12:25 AM Thursday29 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ಮೇಕೆದಾಟು ಯೋಜನೆಗೆ ಕಾಂಗ್ರೆಸ್‌ ನದ್ದು ಪಾದಯಾತ್ರೆಯಲ್ಲ, ಸುಳ್ಳಿನ ಜಾತ್ರೆ: ಬಿಜೆಪಿ ಟ್ವಿಟ್

08/01/2022, 22:31

ಬೆಂಗಳೂರು(reporterkarnataka.com): ಮೇಕೆದಾಟು ಯೋಜನೆ ಜಾರಿಗಾಗಿ ಕಾಂಗ್ರೆಸ್‌ ನ ನಡೆಸಲುದ್ದೇಶಿಸಿದ ಪಾದಯಾತ್ರೆ ಭಾರೀ ಸದ್ದು ಮಾಡುತ್ತಿದ್ದು, ಆಡಳಿತ ಪಕ್ಷ ಬಿಜೆಪಿ ಕಟುವಾಗಿ ಟೀಕಿಸಿದೆ. ರಾಜ್ಯ ಬಿಜೆಪಿ ಸರಣಿ ಟ್ವೀಟ್‌ ಮೂಲಕ ಟೀಕೆ ಮಾಡಿದೆ.

ಅಂತರ್ ರಾಜ್ಯ ಜಲ ವಿವಾದ ಸಂದರ್ಭದಲ್ಲಿ ವಿವೇಕಯುತ ಹೋರಾಟ ಅಗತ್ಯವಿದೆ ಎಂದು ಇತಿಹಾಸ ಕಲಿತಿಲ್ಲವೇ..? ಈ‌ ಹಿಂದೆ ಕಾವೇರಿ ಪಾದಯಾತ್ರೆ ನಡೆಸಿ ಸುಪ್ರೀಂ ಕೋರ್ಟ್‌ನಿಂದ ಛೀಮಾರಿ ಹಾಕಿಸಿಕೊಂಡ ಘಟನೆ ನೆನಪಿರಬೇಕಲ್ಲವೇ..? ರಾಜಕೀಯಕ್ಕಾಗಿ ರಾಜ್ಯದ ಮರ್ಯಾದೆಯನ್ನೇಕೆ ಹರಾಜು ಹಾಕುತ್ತಿದ್ದೀರಿ..? ಎಂದು ಬಿಜೆಪಿ ಪ್ರಶ್ನಿಸಿದೆ.

ಸಂಘರ್ಷದಿಂದ ವ್ಯಾಜ್ಯ ಗೆಲ್ಲಲು ಸಾಧ್ಯವಿಲ್ಲ. ಕಾಂಗ್ರೆಸ್ಸಿಗರು #ಸುಳ್ಳಿನಜಾತ್ರೆ ಮಾಡುವ ಬದಲು ತಮಿಳುನಾಡಿನಲ್ಲಿ ಅಧಿಕಾರದಲ್ಲಿರುವ ತಮ್ಮ ಮಿತ್ರಪಕ್ಷ ಹಸಿರುಪೀಠದಲ್ಲಿ ಹೂಡಿದ ದಾವೆ ವಾಪಾಸ್ ತೆಗೆಸಲಿ ಎಂದು ಆಗ್ರಹಿಸಿದೆ.

2014 ರಿಂದ 2018 ರ ಅವಧಿಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೇಕೆದಾಟು ವಿಚಾರದಲ್ಲಿ ಎಸಗಿದ ಐತಿಹಾಸಿಕ ಪ್ರಮಾದದಿಂದ ಈಗ ಕಾವೇರಿ ಕಣ್ಣೀರು ಸುರಿಸುವಂತಾಗಿದೆ. ಕೇಂದ್ರದಿಂದ ಒಪ್ಪಿಗೆ ಹಾಗೂ ಅನುದಾನ ಪಡೆಯುವಾಗ ನಿದ್ದೆಗೆ ಜಾರಿ ಈಗ ಪಾದಯಾತ್ರೆಯ ನಾಟಕವಾಡುವುದಕ್ಕೆ ನಾಚಿಕೆಯಾಗುವುದಿಲ್ಲವೆ? ಎನ್ನುವ ಮೂಲಕ ಬಿಜೆಪಿ ಆರೋಪಿಸಿದೆ.

ಮೇಕೆದಾಟು ಯೋಜನೆಗೆ ನಾಳೆಯೇ ಭೂಮಿಪೂಜೆ ನಡೆಸಿ ಎಂದು ಅಬ್ಬರಿಸುತ್ತಿರುವ ಕಾಂಗ್ರೆಸ್ ನಾಯಕರೇ ನಮ್ಮ ಪ್ರಶ್ನೆಗೆ ಉತ್ತರಿಸಿ. ಮೇಕೆದಾಟು ಯೋಜನೆ ಸಂಬಂಧ ಅನಗತ್ಯ ಕಾಲಹರಣ ಮಾಡಿದ್ದು ಯಾರು? ಅಧಿಕಾರದಲ್ಲಿದ್ದಾಗ ಕಡತಯಜ್ಞ ಮಾಡದೆ, ವಿರೋಧ ಪಕ್ಷವಾದಾಗ ಆಂದೋಲನ ನಡೆಸುವುದು ಎಷ್ಟು ಸರಿ..? ಎಂದಿದೆ.

ಅಂತಾರಾಜ್ಯ ಜಲ ವಿವಾದ ಒಂದು ಸೂಕ್ಷ್ಮ ವಿಚಾರ. ಕರ್ನಾಟಕ ಸರ್ಕಾರ ಈ ಸಂಬಂಧ ಎಚ್ಚರಿಕೆ ಹಾಗೂ ವಿವೇಕದ ಹೆಜ್ಜೆ ಇಡುತ್ತಲೇ ಬಂದಿದೆ. ಹಸಿರುಪೀಠದಲ್ಲಿ ಹೂಡಿದ ದಾವೆ ವಾಪಾಸ್ ತೆಗೆಸಲಿ ಎಂದು ಆಗ್ರಹಿಸಿದೆ.

2014 ರಿಂದ 2018 ರ ಅವಧಿಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೇಕೆದಾಟು ವಿಚಾರದಲ್ಲಿ ಎಸಗಿದ ಐತಿಹಾಸಿಕ ಪ್ರಮಾದದಿಂದ ಈಗ ಕಾವೇರಿ ಕಣ್ಣೀರು ಸುರಿಸುವಂತಾಗಿದೆ. ಕೇಂದ್ರದಿಂದ ಒಪ್ಪಿಗೆ ಹಾಗೂ ಅನುದಾನ ಪಡೆಯುವಾಗ ನಿದ್ದೆಗೆ ಜಾರಿ ಈಗ ಪಾದಯಾತ್ರೆಯ ನಾಟಕವಾಡುವುದಕ್ಕೆ ನಾಚಿಕೆಯಾಗುವುದಿಲ್ಲವೆ? ಎನ್ನುವ ಮೂಲಕ ಬಿಜೆಪಿ ಆರೋಪಿಸಿದೆ.

ಮೇಕೆದಾಟು ಯೋಜನೆಗೆ ನಾಳೆಯೇ ಭೂಮಿಪೂಜೆ ನಡೆಸಿ ಎಂದು ಅಬ್ಬರಿಸುತ್ತಿರುವ ಕಾಂಗ್ರೆಸ್ ನಾಯಕರೇ ನಮ್ಮ ಪ್ರಶ್ನೆಗೆ ಉತ್ತರಿಸಿ. ಮೇಕೆದಾಟು ಯೋಜನೆ ಸಂಬಂಧ ಅನಗತ್ಯ ಕಾಲಹರಣ ಮಾಡಿದ್ದು ಯಾರು? ಅಧಿಕಾರದಲ್ಲಿದ್ದಾಗ ಕಡತಯಜ್ಞ ಮಾಡದೆ, ವಿರೋಧ ಪಕ್ಷವಾದಾಗ ಆಂದೋಲನ ನಡೆಸುವುದು ಎಷ್ಟು ಸರಿ..? ಎಂದಿದೆ.

ಅಂತಾರಾಜ್ಯ ಜಲ ವಿವಾದ ಒಂದು ಸೂಕ್ಷ್ಮ ವಿಚಾರ. ಕರ್ನಾಟಕ ಸರ್ಕಾರ ಈ ಸಂಬಂಧ ಎಚ್ಚರಿಕೆ ಹಾಗೂ ವಿವೇಕದ ಹೆಜ್ಜೆ ಇಡುತ್ತಲೇ ಬಂದಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು