10:24 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಋತುಚಕ್ರ ರಜೆ ನೀತಿ | ರಾಜ್ಯ ಸರಕಾರದ ಕ್ರಮ ಅಭಿನಂದನೀಯ: ಪದ್ಮರಾಜ್ ಆರ್. ಪೂಜಾರಿ

09/10/2025, 19:03

ಮಂಗಳೂರು(reporterkarnataka.com):ಕರ್ನಾಟಕದಲ್ಲಿ ದುಡಿಯುವ ಮಹಿಳೆಯರಿಗೆ ಋತುಚಕ್ರದ ರಜೆ ಎಂದು ವರ್ಷದಲ್ಲಿ ಹನ್ನೆರಡು ದಿನ ರಜೆ ನೀಡಲು ಮುಖ್ಯಮಂತ್ರಿ ಸಿದ್ದರಾಮ್ಯನವರ ನೇತೃತ್ವದ ಸರ್ಕಾರ ಒಪ್ಪಿಗೆ ನೀಡಿರುವುದು ಅಭಿನಂದನೀಯ. ಕರ್ನಾಟಕ ರಾಜ್ಯ ಸರ್ಕಾರ ಹೆಣ್ಣು ಮಕ್ಕಳ ಪರವಾಗಿ ಐತಿಹಾಸಿಕ ನಿರ್ಣಯ ಕೈಗೊಂಡಿದೆ.
ಸರ್ಕಾರಿ ಮತ್ತು ಖಾಸಗಿ ವಲಯದಲ್ಲಿ ದುಡಿಯುವ ಎಲ್ಲ ಮಹಿಳೆಯರಿಗೂ ತಿಂಗಳಲ್ಲಿ ಒಂದು ದಿನ ವೇತನ ಸಹಿತ ಋತುಚಕ್ರದ ರಜೆ ನೀಡುವುದರಿಂದ ಮಹಿಳೆಯರ ಆರೋಗ್ಯದ ದೃಷ್ಟಿಯಿಂದಲೂ ಇದೊಂದು ಉತ್ತಮ ನಿರ್ಧಾರ. ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್, ಎಂಎನ್‌ಸಿ ಮತ್ತು ಇತರೆ ಖಾಸಗಿ ಕೈಗಾರಿಕೆಗಳು ಸೇರಿದಂತೆ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ರಜೆ ನೀತಿಯನ್ನು ಜಾರಿಗೆ ತರಲು ಸಚಿವ ಸಂಪುಟ ನಿರ್ಣಯಿಸಿರುವುದರಿಂದ ಲಕ್ಷಾಂತರ ಮಹಿಳೆಯರಿಗೆ ಅನುಕೂಲವಾಗಲಿದೆ. ಸದಾ ಮಹಿಳೆಯರ ಪರ ಧ್ವನಿಯೆತ್ತುತ್ತಿರುವ, ಮಹಿಳೆಯರ ಪರ ಕಾಳಜಿ ವಹಿಸುತ್ತಿರುವ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿ ಅವರಿಗೆ ಕೃತಜ್ಞತೆಗಳು. ಋತುಚಕ್ರದ ರಜೆ ನೀತಿಗಾಗಿ ಹಲವಾರು ವರ್ಷಗಳಿಂದ ಬೇರೆ ಬೇರೆ ಸಂಘಟನೆಗಳು ಹೋರಾಟ ನಡೆಸುತ್ತಾ ಬರುತಿತ್ತು. ಇದೀಗ ಅವರ ಹೋರಾಟಕ್ಕೂ ಪ್ರತಿಫಲ ಸಿಕ್ಕಿದಂತಾಗಿದೆ.
*-ಪದ್ಮರಾಜ್ ಆರ್. ಪೂಜಾರಿ*
ಕಾಂಗ್ರೆಸ್ ಮುಖಂಡರು

ಇತ್ತೀಚಿನ ಸುದ್ದಿ

ಜಾಹೀರಾತು