5:18 AM Friday30 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಮೀನು ವ್ಯಾಪಾರಿಯ ಕಿಡ್ನಾಪ್: 15 ಲಕ್ಷ ರೂ. ಬೇಡಿಕೆ; ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲು

03/10/2021, 23:48

ಮಲ್ಪೆ(reporterkarnataka.com):  ಮೀನು ವ್ಯಾಪಾರಿಯೊಬ್ಬರನ್ನು ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಸಾಧೀಕ್ ಎಂಬವವರು ಈ ಕುರಿತು ದೂರು ನೀಡಿದ್ದಾರೆ.

ಚಿಕ್ಕಮಗಳೂರಿನ ಕೊಪ್ಪದಿಂದ ತನ್ನ ತಮ್ಮ ಸುಲೈಮಾನ್  ಮೀನು ಲಾರಿಯ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ. ಸೆ.30ರಂದು ಬೆಳಗ್ಗೆ 9.00 ಗಂಟೆಗೆ ಕೊಪ್ಪದ ಮನೆಯಿಂದ ಮಲ್ಪೆಗೆ ಮೀನು ಲಾರಿಯ ಚಾಲಕ ಕೆಲಸಕ್ಕೆ ಬಂದಿದ್ದ. ಅ.1ರಂದು ತನ್ನ ಇನ್ನೊಬ್ಬ ತಮ್ಮ ಶಂಶುದ್ದೀನ್ ಎಂಬಾತ ಸುಲೈಮಾನ್ ಗೆ ಕರೆ ಮಾಡಿದಾಗ ಪೋನ್ ಕರೆ ಸ್ವೀಕರಿಸಲಿಲ್ಲ. ಸೆ.2ರಂದು ಬೆಳಗ್ಗೆ 9.00 ಗಂಟೆಗೆ ಸುಲೈಮಾನ್ ನ ಮೊಬೈಲ್ ನಂಬ್ರದಿಂದ ಶಂಶುದ್ದೀನ್ ಗೆ ಕರೆ ಬಂತು. ಆ ಕಡೆಯಿಂದ ಸಮೀರ್ ಎಂಬವನು ಮಾತನಾಡಿ, ಸುಲೈಮಾನ್ ನಮ್ಮ ಜೊತೆಗೆ ಇದ್ದಾನೆ. ಆತನನ್ನು ಬಿಡಬೇಕಾದರೆ ನಮಗೆ 15 ಲಕ್ಷ ಹಣ ಕೊಡಬೇಕು. ಆತನನ್ನು ನಾವು ಸೆ.1ರಂದು ಮಲ್ಪೆಯಿಂದ ಅಪಹರಣ ಮಾಡಿದ್ದೇವೆ ಎಂದು ಹೇಳಿದ್ದನು. ನಂತರ ನಾವು ಮಲ್ಪೆಗೆ ಬಂದು ತಮ್ಮ ಸುಲೈಮಾನ್ ಬಗ್ಗೆ ವಿಚಾರಿಸಿದಾಗ ಸುಲೈಮಾನ್ ಮೀನು ಲಾರಿ ಚಾಲಕ ಕೆಲಸದ  ಜೊತೆಗೆ ಮೀನನ್ನು ಮಲ್ಪೆಯಲ್ಲಿ ತೆಗೆದುಕೊಂಡು ಕೇರಳಕ್ಕೆ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವುದಾಗಿ ತಿಳಿಸಿದರು.

ನಂತರ ಸುಲೈಮಾನ್ ಮೊಬೈಲಿಗೆ ಕರೆ ಮಾಡಿದಾಗ ಆಕರೆಯನ್ನು ಸಮೀರ್ ಎಂಬವನು ಸ್ವೀಕರಿಸಿ, ನಮಗೆ ಸುಲೈಮಾನ್ ಮೀನು ವ್ಯವಹಾರದಲ್ಲಿ 15 ಲಕ್ಷ ಹಣ ಕೊಡಬೇಕು. ಆ ಕಾರಣದಿಂದ ಅವನನ್ನು ಕೇರಳದ ಹನಸ್ ಮತ್ತು ಅವರ ಸಹೋದರರು ಅಪಹರಣ ಮಾಡಿರುತ್ತಾರೆ. ನೀವು ಬಂದು 15 ಲಕ್ಷ ಹಣ ಕೊಟ್ಟು ಕರೆದುಕೊಂಡು ಹೋಗಿ. ಇಲ್ಲದಿದ್ದರೆ ಆತನನ್ನು ಕೊಂದು ಸಮುದ್ರಕ್ಕೆ ಬಿಸಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ಸಾದಿಕ್ ಮಲ್ಪೆ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು  ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು