11:41 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮೇರು ಕಲಾವಿದ, ಮಾತಿನ ಮಾಂತ್ರಿಕ, ಮಾಜಿ ಶಾಸಕ ಕುಂಬಳೆ ಸುಂದರ ರಾವ್ ಇನ್ನಿಲ್ಲ

30/11/2022, 15:24

ಮಂಗಳೂರು(reporterkarnataka.com): ಮೇರು ಕಲಾವಿದ, ಪ್ರಸಿದ್ಧ ಅರ್ಥದಾರಿ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ್(88) ಬುಧವಾರ ಮುಂಜಾನೆ ನಿಧನರಾದರು
ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಸುಂದರ ರಾವ್ ಅವರ ಅಂತ್ಯ ಸಂಸ್ಕಾರ ನಾಳೆ ನೆರವೇರಲಿದೆ. ಪಾರ್ಥಿವ ಶರೀರವನ್ನು ಸಾರ್ವಜನಿಕರಿಗೆ ವೀಕ್ಷಣೆಗೆ ಮಂಗಳೂರು ಪಡೀಲ್ ಬಳಿ ಇರುವ ಅವರ ಮನೆಯಲ್ಲಿ ಇರಿಸಲಾಗುವುದು. ಯಕ್ಷಗಾನ ಕಲಾರಂಗದ ಇಡೀ ತಂಡ ಅವರ ಅಗಲಿಕೆಗೆ ತೀವ್ರ ಸ್ವಂತ ವ್ಯಕ್ತಪಡಿಸಿದೆ.

ಶ್ರೀ ಧರ್ಮಸ್ಥಳ ಯಕ್ಷಗಾನ ಮೇಳದಲ್ಲಿ ವೇಷದಾರಿಯಾಗಿ ದಶಕಗಳ ಕಾಲ ಯಕ್ಷ ಪ್ರೇಮಿಗಳ ಮನಸ್ಸು ಗೆದ್ದಿದ್ದ ಕುಂಬಳೆ ಸುಂದರ ರಾವ್ ಅವರು ಇಳಿ ವಯಸ್ಸಿನಲ್ಲಿ ಬಿಜೆಪಿ ಮೂಲಕ ರಾಜಕೀಯ ರಂಗ ಪ್ರವೇಶಿಸಿದ್ದರು. ನಂತರ ಅಂದಿನ ಸುರತ್ಕಲ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಮಾಜಿ ಶಾಸಕರಾದ ಬಳಿಕ ರಾಜಕೀಯ ಚಟುವಟಿಕೆಗಳಿಂದ ದೂರವಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು