2:34 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ಮೆಣಸಿನ ಕಾಯಿ ಸಸಿಗೆ ಸಿಂಪಡಿಸುವ ಎಣ್ಣೆಯಲ್ಲಿ ಮೋಸ: ಮಾನ್ವಿ ಸಹಾಯಕ ಕೃಷಿ ನಿರ್ದೇಶಕರಿಗೆ ರೈತ ಸಂಘ ದೂರು

10/11/2021, 15:32

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು,
info.reporterkarnataka@gmail.com

ಜಿಲ್ಲೆಯ ಸಿರಿವಾರ ತಾಲೂಕಿನ ಪಟಕನದೊಡ್ಡಿ ಗ್ರಾಮದ ರೈತ ಮಾನ್ವಿಯ ವೆಂಟಕ ಸಾಯಿ ಟೆಂಡರ್ಸ್ ಎಂಬ ಅಂಗಡಿಯಿಂದ ಖರೀದಿಸಿದ
ಮೆಣಸಿನಕಾಯಿ ಸಸಿಗೆ ಸಿಂಪಣಿ ಮಾಡುವ ಎಣ್ಣಿಯಿಂದ ಎರಡೇ ದಿನಗಳಲ್ಲಿ ಮೆಣಸಿನ ಸಸಿ ಸಂಪೂರ್ಣ ಸುಟ್ಟು ಹೋಗಿದ್ದು, ರೈತ ಕಂಗಾಲಾಗಿದ್ದಾರೆ.

ಈ ವಿಷಯವನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ರೂಪ ಶ್ರೀನಿವಾಸ್ ನಾಯಕ್ ಅವರಿಗೆ ತಿಳಿಸಿದ್ದು, ಅವರು

ಬುಧವಾರ ಮಾನ್ವಿ ಸಹಾಯಕ ಕೃಷಿ ನಿರ್ದೇಶಕ ಕಾರ್ಯಾಲಯಕ್ಕೆ ಭೇಟಿ ನೀಡಿ ಸಮಸ್ಯೆಯನ್ನು ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

ನಂತರ ಅಧಿಕಾರಿಗಳು ಟ್ರೇಡರ್ಸ ಅಂಗಡಿ ಮಾಲೀಕ ಮಾರುವ ಎಣ್ಣೆ ಹೆಸರು (Foshion power & stany microFood) ತಕ್ಷಣ ರದ್ದುಪಡಿಸಿದ್ದಾರೆ. 

ಅಂಗಡಿಯಲ್ಲಿ ಮಾರಾಟ ಮಾಡುವ ಎಲ್ಲ ವಸ್ತುಗಳ ಪರಿಶೀಲನೆ ನಡೆಸಬೇಕು, ಅಂಗಡಿಯ ಪರವಾನಗಿ ರದ್ದುಪಡಿಸಬೇಕು ಮತ್ತು ಸಂತ್ರಸ್ತ ರೈತನಿಗೆ ಪರಿಹಾರ ನೀಡಬೇಕೆಂದು ರೂಪಾ ಶ್ರೀನಿವಾಸ ನಾಯಕ್ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯ ಸಂಚಾಲಕಿ ಉಮಾದೇವಿ ನಾಯಕ್, ಮಾನ್ವಿ ತಾಲೂಕು ಅಧ್ಯಕ್ಷ ಬಸವರಾಜ್, ಸಿರಿವಾರ ತಾಲೂಕು ಅಧ್ಯಕ್ಷ ನಾಗರಾಜ್, ಮರಿಲಿಂಗ ಪಾಟೀಲ್, ಉಪಾಧ್ಯಕ್ಷರಾದ ವಿರೇಶ್, ಶಾಮು, ಇನ್ನು ಇತರ ರೈತ ಮುಖಂಡರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು