9:13 PM Saturday27 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್…

ಇತ್ತೀಚಿನ ಸುದ್ದಿ

ಮೇಲಿನಕುರುವಳ್ಳಿ ನ್ಯಾಯಬೆಲೆ ಅಂಗಡಿ ಸಿಬ್ಬಂದಿಗಳ ದರ್ಪ !: ಪಡಿತರ ಅಕ್ಕಿಯನ್ನು ಫಲಾನುಭವಿಗಳೇ ಹಾಕಿಕೊಳ್ಳಬೇಕಂತೆ! ಇದ್ಯಾವ ಕಾನೂನು?

22/09/2024, 20:57

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕಿನ ಅತೀ ದೊಡ್ಡ ಗ್ರಾಮಪಂಚಾಯಿತಿಯಾಗಿರುವ ಮೇಲಿನಕುರುವಳ್ಳಿಯಲ್ಲಿರುವ ಹರಿಜನ ಗಿರಿಜನ ಕಲ್ಲುಕುಟಿಕರ ಸಂಘದ ಕಟ್ಟಡದಲ್ಲಿರುವ ಪಡಿತರ ನ್ಯಾಯಬೆಲೆ ಅಂಗಡಿಯಲ್ಲಿ ನೀಡುವ ಅಕ್ಕಿಯನ್ನು ಸಾರ್ವಜನಿಕರೇ ತುಂಬಿಸಿಕೊಳ್ಳಬೇಕಂತೆ. ಕೇಳಿದರೆ ದರ್ಪದ ಮಾತುಗಳನ್ನು ಅಲ್ಲಿನ ಸಿಬ್ಬಂದಿಗಳು ಆಡುತ್ತಾರೆ.
ಹೌದು,ಸರ್ಕಾರ ನೀಡುವ ಅಕ್ಕಿಯನ್ನು ಸಾರ್ವಜನಿಕರೇ ಹಾಕಿಕೊಳ್ಳಬೇಕಂತೆ, ಇದನ್ನು ಪ್ರೆಶ್ನೆ ಮಾಡಿದಕ್ಕೆ ಅಕ್ಕಿ ಸರಿ ಇಲ್ಲ ಎಂದು ಹೇಳುತ್ತೀರಾ? ನಿಮಗೆ ಯಾವ ಅಕ್ಕಿ ಬೇಕೋ ಅದನ್ನು ಹಾಕಿಕೊಳ್ಳಿ ನಾನು ತೂಕ ಮಾಡಿ ಕೊಡುತ್ತೇನೆ ಎಂದು ಅಲ್ಲಿನ ಸಿಬ್ಬಂದಿಯೊಬ್ಬರು ಅತ್ಯಂತ ದರ್ಪದಿಂದ ಮಾತನಾಡುತ್ತಾರೆ. ಅಕ್ಕಿಯನ್ನು ಚೀಲದಿಂದ ನೆಲಕ್ಕೆ ಸುರಿದು ಹಾಕಿದ್ದು ಅದರಲ್ಲಿ ಇಲಿ ಪಿಕ್ಕಿ ಸೇರಿ ಇತರ ಕಸ ಇದ್ದು ಅದನ್ನು ನೋಡಿದವರು ಬೇರೆ ಅಕ್ಕಿ ಕೊಡಿ ಎನ್ನುವುದು ಸಹಜ. ಆದರೆ ಅಲ್ಲಿನ ಸಿಬ್ಬಂದಿಯೊಬ್ಬರು ನಿಮಗೆ ಬೇಕಾದ ಅಕ್ಕಿ ನೀವೇ ಹಾಕಿಕೊಳ್ಳಿ ಎಂದು ನ್ಯಾಯಬೆಲೆ ಅಂಗಡಿಗೆ ಬರುವ ಪಡಿತರ ಪಲಾನುಭವಿಗಳಿಗೆ ಸಾರ್ವಜನಿಕರಿಗೆ ದರ್ಪದಿಂದ ಹೇಳುತ್ತಾರೆ ಎಂದು ಅನೇಕ ಪಲಾನುಭವಿಗಳು ದೂರಿದ್ದಾರೆ.

ಸಿಬ್ಬಂದಿಗಳ ಕೊರತೆ ಇದ್ದರೆ ಮತ್ತೊರ್ವ ಪುರುಷ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಬೇಕು ಅದನ್ನು ಬಿಟ್ಟು ನ್ಯಾಯ ಬೆಲೆ ಅಂಗಡಿಗೆ ಬಂದಂತಹ ಪಡಿತರ ಫಲಾನುಭವಿಗಳಿಗೆ ದರ್ಪದಿಂದ ಮಾತನಾಡುವುದು ಪ್ರಶ್ನೆ ಮಾಡಿದರೆ ಅಕ್ಕಿ ಸರಿ ಇಲ್ಲ ಎನ್ನುತ್ತಾರೆ ಎಂದು ಸಾರ್ವಜನಿಕರನ್ನೇ ದೂರುವುದು ನ್ಯಾಯವೇ? ಈ ಹಿಂದೆಯೂ ಕೂಡ ಇದೆ ನ್ಯಾಯಬೆಲೆ ಅಂಗಡಿಯಲ್ಲಿ ಸಿಬ್ಬಂದಿಗಳು ದರ್ಪದ ಮಾತುಗಳನ್ನಾಡಿದ ದೂರುಗಳು ಕೇಳಿ ಬಂದಿತ್ತು ಎಂದು ಸಾರ್ವಜನಿಕವಾಗಿ ಮಾತು ಕೇಳಿ ಬರುತ್ತಿದೆ. ಇದರ ಬಗ್ಗೆ ಆಹಾರ ನಿರೀಕ್ಷಕರು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ಅನೇಕ ಸಾರ್ವಜನಿಕರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು