8:11 PM Friday30 - January 2026
ಬ್ರೇಕಿಂಗ್ ನ್ಯೂಸ್
ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್

ಇತ್ತೀಚಿನ ಸುದ್ದಿ

ಮೇಕೇರಿ ಶ್ರೀ ಗೌರಿಶಂಕರ ದೇವಾಲಯದಲ್ಲಿ ವಿಜ್ರಂಭಣೆಯ ಮಹಾಶಿವರಾತ್ರಿ: 8 ದಿಕ್ಕುಗಳಿಂದ ಹೊರೆ ಕಾಣಿಕೆ ಸಮರ್ಪಣೆ

09/03/2024, 12:24

ಮಡಿಕೇರಿ(reporterkarnataka.com): ಇಲ್ಲಿಗೆ ಸಮೀಪದ ಮೇಕೇರಿಯ ಶ್ರೀ ಗೌರಿಶಂಕರ ದೇವಾಲಯದಲ್ಲಿ ಮಹಾ ಶಿವರಾತ್ರಿ ಆಚರಣೆ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ವಿಜ್ರಂಭಣೆಯಿಂದ ಜರುಗಿತು. ಶಿವರಾತ್ರಿ ಹಿನ್ನೆಲೆ ದೇವಾಲಯದಲ್ಲಿ ಬೆಳಗ್ಗಿನಿಂದಲೇ ವಿಶೇಷ ಪುಜಾ ಕೈಂಕರ್ಯಗಳು ನೆರವೇರಿತು.


ಗ್ರಾಮದ 8 ದಿಕ್ಕುಗಳಿಂದ ಈಶ್ವರ ಆರಾಧನೆಯ ವಿಶೇಷ ಸೇವೆಯಾಗಿ ಹೊರೆ ಕಾಣಿಕೆ ಮೆರವಣಿಗೆ ಆಕರ್ಷಣಿಯವಾಗಿ ನಡೆಯಿತು. ಗ್ರಾಮದ 8 ದಿಕ್ಕುಗಳಿಂದ ಮಹಿಳೆಯರು ಬರಿಗಾಲಿನಲ್ಲಿ ಹೊರೆಕಾಣಿಕೆಯ ಬುಟ್ಟಿಯನ್ನು ತಲೆಯ ಮೇಲೆ ಹೊತ್ತು ಅಕ್ಕಿ, ದೀಪದ ಎಣ್ಣೆ, ಅಡುಣೆ ಎಣ್ಣೆ, ವಿವಿಧ ಬಗೆಯ ತರಕಾರಿ, ಹೂವು, ಹಣ್ಣುಗಳು ಸೇರಿದಂತೆ ವಿವಿಧ ಸಾಮಾಗ್ರಿಗಳನ್ನು ಈಶ್ವರನಿಗೆ ಅರ್ಪಿಸಿದ್ದು ವಿಶೇಷವಾಗಿತ್ತು. ಚಂಡೆಮೇಳದೊಂದಿಗೆ ನಡೆಯುವ ಈ ಮೆರವಣಿಗೆಯಲ್ಲಿ ಗ್ರಾಮದ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು.
ಮಹಾ ಶಿವರಾತ್ರಿ ಆಚರಣೆ ಅಂಗವಾಗಿ ದೇವಾಲಯಲ್ಲಿ ಬೆಳಗ್ಗಿನಿಂದಲೇ ಗಣಪತಿ ಹೋಮ, ಈಶ್ವರನಿಗೆ ರುದ್ರಾಭಿಷೇಕ, ಮಹಾ ಮೃತ್ಯುಂಜಯ ಹೋಮ ನಡೆಯಿತು. ದೇವಾಲಯದ ಅರ್ಚಕರಾದ ಕೃಷ್ಣ ಭಟ್ ಮತ್ತು ಮಡಿಕೇರಿಯ ರಾಧಾಕೃಷ್ಣ ಭಟ್ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನೆರವೇರಿದವು. ಮಧ್ಯಾಹ್ನ ಮಹಾಪೂಜೆಯ ನಂತರ ನೆರೆದಿದ್ದ ಸಹಸ್ರಾರು ಭಕ್ತರಿಗೆ ಅನ್ನದಾನ ನೆರವೇರಿತು. ಶಿವರಾತ್ರಿ ಜಾಗರಣೆಯ ಅಂಗವಾಗಿ ಸ್ಥಳೀಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ ಪೌರಾಣಿಕ ಯಕ್ಷಗಾನ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು