10:26 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮೆಸ್ಕಾಂ ನಿರ್ಲಕ್ಷ್ಯ: ಹೆಮ್ಮಾಡಿ ಕಾಲು ದಾರಿಯಲ್ಲಿ ವಿದ್ಯುತ್ ಶಾಕ್ ತಗುಲಿ ದಂಪತಿ ದಾರುಣ ಸಾವು; ಸ್ಥಳೀಯರ ಆಕ್ರೋಶ

30/09/2023, 13:02

ಕುಂದಾಪುರ(reporterkarnataka.com): ಕುಂದಾಪುರ ತಾಲೂಕಿನ ಹೆಮ್ಮಾಡಿ ಸಮೀಪ ಕಾಲುದಾರಿಯಲ್ಲಿ ಮುರಿದು ಬಿದ್ದ ವಿದ್ಯುತ್ ತಂತಿ ತಗುಲಿ
ದಂಪತಿ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಮಹಾಬಲ ದೇವಾಡಿಗ (55) ಹಾಗೂ ಅವರ ಪತ್ನಿ ಲಕ್ಷ್ಮೀ ದೇವಾಡಿಗ (49) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.
ಕೆಲಸಕ್ಕೆ ತೆರಳಿದ್ದ ಗಂಡ ಮಹಾಬಲ ದೇವಾಡಿಗ ಅವರನ್ನು ಹುಡುಕಲು ತೆರಳಿದ್ದ ಪತ್ನಿ ಲಕ್ಷ್ಮೀ ದೇವಾಡಿಗ ಅವರು ತನ್ನ ಗಂಡ ವಿದ್ಯುತ್ ಶಾಕ್ ಗೆ ಒಳಗಾಗಿರುವುದನ್ನು ಕಂಡು ಪತಿಯನ್ನು ರಕ್ಷಿಸಲು ಯತ್ನಿಸಿದಾಗ ತಾನು ಕೂಡ ವಿದ್ಯುತ್ ಪ್ರವಾಹಕ್ಕೆ ಗುರಿಯಾಗಿ ಸಾವನ್ನಪ್ಪಿದ್ದಾರೆ.
ಮೃತ ಮಹಾಬಲ ದೇವಾಡಿಗ ಅವರು ಮನೆಯೊಂದರಲ್ಲಿ ದಿನಗೂಲಿ ಕೆಲಸ ನಿರ್ವಹಿಸುತ್ತಿದ್ದರು. ಶುಕ್ರವಾರ ಮಳೆಯ ಅಬ್ಬರದ ನಡುವೆ ಕೆಲಸಕ್ಕೆ ತೆರಳಿದ್ದರು. ಪತಿ ಸಂಜೆಯಾದರೂ ಮನೆಗೆ ಬಾರದೇ ಇರುವುದನ್ನು ಕಂಡು ಪತ್ನಿ ಲಕ್ಷ್ಮೀ ಹುಡುಕಾಟಕ್ಕೆ ತೆರಳಿದ್ದಾರೆ. ಈ ವೇಳೆ ಕಾಲುದಾರಿಯಲ್ಲಿ ತುಂಡರಿಸಿದ ವಿದ್ಯುತ್ ತಂತಿ ತಗುಲಿ ಪತಿ ಬಿದ್ದಿರುವುದನ್ನು ಲಕ್ಷ್ಮೀ ಗಮನಿಸಿದ್ದಾರೆ. ತಕ್ಷಣವೇ ಪತಿಯನ್ನು ರಕ್ಷಿಸಲು ಸ್ಥಳೀಯರಲ್ಲಿ ನೆರವಿಗೆ ಬರುವಂತೆ ಕೂಗಿದ್ದಾರೆ. ಆದರೆ ಸ್ಥಳೀಯರು ಬರುವಷ್ಟರಲ್ಲೇ ಮಳೆ ನೀರಿನಿಂದ ಒದ್ದೆಯಾದ ಮರದ ತುಂಡಲ್ಲಿ ಪತಿಯನ್ನು ರಕ್ಷಿಸಲು ಮುಂದಾಗಿದ್ದಾರೆ. ಈ ವೇಳೆ ವಿದ್ಯುತ್ ಪ್ರವಹಿಸಿ ಲಕ್ಷ್ಮೀ ಪತಿಯ ಸಮೀಪವೇ ಪ್ರಾಣಬಿಟ್ಟಿದ್ದಾರೆ. ಮೃತ ದಂಪತಿ ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯವೇ ಇಂತಹ ದುರಂತಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಾಬಲ ದೇವಾಡಿಗ ಅವರು ಸಾವನ್ನಪ್ಪಿದ ಕಾಲು ದಾರಿಯ ಮಧ್ಯೆ ಎರಡು ವಿದ್ಯುತ್ ತಂತಿ ಹಾದು ಹೋಗಿದೆ. ಅನೇಕ ಕಡೆಗಳಲ್ಲಿ ತುಂಡಾದ ತಂತಿಗಳನ್ನು ಮತ್ತೆ ಜೋಡಿಸಲಾಗಿದೆ. ಎರಡು ತಂತಿಯಲ್ಲಿ ಒಂದು ತಂತಿ ತುಂಡಾಗಿ ಬಿದ್ದಿದ್ದು, ಇದೇ ತಂತಿ ತಗುಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಮೆಸ್ಕಾಂ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯವನ್ನು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಘಟನಾ ಸ್ಥಳಕ್ಕೆ ಕುಂದಾಪುರ ಡಿವೈಎಸ್‌ಪಿ ಬೆಳ್ಳಿಯಪ್ಪ, ಕುಂದಾಪುರ ಗ್ರಾಮಾಂತರ ವೃತ್ತ ನಿರೀಕ್ಷಕ ಜಯರಾಮ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು