3:58 AM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಋತುಚಕ್ರ ರಜೆ ನೀತಿ | ರಾಜ್ಯ ಸರಕಾರದ ಕ್ರಮ ಅಭಿನಂದನೀಯ: ಪದ್ಮರಾಜ್ ಆರ್. ಪೂಜಾರಿ

09/10/2025, 19:03

ಮಂಗಳೂರು(reporterkarnataka.com):ಕರ್ನಾಟಕದಲ್ಲಿ ದುಡಿಯುವ ಮಹಿಳೆಯರಿಗೆ ಋತುಚಕ್ರದ ರಜೆ ಎಂದು ವರ್ಷದಲ್ಲಿ ಹನ್ನೆರಡು ದಿನ ರಜೆ ನೀಡಲು ಮುಖ್ಯಮಂತ್ರಿ ಸಿದ್ದರಾಮ್ಯನವರ ನೇತೃತ್ವದ ಸರ್ಕಾರ ಒಪ್ಪಿಗೆ ನೀಡಿರುವುದು ಅಭಿನಂದನೀಯ. ಕರ್ನಾಟಕ ರಾಜ್ಯ ಸರ್ಕಾರ ಹೆಣ್ಣು ಮಕ್ಕಳ ಪರವಾಗಿ ಐತಿಹಾಸಿಕ ನಿರ್ಣಯ ಕೈಗೊಂಡಿದೆ.
ಸರ್ಕಾರಿ ಮತ್ತು ಖಾಸಗಿ ವಲಯದಲ್ಲಿ ದುಡಿಯುವ ಎಲ್ಲ ಮಹಿಳೆಯರಿಗೂ ತಿಂಗಳಲ್ಲಿ ಒಂದು ದಿನ ವೇತನ ಸಹಿತ ಋತುಚಕ್ರದ ರಜೆ ನೀಡುವುದರಿಂದ ಮಹಿಳೆಯರ ಆರೋಗ್ಯದ ದೃಷ್ಟಿಯಿಂದಲೂ ಇದೊಂದು ಉತ್ತಮ ನಿರ್ಧಾರ. ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್, ಎಂಎನ್‌ಸಿ ಮತ್ತು ಇತರೆ ಖಾಸಗಿ ಕೈಗಾರಿಕೆಗಳು ಸೇರಿದಂತೆ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ರಜೆ ನೀತಿಯನ್ನು ಜಾರಿಗೆ ತರಲು ಸಚಿವ ಸಂಪುಟ ನಿರ್ಣಯಿಸಿರುವುದರಿಂದ ಲಕ್ಷಾಂತರ ಮಹಿಳೆಯರಿಗೆ ಅನುಕೂಲವಾಗಲಿದೆ. ಸದಾ ಮಹಿಳೆಯರ ಪರ ಧ್ವನಿಯೆತ್ತುತ್ತಿರುವ, ಮಹಿಳೆಯರ ಪರ ಕಾಳಜಿ ವಹಿಸುತ್ತಿರುವ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿ ಅವರಿಗೆ ಕೃತಜ್ಞತೆಗಳು. ಋತುಚಕ್ರದ ರಜೆ ನೀತಿಗಾಗಿ ಹಲವಾರು ವರ್ಷಗಳಿಂದ ಬೇರೆ ಬೇರೆ ಸಂಘಟನೆಗಳು ಹೋರಾಟ ನಡೆಸುತ್ತಾ ಬರುತಿತ್ತು. ಇದೀಗ ಅವರ ಹೋರಾಟಕ್ಕೂ ಪ್ರತಿಫಲ ಸಿಕ್ಕಿದಂತಾಗಿದೆ.
*-ಪದ್ಮರಾಜ್ ಆರ್. ಪೂಜಾರಿ*
ಕಾಂಗ್ರೆಸ್ ಮುಖಂಡರು

ಇತ್ತೀಚಿನ ಸುದ್ದಿ

ಜಾಹೀರಾತು