2:11 AM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಮೇಕೆದಾಟು ಯೋಜನೆ; ಮಧ್ಯಸ್ಥಿಕೆಗೆ ಕೇಂದ್ರ ಸರಕಾರ ಸಿದ್ಧ: ಸಚಿವ ಗಜೇಂದ್ರ ಸಿಂಗ್ ಶೇಖಾವತ್

06/03/2022, 10:25

ಬೆಂಗಳೂರು(reporterkarnataka.com): ಮೇಕೆದಾಟು ಯೋಜನೆ ಆಗಲಿ ಅನ್ನೋ ಆಶಯ ನಾನು ವ್ಯಕ್ತಪಡಿಸುತ್ತೇನೆ. ಎರಡೂ ರಾಜ್ಯಗಳು ಕೂತು ಮಾತನಾಡಿದರೆ ಯೋಜನೆ ಆರಂಭವಾಗಲಿದೆ. ಇದಕ್ಕೆ ಕೇಂದ್ರ ಸರಕಾರ ಮಧ್ಯಪ್ರವೇಶ ಮಾಡಲು ಸಿದ್ಧವಿದೆ ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ.

ಜಲಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಯೋಜನೆಯ ಕುರಿತ ವಿಚಾರ ಸಂಕಿರಣದಲ್ಲಿ ಭಾಗವಹಿಸಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಇಂದಿನ ಸಭೆಯಲ್ಲಿ ಮೇಕೆದಾಟು ಯೋಜನೆಯ ವಿಚಾರ ಇರಲಿಲ್ಲ. ಹಾಗಾಗಿ ಅದರ ಬಗ್ಗೆ ಚರ್ಚೆ ಮಾಡಿಲ್ಲ, ಈ ಬಗ್ಗೆ ಹೇಳಲು ಸಾಧ್ಯವಿಲ್ಲ. ಜೊತೆಗೆ ಪ್ರಕರಣ ಕೋರ್ಟ್‌ನಲ್ಲಿದೆ. ಹಾಗಾಗಿ ನಾನು ಈ ಕುರಿತು ಮಾತನಾಡುವುದಿಲ್ಲ ಎಂದ ಕೇಂದ್ರ ಸಚಿವರು, ಮೇಕೆದಾಟು ಯೋಜನೆಗೆ ರಾಜ್ಯ ಸರಕಾರ ಬಜೆಟ್‌ನಲ್ಲಿ ಹಣ ಮೀಸಲಿಟ್ಟಿರುವುದಕ್ಕೆ ಪ್ರತಿಕ್ರಿಯಿಸಿ, ಯೋಜನೆ ಆಗಬೇಕೆನ್ನುವುದು ನನ್ನ ಅಪೇಕ್ಷೆಯೂ ಆಗಿದೆ ಎಂದು ತಿಳಿಸಿದರು.

ಕೆನ್ ಬೆತ್ವಾ ನದಿ ಜೋಡಣೆ ಯೋಜನೆಯಲ್ಲಿ ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ರಾಜ್ಯಗಳ ನಡುವೆ ಕೂಡ ಇದೇ ರೀತಿ ಸಮಸ್ಯೆ ಇತ್ತು. ಆದರೆ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಂಡಿದ್ದಾರೆ. ಮೇಕೆದಾಟು ವಿಚಾರದಲ್ಲೂ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲಿ ಎಂದು ಕರ್ನಾಟಕ ಮತ್ತು ತಮಿಳುನಾಡು ಸರಕಾರಗಳಿಗೆ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಸಲಹೆ ನೀಡಿದರು. ಇದೇ ವೇಳೆ ಮಹದಾಯಿ ವಿಚಾರದಲ್ಲೂ ಬೇರೆ ಬೇರೆ ರೀತಿಯ ಸಮಸ್ಯೆ ಇದೆ. ಅದರ ಬಗ್ಗೆ ಕೂಡ ಚರ್ಚೆ ಮಾಡುವುದಿಲ್ಲ ಎಂದರು.

ಕಾಂಗ್ರೆಸ್‌ಗೆ ನೀರಿನ ವಿಚಾರದಲ್ಲಿ ಮಾತನಾಡಲು ಯಾವುದೇ ನೈತಿಕತೆ ಇಲ್ಲ. ಕಳೆದ 55 ವರ್ಷಗಳಿಂದ ಅಧಿಕಾರದಲ್ಲಿದ್ದಾಗ ಸಮಸ್ಯೆ ಬಗೆಹರಿಸುವ ಬಗ್ಗೆ ಅವರು ಯೋಚಿಸಿಲ್ಲ. ಅವರಿಂದಾಗಿಯೇ ಈ ರೀತಿಯ ಸಮಸ್ಯೆಗಳು ಸೃಷ್ಟಿಯಾಗಿವೆ ಎಂದು ಕೇಂದ್ರ ಸಚಿವರು ಟೀಕಿಸಿದರು.

ಈಶಾನ್ಯ ಕರ್ನಾಟಕದಲ್ಲಿ ಕುಡಿಯುವ ನೀರು ಯುರೇನಿಯಂ ಮಿಶ್ರಿತ ಆಗಿರುವುದು ಗಮನಕ್ಕೆ ಬಂದಿದೆ. ಕೂಡಲೇ ಆ ನೀರು ಕುಡಿಯದಂತೆ ಸೂಚಿಸಲಾಗಿದೆ. ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ನೀರು ಶುದ್ಧೀಕರಿಸಿ ಗ್ರಾಮಸ್ಥರಿಗೆ ಪೂರೈಸುವಂತೆ ಸೂಚಿಸಲಾಗಿದೆ ಎಂದು ಕೇಂದ್ರ ಜಲಶಕ್ತಿ ಸಚಿವ ಶೇಖಾವತ್ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು