8:25 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಮೇಲಿನಕುರುವಳ್ಳಿ ನ್ಯಾಯಬೆಲೆ ಅಂಗಡಿ ಸಿಬ್ಬಂದಿಗಳ ದರ್ಪ !: ಪಡಿತರ ಅಕ್ಕಿಯನ್ನು ಫಲಾನುಭವಿಗಳೇ ಹಾಕಿಕೊಳ್ಳಬೇಕಂತೆ! ಇದ್ಯಾವ ಕಾನೂನು?

22/09/2024, 20:57

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕಿನ ಅತೀ ದೊಡ್ಡ ಗ್ರಾಮಪಂಚಾಯಿತಿಯಾಗಿರುವ ಮೇಲಿನಕುರುವಳ್ಳಿಯಲ್ಲಿರುವ ಹರಿಜನ ಗಿರಿಜನ ಕಲ್ಲುಕುಟಿಕರ ಸಂಘದ ಕಟ್ಟಡದಲ್ಲಿರುವ ಪಡಿತರ ನ್ಯಾಯಬೆಲೆ ಅಂಗಡಿಯಲ್ಲಿ ನೀಡುವ ಅಕ್ಕಿಯನ್ನು ಸಾರ್ವಜನಿಕರೇ ತುಂಬಿಸಿಕೊಳ್ಳಬೇಕಂತೆ. ಕೇಳಿದರೆ ದರ್ಪದ ಮಾತುಗಳನ್ನು ಅಲ್ಲಿನ ಸಿಬ್ಬಂದಿಗಳು ಆಡುತ್ತಾರೆ.
ಹೌದು,ಸರ್ಕಾರ ನೀಡುವ ಅಕ್ಕಿಯನ್ನು ಸಾರ್ವಜನಿಕರೇ ಹಾಕಿಕೊಳ್ಳಬೇಕಂತೆ, ಇದನ್ನು ಪ್ರೆಶ್ನೆ ಮಾಡಿದಕ್ಕೆ ಅಕ್ಕಿ ಸರಿ ಇಲ್ಲ ಎಂದು ಹೇಳುತ್ತೀರಾ? ನಿಮಗೆ ಯಾವ ಅಕ್ಕಿ ಬೇಕೋ ಅದನ್ನು ಹಾಕಿಕೊಳ್ಳಿ ನಾನು ತೂಕ ಮಾಡಿ ಕೊಡುತ್ತೇನೆ ಎಂದು ಅಲ್ಲಿನ ಸಿಬ್ಬಂದಿಯೊಬ್ಬರು ಅತ್ಯಂತ ದರ್ಪದಿಂದ ಮಾತನಾಡುತ್ತಾರೆ. ಅಕ್ಕಿಯನ್ನು ಚೀಲದಿಂದ ನೆಲಕ್ಕೆ ಸುರಿದು ಹಾಕಿದ್ದು ಅದರಲ್ಲಿ ಇಲಿ ಪಿಕ್ಕಿ ಸೇರಿ ಇತರ ಕಸ ಇದ್ದು ಅದನ್ನು ನೋಡಿದವರು ಬೇರೆ ಅಕ್ಕಿ ಕೊಡಿ ಎನ್ನುವುದು ಸಹಜ. ಆದರೆ ಅಲ್ಲಿನ ಸಿಬ್ಬಂದಿಯೊಬ್ಬರು ನಿಮಗೆ ಬೇಕಾದ ಅಕ್ಕಿ ನೀವೇ ಹಾಕಿಕೊಳ್ಳಿ ಎಂದು ನ್ಯಾಯಬೆಲೆ ಅಂಗಡಿಗೆ ಬರುವ ಪಡಿತರ ಪಲಾನುಭವಿಗಳಿಗೆ ಸಾರ್ವಜನಿಕರಿಗೆ ದರ್ಪದಿಂದ ಹೇಳುತ್ತಾರೆ ಎಂದು ಅನೇಕ ಪಲಾನುಭವಿಗಳು ದೂರಿದ್ದಾರೆ.

ಸಿಬ್ಬಂದಿಗಳ ಕೊರತೆ ಇದ್ದರೆ ಮತ್ತೊರ್ವ ಪುರುಷ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಬೇಕು ಅದನ್ನು ಬಿಟ್ಟು ನ್ಯಾಯ ಬೆಲೆ ಅಂಗಡಿಗೆ ಬಂದಂತಹ ಪಡಿತರ ಫಲಾನುಭವಿಗಳಿಗೆ ದರ್ಪದಿಂದ ಮಾತನಾಡುವುದು ಪ್ರಶ್ನೆ ಮಾಡಿದರೆ ಅಕ್ಕಿ ಸರಿ ಇಲ್ಲ ಎನ್ನುತ್ತಾರೆ ಎಂದು ಸಾರ್ವಜನಿಕರನ್ನೇ ದೂರುವುದು ನ್ಯಾಯವೇ? ಈ ಹಿಂದೆಯೂ ಕೂಡ ಇದೆ ನ್ಯಾಯಬೆಲೆ ಅಂಗಡಿಯಲ್ಲಿ ಸಿಬ್ಬಂದಿಗಳು ದರ್ಪದ ಮಾತುಗಳನ್ನಾಡಿದ ದೂರುಗಳು ಕೇಳಿ ಬಂದಿತ್ತು ಎಂದು ಸಾರ್ವಜನಿಕವಾಗಿ ಮಾತು ಕೇಳಿ ಬರುತ್ತಿದೆ. ಇದರ ಬಗ್ಗೆ ಆಹಾರ ನಿರೀಕ್ಷಕರು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ಅನೇಕ ಸಾರ್ವಜನಿಕರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು