12:56 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮೇಕೆದಾಟು ನಾವು ಮಾಡಿಯೇ ಮಾಡ್ತೀವಿ, ಕಾಂಗ್ರೆಸ್ ಪಾದಯಾತ್ರೆ ಬೇಕಾಗಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

03/01/2022, 22:37

ಮಂಗಳೂರು(reporterkarnataka.com): ಮೇಕೆದಾಟು ಪಾದಯಾತ್ರೆ ಕಾಂಗ್ರೆಸ್ ನ ಅತ್ಯಂತ ಹೀನ ರಾಜಕಾರಣ. ಕೋವಿಡ್ ಮೊದಲ ಅಲೆ, ಎರಡನೇ ಅಲೆ ಬಂದಾಗಲೂ ಇವರು ಏನನ್ನೂ ಮಾಡಿಲ್ಲ, ಟೀಕೆಯಷ್ಟೇ ಮಾಡಿದ್ದು. ಜನರನ್ನು ದಾರಿ ತಪ್ಪಿಸಿ ಜನರನ್ನು ಕೊಲ್ಲುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಮಂಗಳೂರಿನಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು,ಇವತ್ತು ಎಚ್ಚರಿಕೆ ತೆಗೋಳುವ ಕೆಲಸ ಆಗಬೇಕು, ಕಾರ್ಯಕಾರಿಣೆಯಲ್ಲಿ 800 ಜನರನ್ನು ನಾವು 300 ಕ್ಕೆ ಇಳಿಸಿದೆವು.ಸರ್ಕಾರದ ನಿಯಮದ ಪ್ರಕಾರ ನಮ್ಮ ಬೇರೆ ಚಟುವಟಿಕೆಗಳನ್ನು ನಿಲ್ಲಿಸೋಕೂ ಯೋಚನೆ ಮಾಡಿದ್ದೇವೆ.

ಮೇಕೆದಾಟು ರಾಜಕಾರಣ ಮಾಡ್ತಿದಾರೆ, ನಿಮ್ಮದೇ ಸರ್ಕಾರ ಮತ್ತು ನಿಮ್ಮದೇ ಮುಖ್ಯಮಂತ್ರಿ ಇರಲಿಲ್ವಾ? ಆಗ ನೀವು ಮೇಕೆದಾಟು ಬಗ್ಗೆ ಚರ್ಚೆ ಮಾಡಲಿಲ್ಲ, ತಯಾರಿ ಮಾಡಲಿಲ್ಲ ಇವತ್ತು ನಮ್ಮ ಸರ್ಕಾರ ಸಂಪೂರ್ಣ ಬದ್ದತೆ ಹೊಂದಿದೆ.ನಾವು ಮೇಕೆದಾಟು ಮಾಡಿಯೇ ಮಾಡ್ತೀವಿ, ನಮ್ಮ ಕಾಲದಲ್ಲೇ ಅದು ಆಗುತ್ತೆ. ಅದಕ್ಕೆ ಈ ಕಾಂಗ್ರೆಸ್ ಪಾದಯಾತ್ರೆ ಅಗತ್ಯ ಖಂಡಿತಾ ಇಲ್ಲ

ರಾಜ್ಯದಲ್ಲಿ ಪಾದಯಾತ್ರೆ ಮಾಡಿ ಕೊರೋನಾ ಹೆಚ್ಚು ಮಾಡಲು ನೋಡ್ತಿದಾರೆ. ಇದರಿಂದ ಖಂಡಿತಾ ಕೊರೋನಾ ಹೆಚ್ಚಳವಾಗುತ್ತೆ, ಇದಕ್ಕೆ ಕಾಂಗ್ರೆಸ್ ಹೊಣೆಗಾರರಾಗುತ್ತೆ ಎಂದು ಅವರು ಎಚ್ಚರಿಸಿದರು.

ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದೆ.ಸರ್ಕಾರ ಮುನ್ನೆಚ್ಚರಿಕೆಗಾಗಿ ಹಲವು ಗೈಡ್ ಲೈನ್ ಗಳನ್ನ ತರುತ್ತೆ. ಲಾಕ್ ಡೌನ್ ಇಲ್ಲ, ತಜ್ಞರ ವರದಿ ಅಧಾರದಲ್ಲಿ ಕೋವಿಡ್ ನಿಯಂತ್ರಿಸ್ತಾರೆ. ಜನರೇ ಸ್ವಯಂ ಆಗಿ ಈ ಕೋವಿಡ್ ನಿಯಂತ್ರಣ ಮಾಡಬೇಕಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು