7:10 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಮೇಕೆ ಭಕ್ಷಕ ಹೆಣ್ಣು ಹುಲಿ ಕೊನೆಗೂ ಸೆರೆ: ಮೈಸೂರು ಮೃಗಾಲಯಕ್ಕೆ ರವಾನೆ; ನಿಟ್ಟುಸಿರು ಬಿಟ್ಟ ನಾಣಚ್ಚಿ ಹಾಡಿ ನಾಗರಿಕರು

17/12/2021, 18:43

ಸಾಂದರ್ಭಿಕ ಚಿತ್ರ
ನಾಗರಹೊಳೆಗೆ(reporterkarnataka.com) ನಾಣಚ್ಚಿ ಹಾಡಿ ವ್ಯಾಪ್ತಿಯಲ್ಲಿ ಮೇಯಲು ಬಿಟ್ಟಿದ್ದ 9 ಮೇಕೆಗಳನ್ನು ಬಲಿ ತೆಗೆದುಕೊಂಡಿದ್ದ ಹುಲಿಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ.

ಹುಲಿ ಮೇಕೆಗಳನ್ನು ಕೊಂದಿರುವುದಲ್ಲದೆ, ಮೇಕೆ ಮೇಯಿಸುತ್ತಿದ್ದ ವ್ಯಕ್ತಿಯ ಮೇಲೂ ದಾಳಿ ನಡೆಸಿತ್ತು. ಇದರಿಂದ ಭಯಭೀತರಾದ ಗ್ರಾಮಸ್ಥರ. ಹುಲಿಯನ್ನು ಸೆರೆಹಿಡಿಯುವಂತೆ ಒತ್ತಾಯಿಸಿ, ನಾಗರಹೊಳೆ ಅರಣ್ಯ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದರು. ಗ್ರಾಮಸ್ಥರ ಪ್ರತಿಭಟನೆ ಹಿನ್ನಲೆಯಲ್ಲಿ ಸಾಕಾನೆಗಳ ಸಹಕಾರದಿಂದ ಅರಣ್ಯ ಇಲಾಖೆಯು ಗುರುವಾರ ಸಂಜೆ ಹುಲಿ ಸೆರೆಗೆ ಕಾರ್ಯಾಚರಣೆ. ನಡೆಸಿತ್ತು. 

ಮತ್ತಿಗೋಡು ಶಿಬಿರದ ಅಭಿಮನ್ಯು, ಭೀಮ ಸೇರಿದಂತೆ ಸಾಕಾನೆಗಳ ಮೂಲಕ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಆಡುಗಳನ್ನು ಬಲಿ ತೆಗೆದುಕೊಂಡಿದ್ದ ಸ್ಥಳದಲ್ಲೇ ಅಡಗಿದ್ದ ಹುಲಿಯನ್ನು ತಜ್ಞರ ನೆರವಿನಿಂದ ಅರಿವಳಿಕೆ ನೀಡಿ ಸೆರೆಹಿಡಿದರು. 

ಸೆರೆಸಿಕ್ಕ ಹೆಣ್ಣು ಹುಲಿ ಅಂದಾಜು 10 ವಷ೯ ಪ್ರಾಯದ್ದಾಗಿದೆ. 
ವ್ಯಾಘ್ರ ಸೆರೆಯಾದ ಹಿನ್ನಲೆಯಲ್ಲಿ ನಾಣಚ್ಚಿ ಹಾಡಿ ವ್ಯಾಪ್ತಿಯ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದು ಸೆರೆಹಿಡಿಯಲಾದ ಹುಲಿಯನ್ನು ಮೈಸೂರು ಮೖಗಾಲಯಕ್ಕೆ ಸಾಗಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು