4:42 AM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಮೇಕೆ ಭಕ್ಷಕ ಹೆಣ್ಣು ಹುಲಿ ಕೊನೆಗೂ ಸೆರೆ: ಮೈಸೂರು ಮೃಗಾಲಯಕ್ಕೆ ರವಾನೆ; ನಿಟ್ಟುಸಿರು ಬಿಟ್ಟ ನಾಣಚ್ಚಿ ಹಾಡಿ ನಾಗರಿಕರು

17/12/2021, 18:43

ಸಾಂದರ್ಭಿಕ ಚಿತ್ರ
ನಾಗರಹೊಳೆಗೆ(reporterkarnataka.com) ನಾಣಚ್ಚಿ ಹಾಡಿ ವ್ಯಾಪ್ತಿಯಲ್ಲಿ ಮೇಯಲು ಬಿಟ್ಟಿದ್ದ 9 ಮೇಕೆಗಳನ್ನು ಬಲಿ ತೆಗೆದುಕೊಂಡಿದ್ದ ಹುಲಿಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ.

ಹುಲಿ ಮೇಕೆಗಳನ್ನು ಕೊಂದಿರುವುದಲ್ಲದೆ, ಮೇಕೆ ಮೇಯಿಸುತ್ತಿದ್ದ ವ್ಯಕ್ತಿಯ ಮೇಲೂ ದಾಳಿ ನಡೆಸಿತ್ತು. ಇದರಿಂದ ಭಯಭೀತರಾದ ಗ್ರಾಮಸ್ಥರ. ಹುಲಿಯನ್ನು ಸೆರೆಹಿಡಿಯುವಂತೆ ಒತ್ತಾಯಿಸಿ, ನಾಗರಹೊಳೆ ಅರಣ್ಯ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದರು. ಗ್ರಾಮಸ್ಥರ ಪ್ರತಿಭಟನೆ ಹಿನ್ನಲೆಯಲ್ಲಿ ಸಾಕಾನೆಗಳ ಸಹಕಾರದಿಂದ ಅರಣ್ಯ ಇಲಾಖೆಯು ಗುರುವಾರ ಸಂಜೆ ಹುಲಿ ಸೆರೆಗೆ ಕಾರ್ಯಾಚರಣೆ. ನಡೆಸಿತ್ತು. 

ಮತ್ತಿಗೋಡು ಶಿಬಿರದ ಅಭಿಮನ್ಯು, ಭೀಮ ಸೇರಿದಂತೆ ಸಾಕಾನೆಗಳ ಮೂಲಕ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಆಡುಗಳನ್ನು ಬಲಿ ತೆಗೆದುಕೊಂಡಿದ್ದ ಸ್ಥಳದಲ್ಲೇ ಅಡಗಿದ್ದ ಹುಲಿಯನ್ನು ತಜ್ಞರ ನೆರವಿನಿಂದ ಅರಿವಳಿಕೆ ನೀಡಿ ಸೆರೆಹಿಡಿದರು. 

ಸೆರೆಸಿಕ್ಕ ಹೆಣ್ಣು ಹುಲಿ ಅಂದಾಜು 10 ವಷ೯ ಪ್ರಾಯದ್ದಾಗಿದೆ. 
ವ್ಯಾಘ್ರ ಸೆರೆಯಾದ ಹಿನ್ನಲೆಯಲ್ಲಿ ನಾಣಚ್ಚಿ ಹಾಡಿ ವ್ಯಾಪ್ತಿಯ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದು ಸೆರೆಹಿಡಿಯಲಾದ ಹುಲಿಯನ್ನು ಮೈಸೂರು ಮೖಗಾಲಯಕ್ಕೆ ಸಾಗಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು