6:38 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಮೆಣಸಿನ ಕಾಯಿ ಸಸಿಗೆ ಸಿಂಪಡಿಸುವ ಎಣ್ಣೆಯಲ್ಲಿ ಮೋಸ: ಮಾನ್ವಿ ಸಹಾಯಕ ಕೃಷಿ ನಿರ್ದೇಶಕರಿಗೆ ರೈತ ಸಂಘ ದೂರು

10/11/2021, 15:32

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು,
info.reporterkarnataka@gmail.com

ಜಿಲ್ಲೆಯ ಸಿರಿವಾರ ತಾಲೂಕಿನ ಪಟಕನದೊಡ್ಡಿ ಗ್ರಾಮದ ರೈತ ಮಾನ್ವಿಯ ವೆಂಟಕ ಸಾಯಿ ಟೆಂಡರ್ಸ್ ಎಂಬ ಅಂಗಡಿಯಿಂದ ಖರೀದಿಸಿದ
ಮೆಣಸಿನಕಾಯಿ ಸಸಿಗೆ ಸಿಂಪಣಿ ಮಾಡುವ ಎಣ್ಣಿಯಿಂದ ಎರಡೇ ದಿನಗಳಲ್ಲಿ ಮೆಣಸಿನ ಸಸಿ ಸಂಪೂರ್ಣ ಸುಟ್ಟು ಹೋಗಿದ್ದು, ರೈತ ಕಂಗಾಲಾಗಿದ್ದಾರೆ.

ಈ ವಿಷಯವನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ರೂಪ ಶ್ರೀನಿವಾಸ್ ನಾಯಕ್ ಅವರಿಗೆ ತಿಳಿಸಿದ್ದು, ಅವರು

ಬುಧವಾರ ಮಾನ್ವಿ ಸಹಾಯಕ ಕೃಷಿ ನಿರ್ದೇಶಕ ಕಾರ್ಯಾಲಯಕ್ಕೆ ಭೇಟಿ ನೀಡಿ ಸಮಸ್ಯೆಯನ್ನು ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

ನಂತರ ಅಧಿಕಾರಿಗಳು ಟ್ರೇಡರ್ಸ ಅಂಗಡಿ ಮಾಲೀಕ ಮಾರುವ ಎಣ್ಣೆ ಹೆಸರು (Foshion power & stany microFood) ತಕ್ಷಣ ರದ್ದುಪಡಿಸಿದ್ದಾರೆ. 

ಅಂಗಡಿಯಲ್ಲಿ ಮಾರಾಟ ಮಾಡುವ ಎಲ್ಲ ವಸ್ತುಗಳ ಪರಿಶೀಲನೆ ನಡೆಸಬೇಕು, ಅಂಗಡಿಯ ಪರವಾನಗಿ ರದ್ದುಪಡಿಸಬೇಕು ಮತ್ತು ಸಂತ್ರಸ್ತ ರೈತನಿಗೆ ಪರಿಹಾರ ನೀಡಬೇಕೆಂದು ರೂಪಾ ಶ್ರೀನಿವಾಸ ನಾಯಕ್ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯ ಸಂಚಾಲಕಿ ಉಮಾದೇವಿ ನಾಯಕ್, ಮಾನ್ವಿ ತಾಲೂಕು ಅಧ್ಯಕ್ಷ ಬಸವರಾಜ್, ಸಿರಿವಾರ ತಾಲೂಕು ಅಧ್ಯಕ್ಷ ನಾಗರಾಜ್, ಮರಿಲಿಂಗ ಪಾಟೀಲ್, ಉಪಾಧ್ಯಕ್ಷರಾದ ವಿರೇಶ್, ಶಾಮು, ಇನ್ನು ಇತರ ರೈತ ಮುಖಂಡರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು