11:57 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮೀನು ವ್ಯಾಪಾರಿಯ ಕಿಡ್ನಾಪ್: 15 ಲಕ್ಷ ರೂ. ಬೇಡಿಕೆ; ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲು

03/10/2021, 23:48

ಮಲ್ಪೆ(reporterkarnataka.com):  ಮೀನು ವ್ಯಾಪಾರಿಯೊಬ್ಬರನ್ನು ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಸಾಧೀಕ್ ಎಂಬವವರು ಈ ಕುರಿತು ದೂರು ನೀಡಿದ್ದಾರೆ.

ಚಿಕ್ಕಮಗಳೂರಿನ ಕೊಪ್ಪದಿಂದ ತನ್ನ ತಮ್ಮ ಸುಲೈಮಾನ್  ಮೀನು ಲಾರಿಯ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ. ಸೆ.30ರಂದು ಬೆಳಗ್ಗೆ 9.00 ಗಂಟೆಗೆ ಕೊಪ್ಪದ ಮನೆಯಿಂದ ಮಲ್ಪೆಗೆ ಮೀನು ಲಾರಿಯ ಚಾಲಕ ಕೆಲಸಕ್ಕೆ ಬಂದಿದ್ದ. ಅ.1ರಂದು ತನ್ನ ಇನ್ನೊಬ್ಬ ತಮ್ಮ ಶಂಶುದ್ದೀನ್ ಎಂಬಾತ ಸುಲೈಮಾನ್ ಗೆ ಕರೆ ಮಾಡಿದಾಗ ಪೋನ್ ಕರೆ ಸ್ವೀಕರಿಸಲಿಲ್ಲ. ಸೆ.2ರಂದು ಬೆಳಗ್ಗೆ 9.00 ಗಂಟೆಗೆ ಸುಲೈಮಾನ್ ನ ಮೊಬೈಲ್ ನಂಬ್ರದಿಂದ ಶಂಶುದ್ದೀನ್ ಗೆ ಕರೆ ಬಂತು. ಆ ಕಡೆಯಿಂದ ಸಮೀರ್ ಎಂಬವನು ಮಾತನಾಡಿ, ಸುಲೈಮಾನ್ ನಮ್ಮ ಜೊತೆಗೆ ಇದ್ದಾನೆ. ಆತನನ್ನು ಬಿಡಬೇಕಾದರೆ ನಮಗೆ 15 ಲಕ್ಷ ಹಣ ಕೊಡಬೇಕು. ಆತನನ್ನು ನಾವು ಸೆ.1ರಂದು ಮಲ್ಪೆಯಿಂದ ಅಪಹರಣ ಮಾಡಿದ್ದೇವೆ ಎಂದು ಹೇಳಿದ್ದನು. ನಂತರ ನಾವು ಮಲ್ಪೆಗೆ ಬಂದು ತಮ್ಮ ಸುಲೈಮಾನ್ ಬಗ್ಗೆ ವಿಚಾರಿಸಿದಾಗ ಸುಲೈಮಾನ್ ಮೀನು ಲಾರಿ ಚಾಲಕ ಕೆಲಸದ  ಜೊತೆಗೆ ಮೀನನ್ನು ಮಲ್ಪೆಯಲ್ಲಿ ತೆಗೆದುಕೊಂಡು ಕೇರಳಕ್ಕೆ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವುದಾಗಿ ತಿಳಿಸಿದರು.

ನಂತರ ಸುಲೈಮಾನ್ ಮೊಬೈಲಿಗೆ ಕರೆ ಮಾಡಿದಾಗ ಆಕರೆಯನ್ನು ಸಮೀರ್ ಎಂಬವನು ಸ್ವೀಕರಿಸಿ, ನಮಗೆ ಸುಲೈಮಾನ್ ಮೀನು ವ್ಯವಹಾರದಲ್ಲಿ 15 ಲಕ್ಷ ಹಣ ಕೊಡಬೇಕು. ಆ ಕಾರಣದಿಂದ ಅವನನ್ನು ಕೇರಳದ ಹನಸ್ ಮತ್ತು ಅವರ ಸಹೋದರರು ಅಪಹರಣ ಮಾಡಿರುತ್ತಾರೆ. ನೀವು ಬಂದು 15 ಲಕ್ಷ ಹಣ ಕೊಟ್ಟು ಕರೆದುಕೊಂಡು ಹೋಗಿ. ಇಲ್ಲದಿದ್ದರೆ ಆತನನ್ನು ಕೊಂದು ಸಮುದ್ರಕ್ಕೆ ಬಿಸಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ಸಾದಿಕ್ ಮಲ್ಪೆ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು  ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು