6:17 AM Sunday3 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಮೀನುಗಾರಿಕೆಗೆ ತೆರಳಿದ್ದ ತೆಪ್ಪ ಮಗುಚಿ ಓರ್ವ ದಾರುಣ ಸಾವು: ಇನ್ನಿಬ್ಬರು ಈಜಿ ಪಾರು

15/08/2023, 16:00

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೀನು ಹಿಡಿಯಲು ಹೋದಾಗ ಭಾರೀ ಗಾಳಿಗೆ ತೆಪ್ಪ ಮಗುಚಿ ಬಿದ್ದು ಓರ್ವ ಸಾವನ್ನಪ್ಪಿ, ಇಬ್ಬರು ಪಾರಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಕ್ಕವಳ್ಳಿ ಗ್ರಾಮದ ಭದ್ರಾ ಜಲಾಶಯದಲ್ಲಿ ನಡೆದಿದೆ.


ಮೃತನನ್ನ 40 ವರ್ಷದ ಕೃಷ್ಣ ಎಂದು ಗುರುತಿಸಲಾಗಿದೆ. ಭದ್ರಾ ಜಲಾಶಯದಲ್ಲಿ ಕೃಷ್ಣ,ಅಜಯ್ ಹಾಗೂ ರಾಜೇಶ್ ಮೀನು ಹಿಡಿಯಲು ಹೋಗಿದ್ದರು. ಈ ವೇಳೆ ಬೀಸಿದ ಭಾರೀ ಗಾಳಿಯಿಂದ ಉಕ್ಕಡ ಮಗುಚಿ ಬಿದ್ದಿದೆ. ಉಕ್ಕಡ ಮಗುಚಿ ಬೀಳುತ್ತಿದ್ದಂತೆ ಅಜಯ್ ಹಾಗೂ ರಾಜೇಶ್ ಈಜಿ ದಡ ಸೇರಿದ್ದಾರೆ. ಆದರೆ, ಕೃಷ್ಣ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ನೀರಿನಲ್ಲಿ ಮುಳುಗುತ್ತಿದ್ದ ಕೃಷ್ಣನನ್ನ ಬದುಕಿಸಲು ರಾಜೇಶ್ ಹಾಗೂ ಅಜಯ್ ಹೋರಾಡಿದ್ದಾರೆ. ಆದರೆ, ಭಾರೀ ಗಾಳಿ, ಗಾಳಿಗೆ ನೀರಿನ ಅಲೆಗಳು ರಭಸವಾಗಿದ್ದ ಕಾರಣ ಕೃಷ್ಣನನ್ನ ಬದುಕಿಸಲು ಸಾಧ್ಯವಾಗಿಲ್ಲ. ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಕೃಷ್ಣ ಅವರ ಮೃತದೇಹವನ್ನ ಉಡುಪಿಯ ಮಲ್ಪೆ ಮೂಲದ ಈಜು ತಜ್ಞ ಈಶ್ವರ್ ಮಲ್ಪೆ ಹಾಗೂ ತಂಡದವರು ಹುಡುಕಿ ಹೊರ ತಂದಿದ್ದಾರೆ. ಮೃತ ಕೃಷ್ಣ ಮೂಲತಃ ತರೀಕೆರೆ ತಾಲೂಕಿನವನು. ಲಕ್ಕವಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು