5:24 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮೀಸಲಾತಿ ಹೋರಾಟ: ಜುಲೈ11ರ ಧರಣಿ ಯಶಸ್ವಿಗೊಳಿಸಿ:ವಾಲ್ಮೀಕಿ ಮಹಾಸಭಾ ಅಧ್ಯಕ್ಷ ಎಸ್. ಸುರೇಶ್ ಮನವಿ

09/07/2022, 22:46

ವಿ.ಜಿ.ವೃಷಭೇಂದ್ರ ಕೂಡ್ಲಿಗಿವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ವಾಲ್ಮೀಕಿ ಸಮಾಜಕ್ಕೆ 7.5 ಮೀಸಲಾತಿ ಹೋರಾಟದ ಮುಂದುವರಿದ ಭಾಗವಾಗಿ ವಿಜಯನಗರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜುಲೈ 11ರಂದು ನಡೆಯಲಿರುವ ಧರಣಿ ಸತ್ಯಾಗ್ರಹ ಹಾಗೂ ಜಿಲ್ಲಾಧಿಕಾರಿಗಳ ಮುತ್ತಿಗೆ ಯಶಸ್ವಿಗೊಳಿಸಬೇಕೆಂದು ಕೂಡ್ಲಿಗಿ ವಾಲ್ಮೀಕಿ ಮಹಾಸಭಾದ ಅಧ್ಯಕ್ಷ ಎಸ್.ಸುರೇಶ ಮನವಿ ಮಾಡಿದ್ದಾರೆ.

ಮೀಸಲಾತಿ ಹೋರಾಟದ  ಹಿನ್ನಲೆಯಲ್ಲಿ ಮುಂದುವರಿದ ಭಾಗವಾಗಿ ಜರುಗುತ್ತಿದ್ದು. ವಾಲ್ಮೀಕಿ ಸ್ವಾಮೀಜಿಯವರು ಸರ್ಕಾರದ ನಿರ್ಲಕ್ಷ್ಯಧೋರಣೆಯ ವಿರುದ್ಧ, ಧರಣಿ ನಡೆಸುತ್ತಿರುವ ಹೋರಾಟ 150ನೇ ದಿನ ಪೂರೈಸುತ್ತಿರುವ ಹಿನ್ನಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಕಚೇರಿಗಳ ಆವರಣದಲ್ಲಿ ದಲಿತ ಸಮುದಾಯಗಳಿಂದ, ಧರಣಿ ನಡೆಸಲು ಸ್ವಾಮೀಜಿಗಳು ಕರೆ ನೀಡಿದ್ದಾರೆ. 

ಜುಲೈ11ರಂದು ವಿಜಯನಗರ ಜಿಲ್ಲಾದಿಕಾರಿಗಳ ಆವರಣದಲ್ಲಿ ನಡೆಯಲಿರುವ ಧರಣಿ ಮತ್ತು ಕಚೇರಿಗೆ ಮುತ್ತಿಗೆ ಹಾಕುವ ಕಾರ್ಯಕ್ರಮದಲ್ಲಿ ಕೂಡ್ಲಿಗಿ ತಾಲೂಕಿನ ಸರ್ವ ದಲಿತ ಮುಖಂಡರು ಭಾಗಿಯಾಗಬೇಕಿದೆ. ಎಲ್ಲಾ ದಲಿತ ಹೋರಾಟಗಾರರು ಪಕ್ಷಾತೀತವಾಗಿ ಭಾಗವಹಿಸಿ ಹೋರಾಟ ಯಶಸ್ವೀಗೊಳಿಸಬೇಕಿದೆ ಎಂದು ದಲಿತ ಮುಖಂಡ ಸುರೇಶ ಕೋರಿದ್ದಾರೆ. 

ದಲಿತ ಯುವ ಮುಖಂಡ ಸಾಲುಮನಿ,ವಾಲ್ಮೀಕಿ ಯುವ ಮುಖಂಡ ಚೌಡಪ್ಪ(ಸೋವೆ) ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು