9:45 PM Monday8 - July 2024
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿ ಮಾಸ್ಕೋ ಭೇಟಿ: ಭಾರತ- ರಷ್ಯಾ ಸಂಬಂಧ ಇನ್ನಷ್ಟು ಬಲಗೊಳಿಸಲು ಮಾತುಕತೆ ಜಿಲ್ಲಾಧಿಕಾರಿಗಳು ಮಹಾರಾಜರಲ್ಲ; ಅಧಿಕಾರಿಗಳ ಜತೆ ಸಮನ್ವಯತೆಯಿಂದ ಕೆಲಸ ಮಾಡಿ ಡೆಂಗ್ಯು ನಿಯಂತ್ರಿಸಿ: ಸಿಎಂ… ಜೀ ಕನ್ನಡದ ‘ಮಹಾನಟಿ’ ಗ್ರಾಂಡ್ ಫಿನಾಲೆಗೆ ಮೂಡುಬಿದ್ರೆಯ ಆರಾಧನಾ ಭಟ್: ಶಿಕ್ಷಣ ಕಾಶಿಯ… ಸ್ವಾಮೀಜಿಗಳು ರಾಜಕೀಯದಲ್ಲಿ ಹಸ್ತಕ್ಷೇಪ ಮಾಡುವುದು ಸಲ್ಲದು; ಬದಲಿಗೆ ಧರ್ಮದಲ್ಲಿರುವ ತಾರತಮ್ಯ ನಿವಾರಿಸಲಿ: ಪದ್ಮರಾಜ್… ಮೈಸೂರು ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ನೇರ ಪಾತ್ರ: ಮಾಜಿ ಸಿಎಂ, ಸಂಸದ ಜಗದೀಶ… ಬೆಲೆಯೇರಿಕೆ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ: ಶಾಸಕ ಡಾ. ಭರತ್ ಶೆಟ್ಟಿ… ಕೋಟರಿಂದ ತೆರವಾದ ಸ್ಥಾನದ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್… ಪಾವೂರು ಉಳಿಯ ದ್ವೀಪದಲ್ಲಿ ಅಕ್ರಮ ಮರಳುಗಾರಿಕೆ ಶಾಶ್ವತ ತಡೆಗೆ, ದ್ವೀಪವಾಸಿಗಳ ರಕ್ಷಣೆಗೆ ಜಿಲ್ಲಾ… ಶ್ರಮ ಸಂಸ್ಕೃತಿ ಗೌರವಿಸುವ ಹಬ್ಬ ಮಣ್ಣೆತ್ತಿನ ಅಮಾವಾಸ್ಯೆ: ಉತ್ತರ ಕರ್ನಾಟಕದಲ್ಲೆಡೆ ಭಾರೀ ಸಂಭ್ರಮ ಮಂಗಳೂರಿನ ವಿವಿಧಡೆ ಟ್ರಾಫಿಕ್ ಪೊಲೀಸರಿಂದ ಕರ್ಕಶ ಹಾರ್ನ್, ಎಲ್ಇಡಿ ಲೈಟ್ ತೆರವು ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಉಪ್ಪಿನಂಗಡಿ ಶಾಖೆ: ಜುಲೈ 7ರಂದು ಉಚಿತ ವೈದ್ಯಕೀಯ ತಪಾಸಣಾ ಶಿಬಿರ

05/07/2024, 18:39

ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪ್ಪಿನಂಗಡಿ ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ, ಜೇಸಿಐ ಉಪ್ಪಿನಂಗಡಿ, ಚಾರಿಟೇಬಲ್ ಟ್ರಸ್ಟ್ ಉಪ್ಪಿನಂಗಡಿ, ಜೇಸಿಐ ಉಪ್ಪಿನಂಗಡಿ ಇವರ ಸಹಯೋಗದೊಂದಿಗೆ ಹಲಸು ಹಬ್ಬ –2024 ಕಾರ್ಯಕ್ರಮದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಉಪ್ಪಿನಂಗಡಿ ಎಚ್.ಎಂ.ಆಡಿಟೋರಿಯಂ ಜುಲೈ 7ರಂದು ಬೆಳಗ್ಗೆ 9.30ರಿಂದ ಅಪರಾಹ್ನ 2.00ರವರೆಗೆ ಆಯೋಜಿಸಲಾಗಿದೆ.
ಈ ವೈದ್ಯಕೀಯ ಶಿಬಿರದಲ್ಲಿ ದೇರಳಕಟ್ಟೆಯ ಕಣಚೂರು ಆಯುರ್ವೇದ ಆಸ್ಪತ್ರೆಯ ನುರಿತ ವೈದರ ತಂಡದವರಿಂದ ಸಾಮಾನ್ಯ ವೈದ್ಯಕೀಯ ಪರೀಕ್ಷೆ, ಮಧುಮೇಹ ರಕ್ತ ಪರೀಕ್ಷೆ, ರಕ್ತದೊತ್ತಡ ಪರೀಕ್ಷೆ, ಕೀಲು ಮತ್ತು ಗಂಟು ನೋವು ತಪಾಸಣೆ, ಮೂಲವ್ಯಾದಿ ತಪಾಸಣೆ, ಸ್ತ್ರೀರೋಗ ಮತ್ತು ಪ್ರಸೂತಿ ತಪಾಸಣೆ, ಉಚಿತ ಔಷಧಿ ವಿತರಣೆ, ಹೆಚ್ಚಿನ ಚಿಕಿತ್ಸೆಗೆ ಸೂಕ್ತ ಸಲಹೆ ನೀಡುವುದು ಹಾಗೂ ಇತರ ವೈದ್ಯಕೀಯ ಸೌಲಭ್ಯವಿರುವುದು.
ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಎಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು