11:57 AM Sunday2 - November 2025
ಬ್ರೇಕಿಂಗ್ ನ್ಯೂಸ್
ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:… ಸಂವಿಧಾನ ರಕ್ಷಣೆ | ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ:… ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದ ಕೇಂದ್ರ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು:… Kodagu | ಮಡಿಕೇರಿ: 15 ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಕಾಡಿನಲ್ಲಿ ಪತ್ತೆ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡುವುದಿಲ್ಲ: ಮಾಜಿ ಸಚಿವ ರೇಣುಕಾಚಾರ್ಯ ಭವಿಷ್ಯ

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಉಪ್ಪಿನಂಗಡಿ ಶಾಖೆ: ಜುಲೈ 7ರಂದು ಉಚಿತ ವೈದ್ಯಕೀಯ ತಪಾಸಣಾ ಶಿಬಿರ

05/07/2024, 18:39

ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪ್ಪಿನಂಗಡಿ ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ, ಜೇಸಿಐ ಉಪ್ಪಿನಂಗಡಿ, ಚಾರಿಟೇಬಲ್ ಟ್ರಸ್ಟ್ ಉಪ್ಪಿನಂಗಡಿ, ಜೇಸಿಐ ಉಪ್ಪಿನಂಗಡಿ ಇವರ ಸಹಯೋಗದೊಂದಿಗೆ ಹಲಸು ಹಬ್ಬ –2024 ಕಾರ್ಯಕ್ರಮದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಉಪ್ಪಿನಂಗಡಿ ಎಚ್.ಎಂ.ಆಡಿಟೋರಿಯಂ ಜುಲೈ 7ರಂದು ಬೆಳಗ್ಗೆ 9.30ರಿಂದ ಅಪರಾಹ್ನ 2.00ರವರೆಗೆ ಆಯೋಜಿಸಲಾಗಿದೆ.
ಈ ವೈದ್ಯಕೀಯ ಶಿಬಿರದಲ್ಲಿ ದೇರಳಕಟ್ಟೆಯ ಕಣಚೂರು ಆಯುರ್ವೇದ ಆಸ್ಪತ್ರೆಯ ನುರಿತ ವೈದರ ತಂಡದವರಿಂದ ಸಾಮಾನ್ಯ ವೈದ್ಯಕೀಯ ಪರೀಕ್ಷೆ, ಮಧುಮೇಹ ರಕ್ತ ಪರೀಕ್ಷೆ, ರಕ್ತದೊತ್ತಡ ಪರೀಕ್ಷೆ, ಕೀಲು ಮತ್ತು ಗಂಟು ನೋವು ತಪಾಸಣೆ, ಮೂಲವ್ಯಾದಿ ತಪಾಸಣೆ, ಸ್ತ್ರೀರೋಗ ಮತ್ತು ಪ್ರಸೂತಿ ತಪಾಸಣೆ, ಉಚಿತ ಔಷಧಿ ವಿತರಣೆ, ಹೆಚ್ಚಿನ ಚಿಕಿತ್ಸೆಗೆ ಸೂಕ್ತ ಸಲಹೆ ನೀಡುವುದು ಹಾಗೂ ಇತರ ವೈದ್ಯಕೀಯ ಸೌಲಭ್ಯವಿರುವುದು.
ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಎಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು