8:51 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಬೇಲೆಕೇರಿ ಬಂದರಿನಿಂದ 11,312 ಮೆಟ್ರಿಕ್ ಟನ್ ಅದಿರು ನಾಪತ್ತೆ ಪ್ರಕರಣ: ಸಿಬಿಐನಿಂದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ ಬಂಧನ

24/10/2024, 23:50

ಬೆಂಗಳೂರು(reporterkarnataka.com): ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಕಾಂಗ್ರೆಸ್‌ ಶಾಸಕ ಸತೀಶ್ ಸೈಲ್‌ ಅವರನ್ನು ಸಿಬಿಐ ಬಂಧಿಸಿದೆ.
2010ರಲ್ಲಿ ಬೇಲೆಕೇರಿ ಬಂದರಿನಲ್ಲಿನಲ್ಲಿ ಇರಿಸಿದ್ದ ಅದಿರು ನಾಪತ್ತೆ ಪ್ರಕರಣ ಸಂಬಂಧ ಕೋರ್ಟ್ ಕಾರವಾರದ ಶಾಸಕ ಸತೀಶ್ ಸೈಲ್ ಅವರು ಅಪರಾಧಿ ಎಂದು ತೀರ್ಪಿನಲ್ಲಿ ಪ್ರಕಟಿಸಿದೆ. ಶಿಕ್ಷೆಯ ಪ್ರಮಾಣವನ್ನು ಶುಕ್ರವಾರ ಪ್ರಕಟಿಸುವುದಾಗಿ ತಿಳಿಸಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಂಧಿಸುವಂತೆ ಗುರುವಾರ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಶಾಸಕ ಸತೀಶ್ ಸೈಲ್ ಅವರನ್ನು ಬಂಧಿಸಿದ್ದಾರೆ.
ಬೇಲೆಕೇರಿಯಲ್ಲಿ ಸೀಜ್ ಆಗಿದ್ದಂತಹ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ ಸಾಗಾಟ ಮಾಡಲಾಗಿತ್ತು. ಈ ಸಂಬಂಧ ಒಟ್ಟು 6 ಪ್ರಕರಣಗಳು ದಾಖಲಾಗಿದ್ದವು.
ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ವಾದ-ಪ್ರತಿವಾದ ಆಲಿಸಿ, ಕಾಂಗ್ರೆಸ್ ಶಾಸಕ ಸತೀಶ್ ಸೈಲ್, ಅರಣ್ಯಾಧಿಕಾರಿ ಮಹೇಶ್ ಬಿಳಿಯೆ, ಮಲ್ಲಿಕಾರ್ಜುನ ಶಿಪ್ಪಿಂಗ್ ಸೇರಿ ಹಲವರನ್ನು ದೋಷಿಗಳು ಎಂಬುದಾಗಿ ತೀರ್ಪು ನೀಡಿದೆ.
ಆರೋಪಿಗಳನ್ನು ಸಿಬಿಐ ಬಂಧಿಸಿ, ಪರಪ್ಪನ ಅಗ್ರಹಾರ ಜೈಲಿನಲ್ಲಿರಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು