2:34 PM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಮೇಕೆದಾಟು ಯೋಜನೆಗೆ ಕಾಂಗ್ರೆಸ್‌ ನದ್ದು ಪಾದಯಾತ್ರೆಯಲ್ಲ, ಸುಳ್ಳಿನ ಜಾತ್ರೆ: ಬಿಜೆಪಿ ಟ್ವಿಟ್

08/01/2022, 22:31

ಬೆಂಗಳೂರು(reporterkarnataka.com): ಮೇಕೆದಾಟು ಯೋಜನೆ ಜಾರಿಗಾಗಿ ಕಾಂಗ್ರೆಸ್‌ ನ ನಡೆಸಲುದ್ದೇಶಿಸಿದ ಪಾದಯಾತ್ರೆ ಭಾರೀ ಸದ್ದು ಮಾಡುತ್ತಿದ್ದು, ಆಡಳಿತ ಪಕ್ಷ ಬಿಜೆಪಿ ಕಟುವಾಗಿ ಟೀಕಿಸಿದೆ. ರಾಜ್ಯ ಬಿಜೆಪಿ ಸರಣಿ ಟ್ವೀಟ್‌ ಮೂಲಕ ಟೀಕೆ ಮಾಡಿದೆ.

ಅಂತರ್ ರಾಜ್ಯ ಜಲ ವಿವಾದ ಸಂದರ್ಭದಲ್ಲಿ ವಿವೇಕಯುತ ಹೋರಾಟ ಅಗತ್ಯವಿದೆ ಎಂದು ಇತಿಹಾಸ ಕಲಿತಿಲ್ಲವೇ..? ಈ‌ ಹಿಂದೆ ಕಾವೇರಿ ಪಾದಯಾತ್ರೆ ನಡೆಸಿ ಸುಪ್ರೀಂ ಕೋರ್ಟ್‌ನಿಂದ ಛೀಮಾರಿ ಹಾಕಿಸಿಕೊಂಡ ಘಟನೆ ನೆನಪಿರಬೇಕಲ್ಲವೇ..? ರಾಜಕೀಯಕ್ಕಾಗಿ ರಾಜ್ಯದ ಮರ್ಯಾದೆಯನ್ನೇಕೆ ಹರಾಜು ಹಾಕುತ್ತಿದ್ದೀರಿ..? ಎಂದು ಬಿಜೆಪಿ ಪ್ರಶ್ನಿಸಿದೆ.

ಸಂಘರ್ಷದಿಂದ ವ್ಯಾಜ್ಯ ಗೆಲ್ಲಲು ಸಾಧ್ಯವಿಲ್ಲ. ಕಾಂಗ್ರೆಸ್ಸಿಗರು #ಸುಳ್ಳಿನಜಾತ್ರೆ ಮಾಡುವ ಬದಲು ತಮಿಳುನಾಡಿನಲ್ಲಿ ಅಧಿಕಾರದಲ್ಲಿರುವ ತಮ್ಮ ಮಿತ್ರಪಕ್ಷ ಹಸಿರುಪೀಠದಲ್ಲಿ ಹೂಡಿದ ದಾವೆ ವಾಪಾಸ್ ತೆಗೆಸಲಿ ಎಂದು ಆಗ್ರಹಿಸಿದೆ.

2014 ರಿಂದ 2018 ರ ಅವಧಿಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೇಕೆದಾಟು ವಿಚಾರದಲ್ಲಿ ಎಸಗಿದ ಐತಿಹಾಸಿಕ ಪ್ರಮಾದದಿಂದ ಈಗ ಕಾವೇರಿ ಕಣ್ಣೀರು ಸುರಿಸುವಂತಾಗಿದೆ. ಕೇಂದ್ರದಿಂದ ಒಪ್ಪಿಗೆ ಹಾಗೂ ಅನುದಾನ ಪಡೆಯುವಾಗ ನಿದ್ದೆಗೆ ಜಾರಿ ಈಗ ಪಾದಯಾತ್ರೆಯ ನಾಟಕವಾಡುವುದಕ್ಕೆ ನಾಚಿಕೆಯಾಗುವುದಿಲ್ಲವೆ? ಎನ್ನುವ ಮೂಲಕ ಬಿಜೆಪಿ ಆರೋಪಿಸಿದೆ.

ಮೇಕೆದಾಟು ಯೋಜನೆಗೆ ನಾಳೆಯೇ ಭೂಮಿಪೂಜೆ ನಡೆಸಿ ಎಂದು ಅಬ್ಬರಿಸುತ್ತಿರುವ ಕಾಂಗ್ರೆಸ್ ನಾಯಕರೇ ನಮ್ಮ ಪ್ರಶ್ನೆಗೆ ಉತ್ತರಿಸಿ. ಮೇಕೆದಾಟು ಯೋಜನೆ ಸಂಬಂಧ ಅನಗತ್ಯ ಕಾಲಹರಣ ಮಾಡಿದ್ದು ಯಾರು? ಅಧಿಕಾರದಲ್ಲಿದ್ದಾಗ ಕಡತಯಜ್ಞ ಮಾಡದೆ, ವಿರೋಧ ಪಕ್ಷವಾದಾಗ ಆಂದೋಲನ ನಡೆಸುವುದು ಎಷ್ಟು ಸರಿ..? ಎಂದಿದೆ.

ಅಂತಾರಾಜ್ಯ ಜಲ ವಿವಾದ ಒಂದು ಸೂಕ್ಷ್ಮ ವಿಚಾರ. ಕರ್ನಾಟಕ ಸರ್ಕಾರ ಈ ಸಂಬಂಧ ಎಚ್ಚರಿಕೆ ಹಾಗೂ ವಿವೇಕದ ಹೆಜ್ಜೆ ಇಡುತ್ತಲೇ ಬಂದಿದೆ. ಹಸಿರುಪೀಠದಲ್ಲಿ ಹೂಡಿದ ದಾವೆ ವಾಪಾಸ್ ತೆಗೆಸಲಿ ಎಂದು ಆಗ್ರಹಿಸಿದೆ.

2014 ರಿಂದ 2018 ರ ಅವಧಿಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೇಕೆದಾಟು ವಿಚಾರದಲ್ಲಿ ಎಸಗಿದ ಐತಿಹಾಸಿಕ ಪ್ರಮಾದದಿಂದ ಈಗ ಕಾವೇರಿ ಕಣ್ಣೀರು ಸುರಿಸುವಂತಾಗಿದೆ. ಕೇಂದ್ರದಿಂದ ಒಪ್ಪಿಗೆ ಹಾಗೂ ಅನುದಾನ ಪಡೆಯುವಾಗ ನಿದ್ದೆಗೆ ಜಾರಿ ಈಗ ಪಾದಯಾತ್ರೆಯ ನಾಟಕವಾಡುವುದಕ್ಕೆ ನಾಚಿಕೆಯಾಗುವುದಿಲ್ಲವೆ? ಎನ್ನುವ ಮೂಲಕ ಬಿಜೆಪಿ ಆರೋಪಿಸಿದೆ.

ಮೇಕೆದಾಟು ಯೋಜನೆಗೆ ನಾಳೆಯೇ ಭೂಮಿಪೂಜೆ ನಡೆಸಿ ಎಂದು ಅಬ್ಬರಿಸುತ್ತಿರುವ ಕಾಂಗ್ರೆಸ್ ನಾಯಕರೇ ನಮ್ಮ ಪ್ರಶ್ನೆಗೆ ಉತ್ತರಿಸಿ. ಮೇಕೆದಾಟು ಯೋಜನೆ ಸಂಬಂಧ ಅನಗತ್ಯ ಕಾಲಹರಣ ಮಾಡಿದ್ದು ಯಾರು? ಅಧಿಕಾರದಲ್ಲಿದ್ದಾಗ ಕಡತಯಜ್ಞ ಮಾಡದೆ, ವಿರೋಧ ಪಕ್ಷವಾದಾಗ ಆಂದೋಲನ ನಡೆಸುವುದು ಎಷ್ಟು ಸರಿ..? ಎಂದಿದೆ.

ಅಂತಾರಾಜ್ಯ ಜಲ ವಿವಾದ ಒಂದು ಸೂಕ್ಷ್ಮ ವಿಚಾರ. ಕರ್ನಾಟಕ ಸರ್ಕಾರ ಈ ಸಂಬಂಧ ಎಚ್ಚರಿಕೆ ಹಾಗೂ ವಿವೇಕದ ಹೆಜ್ಜೆ ಇಡುತ್ತಲೇ ಬಂದಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು