9:33 AM Tuesday3 - February 2026
ಬ್ರೇಕಿಂಗ್ ನ್ಯೂಸ್
ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ

ಇತ್ತೀಚಿನ ಸುದ್ದಿ

ಋತುಚಕ್ರ ರಜೆ ನೀತಿ | ರಾಜ್ಯ ಸರಕಾರದ ಕ್ರಮ ಅಭಿನಂದನೀಯ: ಪದ್ಮರಾಜ್ ಆರ್. ಪೂಜಾರಿ

09/10/2025, 19:03

ಮಂಗಳೂರು(reporterkarnataka.com):ಕರ್ನಾಟಕದಲ್ಲಿ ದುಡಿಯುವ ಮಹಿಳೆಯರಿಗೆ ಋತುಚಕ್ರದ ರಜೆ ಎಂದು ವರ್ಷದಲ್ಲಿ ಹನ್ನೆರಡು ದಿನ ರಜೆ ನೀಡಲು ಮುಖ್ಯಮಂತ್ರಿ ಸಿದ್ದರಾಮ್ಯನವರ ನೇತೃತ್ವದ ಸರ್ಕಾರ ಒಪ್ಪಿಗೆ ನೀಡಿರುವುದು ಅಭಿನಂದನೀಯ. ಕರ್ನಾಟಕ ರಾಜ್ಯ ಸರ್ಕಾರ ಹೆಣ್ಣು ಮಕ್ಕಳ ಪರವಾಗಿ ಐತಿಹಾಸಿಕ ನಿರ್ಣಯ ಕೈಗೊಂಡಿದೆ.
ಸರ್ಕಾರಿ ಮತ್ತು ಖಾಸಗಿ ವಲಯದಲ್ಲಿ ದುಡಿಯುವ ಎಲ್ಲ ಮಹಿಳೆಯರಿಗೂ ತಿಂಗಳಲ್ಲಿ ಒಂದು ದಿನ ವೇತನ ಸಹಿತ ಋತುಚಕ್ರದ ರಜೆ ನೀಡುವುದರಿಂದ ಮಹಿಳೆಯರ ಆರೋಗ್ಯದ ದೃಷ್ಟಿಯಿಂದಲೂ ಇದೊಂದು ಉತ್ತಮ ನಿರ್ಧಾರ. ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್, ಎಂಎನ್‌ಸಿ ಮತ್ತು ಇತರೆ ಖಾಸಗಿ ಕೈಗಾರಿಕೆಗಳು ಸೇರಿದಂತೆ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ರಜೆ ನೀತಿಯನ್ನು ಜಾರಿಗೆ ತರಲು ಸಚಿವ ಸಂಪುಟ ನಿರ್ಣಯಿಸಿರುವುದರಿಂದ ಲಕ್ಷಾಂತರ ಮಹಿಳೆಯರಿಗೆ ಅನುಕೂಲವಾಗಲಿದೆ. ಸದಾ ಮಹಿಳೆಯರ ಪರ ಧ್ವನಿಯೆತ್ತುತ್ತಿರುವ, ಮಹಿಳೆಯರ ಪರ ಕಾಳಜಿ ವಹಿಸುತ್ತಿರುವ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿ ಅವರಿಗೆ ಕೃತಜ್ಞತೆಗಳು. ಋತುಚಕ್ರದ ರಜೆ ನೀತಿಗಾಗಿ ಹಲವಾರು ವರ್ಷಗಳಿಂದ ಬೇರೆ ಬೇರೆ ಸಂಘಟನೆಗಳು ಹೋರಾಟ ನಡೆಸುತ್ತಾ ಬರುತಿತ್ತು. ಇದೀಗ ಅವರ ಹೋರಾಟಕ್ಕೂ ಪ್ರತಿಫಲ ಸಿಕ್ಕಿದಂತಾಗಿದೆ.
*-ಪದ್ಮರಾಜ್ ಆರ್. ಪೂಜಾರಿ*
ಕಾಂಗ್ರೆಸ್ ಮುಖಂಡರು

ಇತ್ತೀಚಿನ ಸುದ್ದಿ

ಜಾಹೀರಾತು