12:42 PM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಮೆಸ್ಕಾಂ ನಿರ್ಲಕ್ಷ್ಯ: ಹೆಮ್ಮಾಡಿ ಕಾಲು ದಾರಿಯಲ್ಲಿ ವಿದ್ಯುತ್ ಶಾಕ್ ತಗುಲಿ ದಂಪತಿ ದಾರುಣ ಸಾವು; ಸ್ಥಳೀಯರ ಆಕ್ರೋಶ

30/09/2023, 13:02

ಕುಂದಾಪುರ(reporterkarnataka.com): ಕುಂದಾಪುರ ತಾಲೂಕಿನ ಹೆಮ್ಮಾಡಿ ಸಮೀಪ ಕಾಲುದಾರಿಯಲ್ಲಿ ಮುರಿದು ಬಿದ್ದ ವಿದ್ಯುತ್ ತಂತಿ ತಗುಲಿ
ದಂಪತಿ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಮಹಾಬಲ ದೇವಾಡಿಗ (55) ಹಾಗೂ ಅವರ ಪತ್ನಿ ಲಕ್ಷ್ಮೀ ದೇವಾಡಿಗ (49) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.
ಕೆಲಸಕ್ಕೆ ತೆರಳಿದ್ದ ಗಂಡ ಮಹಾಬಲ ದೇವಾಡಿಗ ಅವರನ್ನು ಹುಡುಕಲು ತೆರಳಿದ್ದ ಪತ್ನಿ ಲಕ್ಷ್ಮೀ ದೇವಾಡಿಗ ಅವರು ತನ್ನ ಗಂಡ ವಿದ್ಯುತ್ ಶಾಕ್ ಗೆ ಒಳಗಾಗಿರುವುದನ್ನು ಕಂಡು ಪತಿಯನ್ನು ರಕ್ಷಿಸಲು ಯತ್ನಿಸಿದಾಗ ತಾನು ಕೂಡ ವಿದ್ಯುತ್ ಪ್ರವಾಹಕ್ಕೆ ಗುರಿಯಾಗಿ ಸಾವನ್ನಪ್ಪಿದ್ದಾರೆ.
ಮೃತ ಮಹಾಬಲ ದೇವಾಡಿಗ ಅವರು ಮನೆಯೊಂದರಲ್ಲಿ ದಿನಗೂಲಿ ಕೆಲಸ ನಿರ್ವಹಿಸುತ್ತಿದ್ದರು. ಶುಕ್ರವಾರ ಮಳೆಯ ಅಬ್ಬರದ ನಡುವೆ ಕೆಲಸಕ್ಕೆ ತೆರಳಿದ್ದರು. ಪತಿ ಸಂಜೆಯಾದರೂ ಮನೆಗೆ ಬಾರದೇ ಇರುವುದನ್ನು ಕಂಡು ಪತ್ನಿ ಲಕ್ಷ್ಮೀ ಹುಡುಕಾಟಕ್ಕೆ ತೆರಳಿದ್ದಾರೆ. ಈ ವೇಳೆ ಕಾಲುದಾರಿಯಲ್ಲಿ ತುಂಡರಿಸಿದ ವಿದ್ಯುತ್ ತಂತಿ ತಗುಲಿ ಪತಿ ಬಿದ್ದಿರುವುದನ್ನು ಲಕ್ಷ್ಮೀ ಗಮನಿಸಿದ್ದಾರೆ. ತಕ್ಷಣವೇ ಪತಿಯನ್ನು ರಕ್ಷಿಸಲು ಸ್ಥಳೀಯರಲ್ಲಿ ನೆರವಿಗೆ ಬರುವಂತೆ ಕೂಗಿದ್ದಾರೆ. ಆದರೆ ಸ್ಥಳೀಯರು ಬರುವಷ್ಟರಲ್ಲೇ ಮಳೆ ನೀರಿನಿಂದ ಒದ್ದೆಯಾದ ಮರದ ತುಂಡಲ್ಲಿ ಪತಿಯನ್ನು ರಕ್ಷಿಸಲು ಮುಂದಾಗಿದ್ದಾರೆ. ಈ ವೇಳೆ ವಿದ್ಯುತ್ ಪ್ರವಹಿಸಿ ಲಕ್ಷ್ಮೀ ಪತಿಯ ಸಮೀಪವೇ ಪ್ರಾಣಬಿಟ್ಟಿದ್ದಾರೆ. ಮೃತ ದಂಪತಿ ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯವೇ ಇಂತಹ ದುರಂತಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಾಬಲ ದೇವಾಡಿಗ ಅವರು ಸಾವನ್ನಪ್ಪಿದ ಕಾಲು ದಾರಿಯ ಮಧ್ಯೆ ಎರಡು ವಿದ್ಯುತ್ ತಂತಿ ಹಾದು ಹೋಗಿದೆ. ಅನೇಕ ಕಡೆಗಳಲ್ಲಿ ತುಂಡಾದ ತಂತಿಗಳನ್ನು ಮತ್ತೆ ಜೋಡಿಸಲಾಗಿದೆ. ಎರಡು ತಂತಿಯಲ್ಲಿ ಒಂದು ತಂತಿ ತುಂಡಾಗಿ ಬಿದ್ದಿದ್ದು, ಇದೇ ತಂತಿ ತಗುಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಮೆಸ್ಕಾಂ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯವನ್ನು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಘಟನಾ ಸ್ಥಳಕ್ಕೆ ಕುಂದಾಪುರ ಡಿವೈಎಸ್‌ಪಿ ಬೆಳ್ಳಿಯಪ್ಪ, ಕುಂದಾಪುರ ಗ್ರಾಮಾಂತರ ವೃತ್ತ ನಿರೀಕ್ಷಕ ಜಯರಾಮ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು