4:08 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮೆನು ಪ್ರಕಾರ ಊಟ- ತಿಂಡಿ ಕೊಡದ ವಾರ್ಡನ್: ಸುರಪುರ ಎಸ್ ಸಿ, ಎಸ್ಟಿ ಹಾಸ್ಟೆಲ್‌ಗೆ ಶಾಸಕರ ದಿಢೀರ್ ಭೇಟಿ

29/01/2025, 19:39

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಸುರಪುರದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ- ಪಂಗಡದ ಬಾಲಕರ ವಿದ್ಯಾರ್ಥಿನಿಲಯಕ್ಕೆ ಶಾಸಕ ರಾಜಾ ವೇಣುಗೋಪಾಲ್ ನಾಯಕ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹಾಸ್ಟೆಲ್‌ನಲ್ಲಿರುವ ಸೌಲಭ್ಯಗಳ ಕುರಿತು ವಾರ್ಡ್‌ನ್‌ ಅವರಿಂದ ಮಾಹಿತಿ ಪಡೆದ ಅವರು, ಉಗ್ರಾಣಕ್ಕೆ ಹೋಗಿ ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರಿಶೀಲನೆ ನಡೆಸಿದರು. ಹಾಸ್ಟೆಲ್ ಆವರಣ, ಕೊಠಡಿಗಳು, ಶೌಚಾಲಯ ಹಾಗೂ ಅಡುಗೆ ಕೋಣೆಗಳ ಸ್ವಚ್ಛತೆಯನ್ನು ವೀಕ್ಷಿಸಿದರು.
*ಮೆನು ಪ್ರಕಾರ ತಿಂಡಿ, ಊಟ ಕೊಡುವುದಿಲ್ಲ:*
ವಾರ್ಡ್‌ನ್‌ ನಮ್ಮನ್ನು ಗದರಿಸುತ್ತಾರೆ. ಬೆದರಿಕೆಯಿಂದ ನಮ್ಮನ್ನು ಇಟ್ಟಿದ್ದಾರೆ. ಹಾಲಿಗೆ ಹೆಚ್ಚು ನೀರು ಬೆರೆಸಿಕೊಡುತ್ತಾರೆ, ನೋಡಿ ಸರ್ ಎಂದು ವಿದ್ಯಾರ್ಥಿಗಳು ಹಾಲಿನ ಲೋಟ ತಂದು ತೋರಿಸಿದ್ದರು. ಹಾಗೆಯೇ ಮಧ್ಯಾಹ್ನದ ಚಪಾತಿಯನ್ನು ರಾತ್ರಿ ಕೊಡುತ್ತಾರೆ. ಮೆನು ಪ್ರಕಾರ ತಿಂಡಿ, ಊಟ ಕೊಡುವುದಿಲ್ಲ ಎಂದು ಸೇರಿದಂತೆ ಹಲವು ಸಮಸ್ಯೆಗಳನ್ನು ಅಲವತ್ತುಕೊಂಡರು.
*ಹಾಸ್ಟೆಲ್ ವಾರ್ಡನ್ ಗೆ ಶಾಸಕರ ಕ್ಲಾಸ್..:!*
ವಾರ್ಡನ್ (ಮೇಲ್ವಿಚಾರಿ) ಮಕ್ಕಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವಲ್ಲಿ ವಿಫಲರಾಗಿದ್ದಾರೆ. ಸಮಯ ಪರಿಪಾಲನೆ ಮಾಡಲ್ಲ, ಸರಿಯಾದ ಬಾಳೆಹಣ್ಣು ವಿತರಣೆ ಮಾಡುವುದಿಲ್ಲ ಎಂದು ಮಕ್ಕಳಿಂದ ದೂರು ಬಂದ ಹಿನ್ನೆಲೆ ಇಂದು ಮಾನ್ಯ ಶಾಸಕರು ಶಾಲೆಗೆ ದಿಢೀರ್ ಭೇಟಿ ನೀಡಿ ವಾರ್ಡನ್ ರವರಿಗೆ ಎಚ್ಚರಿಕೆ ನೀಡಿದರು. ಮಕ್ಕಳ ಜೊತೆ ಸೌಜನ್ಯ ರೀತಿ ವರ್ತಿಸಬೇಕೆಂದು ಹೇಳಿದರು.
ಪರಿಶಿಷ್ಟ ಬಾಲಕರ ವಿದ್ಯಾರ್ಥಿ ನಿಲಯ ಆವರಣದಲ್ಲೇ ನಿಂತ ಚರಂಡಿ ನೀರು ಶಾಸಕರಿಗೆ ಆಹ್ವಾನ ನೀಡಿತು. ಹಾಸ್ಟೆಲ್ ಸುತ್ತ ಜಾಲಿ, ಕುರುಚಲು ಬೆಳೆದಿದ್ದು, ಇಂಗು ಗುಂಡಿ ಸಹ ನಿರ್ಮಿಸದೆ ಇರುವುದನ್ನು ಕಂಡ ಶಾಸಕರು, ವಾರ್ಡನ್ ನಿರ್ಲಕ್ಷದ ವಿರುದ್ಧ ಕಿಡಿಕಾರಿದರು. ಸ್ವಚ್ಛತೆಯತ್ತ ಗಮನ ಹರಿಸುವಂತೆ ಸಲಹೆ ನೀಡಿದರು.
ವಿದ್ಯಾರ್ಥಿಗಳೊಂದಿಗೆ ಶಾಸಕರು ಬೆಳಗಿನ ತಿಂಡಿಯನ್ನು ಸವಿದರು. ನಂತರ ಶಾಸಕರು ಮಾತನಾಡಿ ‘ಇನ್ನು ಮುಂದೆ ಹೆದರಬೇಡಿ, ನಿಮಗೆ ಮೆನು ಪ್ರಕಾರವೇ ತಿಂಡಿ, ಊಟ ಕೊಡುತ್ತಾರೆ. ಧೈರ್ಯವಾಗಿರಿ, ನಿಮಗೆ ಸಮಸ್ಯೆ ಎದುರಾದರೆ ತಕ್ಷಣ ನನಗೆ ಕರೆ ಮಾಡಿ’ ಎಂದು ಧೈರ್ಯ ತುಂಬಿ ಸಾಂತ್ವನ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು