3:34 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಮೆಣಸಿನ ಕಾಯಿ ಸಸಿಗೆ ಸಿಂಪಡಿಸುವ ಎಣ್ಣೆಯಲ್ಲಿ ಮೋಸ: ಮಾನ್ವಿ ಸಹಾಯಕ ಕೃಷಿ ನಿರ್ದೇಶಕರಿಗೆ ರೈತ ಸಂಘ ದೂರು

10/11/2021, 15:32

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು,
info.reporterkarnataka@gmail.com

ಜಿಲ್ಲೆಯ ಸಿರಿವಾರ ತಾಲೂಕಿನ ಪಟಕನದೊಡ್ಡಿ ಗ್ರಾಮದ ರೈತ ಮಾನ್ವಿಯ ವೆಂಟಕ ಸಾಯಿ ಟೆಂಡರ್ಸ್ ಎಂಬ ಅಂಗಡಿಯಿಂದ ಖರೀದಿಸಿದ
ಮೆಣಸಿನಕಾಯಿ ಸಸಿಗೆ ಸಿಂಪಣಿ ಮಾಡುವ ಎಣ್ಣಿಯಿಂದ ಎರಡೇ ದಿನಗಳಲ್ಲಿ ಮೆಣಸಿನ ಸಸಿ ಸಂಪೂರ್ಣ ಸುಟ್ಟು ಹೋಗಿದ್ದು, ರೈತ ಕಂಗಾಲಾಗಿದ್ದಾರೆ.

ಈ ವಿಷಯವನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ರೂಪ ಶ್ರೀನಿವಾಸ್ ನಾಯಕ್ ಅವರಿಗೆ ತಿಳಿಸಿದ್ದು, ಅವರು

ಬುಧವಾರ ಮಾನ್ವಿ ಸಹಾಯಕ ಕೃಷಿ ನಿರ್ದೇಶಕ ಕಾರ್ಯಾಲಯಕ್ಕೆ ಭೇಟಿ ನೀಡಿ ಸಮಸ್ಯೆಯನ್ನು ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

ನಂತರ ಅಧಿಕಾರಿಗಳು ಟ್ರೇಡರ್ಸ ಅಂಗಡಿ ಮಾಲೀಕ ಮಾರುವ ಎಣ್ಣೆ ಹೆಸರು (Foshion power & stany microFood) ತಕ್ಷಣ ರದ್ದುಪಡಿಸಿದ್ದಾರೆ. 

ಅಂಗಡಿಯಲ್ಲಿ ಮಾರಾಟ ಮಾಡುವ ಎಲ್ಲ ವಸ್ತುಗಳ ಪರಿಶೀಲನೆ ನಡೆಸಬೇಕು, ಅಂಗಡಿಯ ಪರವಾನಗಿ ರದ್ದುಪಡಿಸಬೇಕು ಮತ್ತು ಸಂತ್ರಸ್ತ ರೈತನಿಗೆ ಪರಿಹಾರ ನೀಡಬೇಕೆಂದು ರೂಪಾ ಶ್ರೀನಿವಾಸ ನಾಯಕ್ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯ ಸಂಚಾಲಕಿ ಉಮಾದೇವಿ ನಾಯಕ್, ಮಾನ್ವಿ ತಾಲೂಕು ಅಧ್ಯಕ್ಷ ಬಸವರಾಜ್, ಸಿರಿವಾರ ತಾಲೂಕು ಅಧ್ಯಕ್ಷ ನಾಗರಾಜ್, ಮರಿಲಿಂಗ ಪಾಟೀಲ್, ಉಪಾಧ್ಯಕ್ಷರಾದ ವಿರೇಶ್, ಶಾಮು, ಇನ್ನು ಇತರ ರೈತ ಮುಖಂಡರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು