2:36 AM Friday20 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ…

ಇತ್ತೀಚಿನ ಸುದ್ದಿ

ಮೇಕೆದಾಟು ಯೋಜನೆಗೆ ಕಾಂಗ್ರೆಸ್‌ ನದ್ದು ಪಾದಯಾತ್ರೆಯಲ್ಲ, ಸುಳ್ಳಿನ ಜಾತ್ರೆ: ಬಿಜೆಪಿ ಟ್ವಿಟ್

08/01/2022, 22:31

ಬೆಂಗಳೂರು(reporterkarnataka.com): ಮೇಕೆದಾಟು ಯೋಜನೆ ಜಾರಿಗಾಗಿ ಕಾಂಗ್ರೆಸ್‌ ನ ನಡೆಸಲುದ್ದೇಶಿಸಿದ ಪಾದಯಾತ್ರೆ ಭಾರೀ ಸದ್ದು ಮಾಡುತ್ತಿದ್ದು, ಆಡಳಿತ ಪಕ್ಷ ಬಿಜೆಪಿ ಕಟುವಾಗಿ ಟೀಕಿಸಿದೆ. ರಾಜ್ಯ ಬಿಜೆಪಿ ಸರಣಿ ಟ್ವೀಟ್‌ ಮೂಲಕ ಟೀಕೆ ಮಾಡಿದೆ.

ಅಂತರ್ ರಾಜ್ಯ ಜಲ ವಿವಾದ ಸಂದರ್ಭದಲ್ಲಿ ವಿವೇಕಯುತ ಹೋರಾಟ ಅಗತ್ಯವಿದೆ ಎಂದು ಇತಿಹಾಸ ಕಲಿತಿಲ್ಲವೇ..? ಈ‌ ಹಿಂದೆ ಕಾವೇರಿ ಪಾದಯಾತ್ರೆ ನಡೆಸಿ ಸುಪ್ರೀಂ ಕೋರ್ಟ್‌ನಿಂದ ಛೀಮಾರಿ ಹಾಕಿಸಿಕೊಂಡ ಘಟನೆ ನೆನಪಿರಬೇಕಲ್ಲವೇ..? ರಾಜಕೀಯಕ್ಕಾಗಿ ರಾಜ್ಯದ ಮರ್ಯಾದೆಯನ್ನೇಕೆ ಹರಾಜು ಹಾಕುತ್ತಿದ್ದೀರಿ..? ಎಂದು ಬಿಜೆಪಿ ಪ್ರಶ್ನಿಸಿದೆ.

ಸಂಘರ್ಷದಿಂದ ವ್ಯಾಜ್ಯ ಗೆಲ್ಲಲು ಸಾಧ್ಯವಿಲ್ಲ. ಕಾಂಗ್ರೆಸ್ಸಿಗರು #ಸುಳ್ಳಿನಜಾತ್ರೆ ಮಾಡುವ ಬದಲು ತಮಿಳುನಾಡಿನಲ್ಲಿ ಅಧಿಕಾರದಲ್ಲಿರುವ ತಮ್ಮ ಮಿತ್ರಪಕ್ಷ ಹಸಿರುಪೀಠದಲ್ಲಿ ಹೂಡಿದ ದಾವೆ ವಾಪಾಸ್ ತೆಗೆಸಲಿ ಎಂದು ಆಗ್ರಹಿಸಿದೆ.

2014 ರಿಂದ 2018 ರ ಅವಧಿಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೇಕೆದಾಟು ವಿಚಾರದಲ್ಲಿ ಎಸಗಿದ ಐತಿಹಾಸಿಕ ಪ್ರಮಾದದಿಂದ ಈಗ ಕಾವೇರಿ ಕಣ್ಣೀರು ಸುರಿಸುವಂತಾಗಿದೆ. ಕೇಂದ್ರದಿಂದ ಒಪ್ಪಿಗೆ ಹಾಗೂ ಅನುದಾನ ಪಡೆಯುವಾಗ ನಿದ್ದೆಗೆ ಜಾರಿ ಈಗ ಪಾದಯಾತ್ರೆಯ ನಾಟಕವಾಡುವುದಕ್ಕೆ ನಾಚಿಕೆಯಾಗುವುದಿಲ್ಲವೆ? ಎನ್ನುವ ಮೂಲಕ ಬಿಜೆಪಿ ಆರೋಪಿಸಿದೆ.

ಮೇಕೆದಾಟು ಯೋಜನೆಗೆ ನಾಳೆಯೇ ಭೂಮಿಪೂಜೆ ನಡೆಸಿ ಎಂದು ಅಬ್ಬರಿಸುತ್ತಿರುವ ಕಾಂಗ್ರೆಸ್ ನಾಯಕರೇ ನಮ್ಮ ಪ್ರಶ್ನೆಗೆ ಉತ್ತರಿಸಿ. ಮೇಕೆದಾಟು ಯೋಜನೆ ಸಂಬಂಧ ಅನಗತ್ಯ ಕಾಲಹರಣ ಮಾಡಿದ್ದು ಯಾರು? ಅಧಿಕಾರದಲ್ಲಿದ್ದಾಗ ಕಡತಯಜ್ಞ ಮಾಡದೆ, ವಿರೋಧ ಪಕ್ಷವಾದಾಗ ಆಂದೋಲನ ನಡೆಸುವುದು ಎಷ್ಟು ಸರಿ..? ಎಂದಿದೆ.

ಅಂತಾರಾಜ್ಯ ಜಲ ವಿವಾದ ಒಂದು ಸೂಕ್ಷ್ಮ ವಿಚಾರ. ಕರ್ನಾಟಕ ಸರ್ಕಾರ ಈ ಸಂಬಂಧ ಎಚ್ಚರಿಕೆ ಹಾಗೂ ವಿವೇಕದ ಹೆಜ್ಜೆ ಇಡುತ್ತಲೇ ಬಂದಿದೆ. ಹಸಿರುಪೀಠದಲ್ಲಿ ಹೂಡಿದ ದಾವೆ ವಾಪಾಸ್ ತೆಗೆಸಲಿ ಎಂದು ಆಗ್ರಹಿಸಿದೆ.

2014 ರಿಂದ 2018 ರ ಅವಧಿಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೇಕೆದಾಟು ವಿಚಾರದಲ್ಲಿ ಎಸಗಿದ ಐತಿಹಾಸಿಕ ಪ್ರಮಾದದಿಂದ ಈಗ ಕಾವೇರಿ ಕಣ್ಣೀರು ಸುರಿಸುವಂತಾಗಿದೆ. ಕೇಂದ್ರದಿಂದ ಒಪ್ಪಿಗೆ ಹಾಗೂ ಅನುದಾನ ಪಡೆಯುವಾಗ ನಿದ್ದೆಗೆ ಜಾರಿ ಈಗ ಪಾದಯಾತ್ರೆಯ ನಾಟಕವಾಡುವುದಕ್ಕೆ ನಾಚಿಕೆಯಾಗುವುದಿಲ್ಲವೆ? ಎನ್ನುವ ಮೂಲಕ ಬಿಜೆಪಿ ಆರೋಪಿಸಿದೆ.

ಮೇಕೆದಾಟು ಯೋಜನೆಗೆ ನಾಳೆಯೇ ಭೂಮಿಪೂಜೆ ನಡೆಸಿ ಎಂದು ಅಬ್ಬರಿಸುತ್ತಿರುವ ಕಾಂಗ್ರೆಸ್ ನಾಯಕರೇ ನಮ್ಮ ಪ್ರಶ್ನೆಗೆ ಉತ್ತರಿಸಿ. ಮೇಕೆದಾಟು ಯೋಜನೆ ಸಂಬಂಧ ಅನಗತ್ಯ ಕಾಲಹರಣ ಮಾಡಿದ್ದು ಯಾರು? ಅಧಿಕಾರದಲ್ಲಿದ್ದಾಗ ಕಡತಯಜ್ಞ ಮಾಡದೆ, ವಿರೋಧ ಪಕ್ಷವಾದಾಗ ಆಂದೋಲನ ನಡೆಸುವುದು ಎಷ್ಟು ಸರಿ..? ಎಂದಿದೆ.

ಅಂತಾರಾಜ್ಯ ಜಲ ವಿವಾದ ಒಂದು ಸೂಕ್ಷ್ಮ ವಿಚಾರ. ಕರ್ನಾಟಕ ಸರ್ಕಾರ ಈ ಸಂಬಂಧ ಎಚ್ಚರಿಕೆ ಹಾಗೂ ವಿವೇಕದ ಹೆಜ್ಜೆ ಇಡುತ್ತಲೇ ಬಂದಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು