿಸಿ ಅಕ್ರಮ ಮದ್ಯ ಮಾರಾಟ ತಡೆಗೆ ಕ್ರಮ ವಹಿಸಲಾಗುತ್ತಿದೆ ಎಂದು ವಿಧಾನಸಭೆಯಲ್ಲಿ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಹೇಳಿದರು.
ಇಂದು ವಿಧಾನಸಭೆಯಲ್ಲಿ ಬೈಲಹೊಂಗಲ ಶಾಸಕರಾದ ಕೌಜಲಗಿ ಮಹಾಂತೇಶ್ ಶಿವಾನಂದ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಎಲ್ಲಾ ಮದ್ಯ ಮಾರಾಟ ಸನ್ನದುಗಳನ್ನು ನಿಯಮಿತವಾಗಿ ಮಾಸಿಕವಾಗಿ ಪರಿಶೀಲಿಸಲಾಗುತ್ತಿದ್ದು ಕಾಯ್ದೆ/ನಿಯಮ/ಸನ್ನದು ಷರತ್ತು ಉಲ್ಲಂಘನೆಯಾದಲ್ಲಿ ಅಂತಹ ಸನ್ನದುದಾರರ ವಿರುದ್ಧ ಅಬಕಾರಿ ಕಾಯ್ದೆ ಪ್ರಕರಣ ದಾಖಲಿಸಲಾಗುತ್ತಿದ್ದು, ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ನಿಯಮಿತವಾಗಿ ರಸ್ತೆಗಾವಲು ನಡೆಸಿ ಸಂಶಯಾಸ್ಪದ ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ ಅಲ್ಲದೇ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸ್ಥಾಯಿ ಸಮಿತಿ ಸಭೆಯನ್ನು ಏರ್ಪಡಿಸಿ ಇತರೆ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಅಕ್ರಮ ಅತ್ತಿಕ್ಕಲು ಕ್ರಮ ವಹಿಸಲು ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಜಿಲ್ಲಾ ಸಂರಕ್ಷಣಾಧಿಕಾರಿಗಳೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಗ್ರಾಮ ಸಭೆಗಳಲ್ಲಿ ಮತ್ತು ವಿದ್ಯಾರ್ಥಿಗಳಿಗೆ ಶಾಲಾ/ಕಾಲೇಜುಗಳಲ್ಲಿ ಮದ್ಯ ವ್ಯಸನ ಮತ್ತು ಮಾದಕ ವಸ್ತುಗಳ ಸೇವನೆಯಿಂದ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಆರೋಗ್ಯಕ್ಕೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಕ್ರಮ ವಹಿಸಲಾಗಿದೆ. ಅಲ್ಲದೇ 2024-25ನೇ ಸಾಲಿನ ಜನವರಿ ಅಂತ್ಯದವರೆಗೆ 17,390 ಮೊಕದ್ದಮೆಗಳನ್ನು ದಾಖಲಿಸಿ ಅದೇ ಅವಧಿಯಲ್ಲಿ 18,253 ಆರೋಪಿತರನ್ನು ದಸ್ತಗಿರಿಗೊಳಪಡಿಸಲಾಗಿರುತ್ತದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ವಿಧಾನಸಭೆಯಲ್ಲಿ ಉತ್ತರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು