9:18 PM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಬೇಲೆಕೇರಿ ಬಂದರಿನಿಂದ 11,312 ಮೆಟ್ರಿಕ್ ಟನ್ ಅದಿರು ನಾಪತ್ತೆ ಪ್ರಕರಣ: ಸಿಬಿಐನಿಂದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ ಬಂಧನ

24/10/2024, 23:50

ಬೆಂಗಳೂರು(reporterkarnataka.com): ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಕಾಂಗ್ರೆಸ್‌ ಶಾಸಕ ಸತೀಶ್ ಸೈಲ್‌ ಅವರನ್ನು ಸಿಬಿಐ ಬಂಧಿಸಿದೆ.
2010ರಲ್ಲಿ ಬೇಲೆಕೇರಿ ಬಂದರಿನಲ್ಲಿನಲ್ಲಿ ಇರಿಸಿದ್ದ ಅದಿರು ನಾಪತ್ತೆ ಪ್ರಕರಣ ಸಂಬಂಧ ಕೋರ್ಟ್ ಕಾರವಾರದ ಶಾಸಕ ಸತೀಶ್ ಸೈಲ್ ಅವರು ಅಪರಾಧಿ ಎಂದು ತೀರ್ಪಿನಲ್ಲಿ ಪ್ರಕಟಿಸಿದೆ. ಶಿಕ್ಷೆಯ ಪ್ರಮಾಣವನ್ನು ಶುಕ್ರವಾರ ಪ್ರಕಟಿಸುವುದಾಗಿ ತಿಳಿಸಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಂಧಿಸುವಂತೆ ಗುರುವಾರ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಶಾಸಕ ಸತೀಶ್ ಸೈಲ್ ಅವರನ್ನು ಬಂಧಿಸಿದ್ದಾರೆ.
ಬೇಲೆಕೇರಿಯಲ್ಲಿ ಸೀಜ್ ಆಗಿದ್ದಂತಹ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ ಸಾಗಾಟ ಮಾಡಲಾಗಿತ್ತು. ಈ ಸಂಬಂಧ ಒಟ್ಟು 6 ಪ್ರಕರಣಗಳು ದಾಖಲಾಗಿದ್ದವು.
ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ವಾದ-ಪ್ರತಿವಾದ ಆಲಿಸಿ, ಕಾಂಗ್ರೆಸ್ ಶಾಸಕ ಸತೀಶ್ ಸೈಲ್, ಅರಣ್ಯಾಧಿಕಾರಿ ಮಹೇಶ್ ಬಿಳಿಯೆ, ಮಲ್ಲಿಕಾರ್ಜುನ ಶಿಪ್ಪಿಂಗ್ ಸೇರಿ ಹಲವರನ್ನು ದೋಷಿಗಳು ಎಂಬುದಾಗಿ ತೀರ್ಪು ನೀಡಿದೆ.
ಆರೋಪಿಗಳನ್ನು ಸಿಬಿಐ ಬಂಧಿಸಿ, ಪರಪ್ಪನ ಅಗ್ರಹಾರ ಜೈಲಿನಲ್ಲಿರಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು