8:18 PM Friday12 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಮೆನು ಪ್ರಕಾರ ಊಟ- ತಿಂಡಿ ಕೊಡದ ವಾರ್ಡನ್: ಸುರಪುರ ಎಸ್ ಸಿ, ಎಸ್ಟಿ ಹಾಸ್ಟೆಲ್‌ಗೆ ಶಾಸಕರ ದಿಢೀರ್ ಭೇಟಿ

29/01/2025, 19:39

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಸುರಪುರದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ- ಪಂಗಡದ ಬಾಲಕರ ವಿದ್ಯಾರ್ಥಿನಿಲಯಕ್ಕೆ ಶಾಸಕ ರಾಜಾ ವೇಣುಗೋಪಾಲ್ ನಾಯಕ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹಾಸ್ಟೆಲ್‌ನಲ್ಲಿರುವ ಸೌಲಭ್ಯಗಳ ಕುರಿತು ವಾರ್ಡ್‌ನ್‌ ಅವರಿಂದ ಮಾಹಿತಿ ಪಡೆದ ಅವರು, ಉಗ್ರಾಣಕ್ಕೆ ಹೋಗಿ ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರಿಶೀಲನೆ ನಡೆಸಿದರು. ಹಾಸ್ಟೆಲ್ ಆವರಣ, ಕೊಠಡಿಗಳು, ಶೌಚಾಲಯ ಹಾಗೂ ಅಡುಗೆ ಕೋಣೆಗಳ ಸ್ವಚ್ಛತೆಯನ್ನು ವೀಕ್ಷಿಸಿದರು.
*ಮೆನು ಪ್ರಕಾರ ತಿಂಡಿ, ಊಟ ಕೊಡುವುದಿಲ್ಲ:*
ವಾರ್ಡ್‌ನ್‌ ನಮ್ಮನ್ನು ಗದರಿಸುತ್ತಾರೆ. ಬೆದರಿಕೆಯಿಂದ ನಮ್ಮನ್ನು ಇಟ್ಟಿದ್ದಾರೆ. ಹಾಲಿಗೆ ಹೆಚ್ಚು ನೀರು ಬೆರೆಸಿಕೊಡುತ್ತಾರೆ, ನೋಡಿ ಸರ್ ಎಂದು ವಿದ್ಯಾರ್ಥಿಗಳು ಹಾಲಿನ ಲೋಟ ತಂದು ತೋರಿಸಿದ್ದರು. ಹಾಗೆಯೇ ಮಧ್ಯಾಹ್ನದ ಚಪಾತಿಯನ್ನು ರಾತ್ರಿ ಕೊಡುತ್ತಾರೆ. ಮೆನು ಪ್ರಕಾರ ತಿಂಡಿ, ಊಟ ಕೊಡುವುದಿಲ್ಲ ಎಂದು ಸೇರಿದಂತೆ ಹಲವು ಸಮಸ್ಯೆಗಳನ್ನು ಅಲವತ್ತುಕೊಂಡರು.
*ಹಾಸ್ಟೆಲ್ ವಾರ್ಡನ್ ಗೆ ಶಾಸಕರ ಕ್ಲಾಸ್..:!*
ವಾರ್ಡನ್ (ಮೇಲ್ವಿಚಾರಿ) ಮಕ್ಕಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವಲ್ಲಿ ವಿಫಲರಾಗಿದ್ದಾರೆ. ಸಮಯ ಪರಿಪಾಲನೆ ಮಾಡಲ್ಲ, ಸರಿಯಾದ ಬಾಳೆಹಣ್ಣು ವಿತರಣೆ ಮಾಡುವುದಿಲ್ಲ ಎಂದು ಮಕ್ಕಳಿಂದ ದೂರು ಬಂದ ಹಿನ್ನೆಲೆ ಇಂದು ಮಾನ್ಯ ಶಾಸಕರು ಶಾಲೆಗೆ ದಿಢೀರ್ ಭೇಟಿ ನೀಡಿ ವಾರ್ಡನ್ ರವರಿಗೆ ಎಚ್ಚರಿಕೆ ನೀಡಿದರು. ಮಕ್ಕಳ ಜೊತೆ ಸೌಜನ್ಯ ರೀತಿ ವರ್ತಿಸಬೇಕೆಂದು ಹೇಳಿದರು.
ಪರಿಶಿಷ್ಟ ಬಾಲಕರ ವಿದ್ಯಾರ್ಥಿ ನಿಲಯ ಆವರಣದಲ್ಲೇ ನಿಂತ ಚರಂಡಿ ನೀರು ಶಾಸಕರಿಗೆ ಆಹ್ವಾನ ನೀಡಿತು. ಹಾಸ್ಟೆಲ್ ಸುತ್ತ ಜಾಲಿ, ಕುರುಚಲು ಬೆಳೆದಿದ್ದು, ಇಂಗು ಗುಂಡಿ ಸಹ ನಿರ್ಮಿಸದೆ ಇರುವುದನ್ನು ಕಂಡ ಶಾಸಕರು, ವಾರ್ಡನ್ ನಿರ್ಲಕ್ಷದ ವಿರುದ್ಧ ಕಿಡಿಕಾರಿದರು. ಸ್ವಚ್ಛತೆಯತ್ತ ಗಮನ ಹರಿಸುವಂತೆ ಸಲಹೆ ನೀಡಿದರು.
ವಿದ್ಯಾರ್ಥಿಗಳೊಂದಿಗೆ ಶಾಸಕರು ಬೆಳಗಿನ ತಿಂಡಿಯನ್ನು ಸವಿದರು. ನಂತರ ಶಾಸಕರು ಮಾತನಾಡಿ ‘ಇನ್ನು ಮುಂದೆ ಹೆದರಬೇಡಿ, ನಿಮಗೆ ಮೆನು ಪ್ರಕಾರವೇ ತಿಂಡಿ, ಊಟ ಕೊಡುತ್ತಾರೆ. ಧೈರ್ಯವಾಗಿರಿ, ನಿಮಗೆ ಸಮಸ್ಯೆ ಎದುರಾದರೆ ತಕ್ಷಣ ನನಗೆ ಕರೆ ಮಾಡಿ’ ಎಂದು ಧೈರ್ಯ ತುಂಬಿ ಸಾಂತ್ವನ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು