12:38 AM Friday21 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ಬೇಲೆಕೇರಿ ಬಂದರಿನಿಂದ 11,312 ಮೆಟ್ರಿಕ್ ಟನ್ ಅದಿರು ನಾಪತ್ತೆ ಪ್ರಕರಣ: ಸಿಬಿಐನಿಂದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ ಬಂಧನ

24/10/2024, 23:50

ಬೆಂಗಳೂರು(reporterkarnataka.com): ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಕಾಂಗ್ರೆಸ್‌ ಶಾಸಕ ಸತೀಶ್ ಸೈಲ್‌ ಅವರನ್ನು ಸಿಬಿಐ ಬಂಧಿಸಿದೆ.
2010ರಲ್ಲಿ ಬೇಲೆಕೇರಿ ಬಂದರಿನಲ್ಲಿನಲ್ಲಿ ಇರಿಸಿದ್ದ ಅದಿರು ನಾಪತ್ತೆ ಪ್ರಕರಣ ಸಂಬಂಧ ಕೋರ್ಟ್ ಕಾರವಾರದ ಶಾಸಕ ಸತೀಶ್ ಸೈಲ್ ಅವರು ಅಪರಾಧಿ ಎಂದು ತೀರ್ಪಿನಲ್ಲಿ ಪ್ರಕಟಿಸಿದೆ. ಶಿಕ್ಷೆಯ ಪ್ರಮಾಣವನ್ನು ಶುಕ್ರವಾರ ಪ್ರಕಟಿಸುವುದಾಗಿ ತಿಳಿಸಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಂಧಿಸುವಂತೆ ಗುರುವಾರ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಶಾಸಕ ಸತೀಶ್ ಸೈಲ್ ಅವರನ್ನು ಬಂಧಿಸಿದ್ದಾರೆ.
ಬೇಲೆಕೇರಿಯಲ್ಲಿ ಸೀಜ್ ಆಗಿದ್ದಂತಹ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ ಸಾಗಾಟ ಮಾಡಲಾಗಿತ್ತು. ಈ ಸಂಬಂಧ ಒಟ್ಟು 6 ಪ್ರಕರಣಗಳು ದಾಖಲಾಗಿದ್ದವು.
ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ವಾದ-ಪ್ರತಿವಾದ ಆಲಿಸಿ, ಕಾಂಗ್ರೆಸ್ ಶಾಸಕ ಸತೀಶ್ ಸೈಲ್, ಅರಣ್ಯಾಧಿಕಾರಿ ಮಹೇಶ್ ಬಿಳಿಯೆ, ಮಲ್ಲಿಕಾರ್ಜುನ ಶಿಪ್ಪಿಂಗ್ ಸೇರಿ ಹಲವರನ್ನು ದೋಷಿಗಳು ಎಂಬುದಾಗಿ ತೀರ್ಪು ನೀಡಿದೆ.
ಆರೋಪಿಗಳನ್ನು ಸಿಬಿಐ ಬಂಧಿಸಿ, ಪರಪ್ಪನ ಅಗ್ರಹಾರ ಜೈಲಿನಲ್ಲಿರಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು