2:56 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮೇಕೆದಾಟು ಕಾಂಗ್ರೆಸ್ ಪಾದಯಾತ್ರೆ ಬಿಜೆಪಿ ಸರಕಾರ ವಿರುದ್ಧ ಹೆಣೆದ ರಾಜಕೀಯ ಷಡ್ಯಂತ್ರ: ಶಾಸಕ ವೇದವ್ಯಾಸ ಕಾಮತ್

14/01/2022, 20:58

ಮಂಗಳೂರು(reporterkarnataka.com): ಮೇಕೆದಾಟು ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಏರ್ಪಡಿಸಿದ ಪಾದಯಾತ್ರೆ ಸಂಪೂರ್ಣ ರಾಜಕೀಯ ಗಿಮಿಕ್ ಆಗಿದ್ದು, ರಾಜ್ಯ ಸರಕಾರಕ್ಕೆ ಕೆಟ್ಟ ಹೆಸರು ತರಲು ಕಾಂಗ್ರೆಸಿಗರು ಹೆಣೆದ ಷಡ್ಯಂತ್ರದ ಭಾಗ ಇದು ಎಂದು ಶಾಸಕ ಡಿ.ವೇದವ್ಯಾಸ್ ಕಾಮತ್ ಆರೋಪಿಸಿದ್ದಾರೆ.

ಪ್ರಕರಣ ನ್ಯಾಯಾಲಯದಲ್ಲಿ ಇರುವಾಗ ಹೋರಾಟ ನಡೆಸಿ ರಾಜ್ಯದ ಜನತೆಯನ್ನು ತಪ್ಪುದಾರಿಗೆ ಎಳೆಯುವ ಪ್ರಯತ್ನವನ್ನು ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಅವರ ತಂಡ ನ್ಯಾಯಾಂಗ ವ್ಯವಸ್ಥೆಗೆ ಗೌರವ ಕೊಟ್ಟು ಮುಂದುವರಿಯಬೇಕಿತ್ತು. ಆದರೆ ಇದು ಗೊತ್ತಿದ್ದು ಪಾದಯಾತ್ರೆ ನಡೆಸಿ ನ್ಯಾಯಾಂಗ ವ್ಯವಸ್ಥೆಗೆ ಅಗೌರವ ತೋರಿ ಗೊಂದಲ ಸೃಷ್ಟಿಗೆ ಕಾರಣರಾಗಿದ್ದಾರೆ. ಇದಕ್ಕೆ ನಾಡಿನ ಜನರು ಕಾಂಗ್ರೆಸಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ರಾಜಧಾನಿ ಬೆಂಗಳೂರು ಹಾಗೂ ಇತರೆಡೆಗೆ ಅಗತ್ಯವಾಗಿ ಬೇಕಾಗಿರುವ ಕುಡಿಯುವ ನೀರನ್ನು ಒದಗಿಸಿ ಕೊಡುವುದು ರಾಜ್ಯ ಸರಕಾರದ ಜವಾಬ್ದಾರಿ. ಅದನ್ನು ಮಾಡಿಸಲು ನಮ್ಮ ಸರಕಾರ ಬದ್ಧವಾಗಿದೆ. ಮೇಕೆದಾಟು ವಿಚಾರವಾಗಿ ತಮಿಳುನಾಡು ಸರಕಾರ ನ್ಯಾಯಾಲಯದ ಮೆಟ್ಟಿಲೇರಿರುವುದರಿಂದ ಯೋಜನೆ ಜಾರಿಗೆ ತೊಡಕಾಗಿದೆ. ಸಾಧ್ಯವಾದರೆ ಡಿಕೆಶಿ ಮತ್ತವರ ಬಳಗ ತಮಿಳುನಾಡಿಗೆ ಹೋಗಿ ಅಲ್ಲಿನ ಸರಕಾರವನ್ನು ಮನವೊಲಿಸುವ ಕೆಲಸ ಮಾಡಲಿ. ಅದು ಬಿಟ್ಟು ತಮ್ಮ ರಾಜಕೀಯ ಬೇಳೆ ಬೇಯಿಸುವುದಕ್ಕೋಸ್ಕರ ರಾಜ್ಯದ ಜನತೆಯನ್ನು ತಪ್ಪುದಾರಿಗೆ ಎಳೆಯುವ ಪ್ರಯತ್ನ ಮಾಡಬೇಡಿ ಎಂದು ಕಿವಿ ಮಾತು ಹೇಳಿದರು.

ರಾಜ್ಯದಲ್ಲಿ ಕೋವಿಡ್ 19 ಸೋಂಕು ಮೂರನೇ ಅಲೆ ಉಲ್ಭಣಿಸುತ್ತಿರುವ ಸಂದರ್ಭದಲ್ಲಿ ಪಾದಯಾತ್ರೆ ನಡೆಸಿ ಸೋಂಕು ಹೆಚ್ಚಳಕ್ಕೆ ಕಾಂಗ್ರೆಸಿಗರು ನೇರ ಕಾರಣರಾಗಿದ್ದಾರೆ. ಯಾತ್ರೆ ನಡೆಸದಂತೆ ಎಲ್ಲ ಕಡೆಯಿಂದ ಒತ್ತಡ ಇದ್ದರೂ ಅದನ್ನು ಲೆಕ್ಕಿಸದೆ ಮುಂದುವರಿದಿರುವುದು ಅವರಿಗೆ ಈ ನಾಡಿನ ಜನರ ಆರೋಗ್ಯದ ಬಗ್ಗೆ ಇರುವ ಕಾಳಜಿಯನ್ನು ತೋರಿಸುತ್ತದೆ. ಇನ್ನಾದರೂ ಕಾಂಗ್ರೆಸಿಗರು ಮೇಕೆದಾಟು ವಿಚಾರದಲ್ಲಿ ನ್ಯಾಯಾಂಗ ವ್ಯವಸ್ಥೆಯನ್ನು ಗೌರವಿಸಿ ರಾಜ್ಯ ಸರಕಾರದೊಂದಿಗೆ ಸಹಕರಿಸಲಿ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು