6:06 AM Tuesday30 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

ಮೇಕೇರಿ ದೇವಸ್ಥಾನದಲ್ಲಿ ಸಂಭ್ರಮ- ಸಡಗರದ ಶಿವರಾತ್ರಿ ಮಹೋತ್ಸವ: ಶಂಖನಾದದೊಂದಿಗೆ ಹೊರೆ ಕಾಣಿಕೆ ಸಮರ್ಪಣೆ

20/02/2023, 01:04

ಮಡಿಕೇರಿ(reporterkarnataka.com): ಇಲ್ಲಿಗೆ ಸಮೀಪದ ಮೇಕೇರಿ ಗ್ರಾಮದ ಶ್ರೀ ಗೌರೀಶಂಕರ ದೇವಾಲಯದಲ್ಲಿ ಶನಿವಾರ ಶಿವರಾತ್ರಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು.
ಶನಿವಾರ ಬೆಳಗ್ಗೆ ಗ್ರಾಮದ ಸುಭಾಶ್ ನಗರ, ಕಾವೇರಿಬಡಾವಣೆ, ಶಕ್ತಿನಗರ, ಬಿಳಿಗೇರಿ ಜಂಕ್ಷನ್ ನ್ ಹೀಗೆ ನಾಲ್ಕು ದಿಕ್ಕುಗಳಿಂದ ಚಂಡೆ, ವಾದ್ಯ, ಶಂಖನಾದದೊಂದಿಗೆ ಏಕಕಾಲಕ್ಕೆ ಹೊರೆಕಾಣಿಕೆಯನ್ನು ದೇವಾಲಯಕ್ಕೆ ತಂದು ಶಿವಾರ್ಪಣೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಉಷಾಪೇಜೆ, ಮಾಹಾ ಮೃತ್ಯುಂಜಯ ಹೋಮ, ರುದ್ರಾಭಿಷೇಕ, ಮಹಾಪೂಜೆ ನಡೆದು ಮಧ್ಯಾಹ್ನ ಅನ್ಮ ಸಂತರ್ಪಣೆ ನಡೆಯಿತು.
ಶನಿವಾರ ರಾತ್ರಿ ಶಾಸಕ ಕೆ.ಜಿ.ಬೋಪಯ್ಯ ಅವರು ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.


ಸಾಂಸ್ಕ್ರತಿಕ ಕಾರ್ಯಕ್ರಮ: ಶಿವರಾತ್ರಿ ಪ್ರಯುಕ್ತ ಶ್ರೀ ಗೌರೀಶಂಕರ ಕಲಾ ವೇದಿಕೆ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮದ ಮಕ್ಕಳಿಂದ ಮತ್ತು ಮೂರ್ನಾಡಿನ ಭಾರತೀಯ ನೃತ್ಯಶಾಲೆಯ ತಂಡದ ನೃತ್ಯಗಳು ಸಭಿಕರ ಮನಸೂರೆಗೊಂಡವು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಜಿತಿನ್ ನಿರೂಪಿಸಿದರು.
ನಂತರ ರಾತ್ರಿ ಶಿವರಾತ್ರಿ ಜಾಗರಣೆಗಾಗಿ ಸುಳ್ಯದ ಯುವಕ ಯಕ್ಷಗಾನ ಕಲಾರಂಗದಿಂದ ಯಕ್ಷ-ಗಾನ-ನಾಟ್ಯ-ವೈಭವ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು