11:37 AM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮೆನು ಪ್ರಕಾರ ಊಟ- ತಿಂಡಿ ಕೊಡದ ವಾರ್ಡನ್: ಸುರಪುರ ಎಸ್ ಸಿ, ಎಸ್ಟಿ ಹಾಸ್ಟೆಲ್‌ಗೆ ಶಾಸಕರ ದಿಢೀರ್ ಭೇಟಿ

29/01/2025, 19:39

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಸುರಪುರದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ- ಪಂಗಡದ ಬಾಲಕರ ವಿದ್ಯಾರ್ಥಿನಿಲಯಕ್ಕೆ ಶಾಸಕ ರಾಜಾ ವೇಣುಗೋಪಾಲ್ ನಾಯಕ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹಾಸ್ಟೆಲ್‌ನಲ್ಲಿರುವ ಸೌಲಭ್ಯಗಳ ಕುರಿತು ವಾರ್ಡ್‌ನ್‌ ಅವರಿಂದ ಮಾಹಿತಿ ಪಡೆದ ಅವರು, ಉಗ್ರಾಣಕ್ಕೆ ಹೋಗಿ ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರಿಶೀಲನೆ ನಡೆಸಿದರು. ಹಾಸ್ಟೆಲ್ ಆವರಣ, ಕೊಠಡಿಗಳು, ಶೌಚಾಲಯ ಹಾಗೂ ಅಡುಗೆ ಕೋಣೆಗಳ ಸ್ವಚ್ಛತೆಯನ್ನು ವೀಕ್ಷಿಸಿದರು.
*ಮೆನು ಪ್ರಕಾರ ತಿಂಡಿ, ಊಟ ಕೊಡುವುದಿಲ್ಲ:*
ವಾರ್ಡ್‌ನ್‌ ನಮ್ಮನ್ನು ಗದರಿಸುತ್ತಾರೆ. ಬೆದರಿಕೆಯಿಂದ ನಮ್ಮನ್ನು ಇಟ್ಟಿದ್ದಾರೆ. ಹಾಲಿಗೆ ಹೆಚ್ಚು ನೀರು ಬೆರೆಸಿಕೊಡುತ್ತಾರೆ, ನೋಡಿ ಸರ್ ಎಂದು ವಿದ್ಯಾರ್ಥಿಗಳು ಹಾಲಿನ ಲೋಟ ತಂದು ತೋರಿಸಿದ್ದರು. ಹಾಗೆಯೇ ಮಧ್ಯಾಹ್ನದ ಚಪಾತಿಯನ್ನು ರಾತ್ರಿ ಕೊಡುತ್ತಾರೆ. ಮೆನು ಪ್ರಕಾರ ತಿಂಡಿ, ಊಟ ಕೊಡುವುದಿಲ್ಲ ಎಂದು ಸೇರಿದಂತೆ ಹಲವು ಸಮಸ್ಯೆಗಳನ್ನು ಅಲವತ್ತುಕೊಂಡರು.
*ಹಾಸ್ಟೆಲ್ ವಾರ್ಡನ್ ಗೆ ಶಾಸಕರ ಕ್ಲಾಸ್..:!*
ವಾರ್ಡನ್ (ಮೇಲ್ವಿಚಾರಿ) ಮಕ್ಕಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವಲ್ಲಿ ವಿಫಲರಾಗಿದ್ದಾರೆ. ಸಮಯ ಪರಿಪಾಲನೆ ಮಾಡಲ್ಲ, ಸರಿಯಾದ ಬಾಳೆಹಣ್ಣು ವಿತರಣೆ ಮಾಡುವುದಿಲ್ಲ ಎಂದು ಮಕ್ಕಳಿಂದ ದೂರು ಬಂದ ಹಿನ್ನೆಲೆ ಇಂದು ಮಾನ್ಯ ಶಾಸಕರು ಶಾಲೆಗೆ ದಿಢೀರ್ ಭೇಟಿ ನೀಡಿ ವಾರ್ಡನ್ ರವರಿಗೆ ಎಚ್ಚರಿಕೆ ನೀಡಿದರು. ಮಕ್ಕಳ ಜೊತೆ ಸೌಜನ್ಯ ರೀತಿ ವರ್ತಿಸಬೇಕೆಂದು ಹೇಳಿದರು.
ಪರಿಶಿಷ್ಟ ಬಾಲಕರ ವಿದ್ಯಾರ್ಥಿ ನಿಲಯ ಆವರಣದಲ್ಲೇ ನಿಂತ ಚರಂಡಿ ನೀರು ಶಾಸಕರಿಗೆ ಆಹ್ವಾನ ನೀಡಿತು. ಹಾಸ್ಟೆಲ್ ಸುತ್ತ ಜಾಲಿ, ಕುರುಚಲು ಬೆಳೆದಿದ್ದು, ಇಂಗು ಗುಂಡಿ ಸಹ ನಿರ್ಮಿಸದೆ ಇರುವುದನ್ನು ಕಂಡ ಶಾಸಕರು, ವಾರ್ಡನ್ ನಿರ್ಲಕ್ಷದ ವಿರುದ್ಧ ಕಿಡಿಕಾರಿದರು. ಸ್ವಚ್ಛತೆಯತ್ತ ಗಮನ ಹರಿಸುವಂತೆ ಸಲಹೆ ನೀಡಿದರು.
ವಿದ್ಯಾರ್ಥಿಗಳೊಂದಿಗೆ ಶಾಸಕರು ಬೆಳಗಿನ ತಿಂಡಿಯನ್ನು ಸವಿದರು. ನಂತರ ಶಾಸಕರು ಮಾತನಾಡಿ ‘ಇನ್ನು ಮುಂದೆ ಹೆದರಬೇಡಿ, ನಿಮಗೆ ಮೆನು ಪ್ರಕಾರವೇ ತಿಂಡಿ, ಊಟ ಕೊಡುತ್ತಾರೆ. ಧೈರ್ಯವಾಗಿರಿ, ನಿಮಗೆ ಸಮಸ್ಯೆ ಎದುರಾದರೆ ತಕ್ಷಣ ನನಗೆ ಕರೆ ಮಾಡಿ’ ಎಂದು ಧೈರ್ಯ ತುಂಬಿ ಸಾಂತ್ವನ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು