4:18 AM Friday5 - December 2025
ಬ್ರೇಕಿಂಗ್ ನ್ಯೂಸ್
ತೋಟಕ್ಕೆ ತೆರಳಿದ್ದ ಸಂದರ್ಭ ಏಕಾಏಕಿ ಹೆಜ್ಜೇನು ದಾಳಿ: ಮಹಿಳೆ ಸಹಿತ 3 ಮಂದಿಗೆ… ವಿರಾಜಪೇಟೆ | ಕ್ಷುಲ್ಲಕ ಕಾರಣ: ಕುಡಿದ ಮತ್ತಿನಲ್ಲಿ ನಡುರಸ್ತೆಯಲ್ಲಿ ಯುವಕರ ಮಾರಮಾರಿ..!! “ಸ್ವಸ್ಥ ಮೈಸೂರು” ಅಭಿಯಾನ ಒಪ್ಪಂದಕ್ಕೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಹಿ New Delhi | ಬೆಳ್ಳಿ ವಸ್ತು, ಆಭರಣಗಳಿಗಿನ್ನು BIS ಹಾಲ್‌ಮಾರ್ಕ್‌, HUID ಕಡ್ಡಾಯ ರಾಜ್ಯ ಸರಕಾರ ಅನ್ನದಾತ ರೈತನ ಬಗ್ಗೆ ಕಾಳಜಿ ವಹಿಸುತ್ತಿಲ್ಲ: ಮಾಜಿ ಗೃಹ ಸಚಿವ… ವಿಶೇಷ ಚೇತನರು ಇನ್ನು ವಿಮಾನವೇರುವುದು ಸುಲಭ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಮೊಬಿಲಿಟಿ… ಕೊಡಗಿನಲ್ಲಿ ಮುಂದುವರಿದ ಆನೆ- ಮಾನವ ಸಂಘರ್ಷ: ಕುಶಾಲನಗರ ಬಳಿ ರೈಲ್ವೆ ಬ್ಯಾರಿಕೇಡ್ ಮುರಿದ… ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು

ಇತ್ತೀಚಿನ ಸುದ್ದಿ

ಬೇಲೆಕೇರಿ ಬಂದರಿನಿಂದ 11,312 ಮೆಟ್ರಿಕ್ ಟನ್ ಅದಿರು ನಾಪತ್ತೆ ಪ್ರಕರಣ: ಸಿಬಿಐನಿಂದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ ಬಂಧನ

24/10/2024, 23:50

ಬೆಂಗಳೂರು(reporterkarnataka.com): ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಕಾಂಗ್ರೆಸ್‌ ಶಾಸಕ ಸತೀಶ್ ಸೈಲ್‌ ಅವರನ್ನು ಸಿಬಿಐ ಬಂಧಿಸಿದೆ.
2010ರಲ್ಲಿ ಬೇಲೆಕೇರಿ ಬಂದರಿನಲ್ಲಿನಲ್ಲಿ ಇರಿಸಿದ್ದ ಅದಿರು ನಾಪತ್ತೆ ಪ್ರಕರಣ ಸಂಬಂಧ ಕೋರ್ಟ್ ಕಾರವಾರದ ಶಾಸಕ ಸತೀಶ್ ಸೈಲ್ ಅವರು ಅಪರಾಧಿ ಎಂದು ತೀರ್ಪಿನಲ್ಲಿ ಪ್ರಕಟಿಸಿದೆ. ಶಿಕ್ಷೆಯ ಪ್ರಮಾಣವನ್ನು ಶುಕ್ರವಾರ ಪ್ರಕಟಿಸುವುದಾಗಿ ತಿಳಿಸಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಂಧಿಸುವಂತೆ ಗುರುವಾರ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಶಾಸಕ ಸತೀಶ್ ಸೈಲ್ ಅವರನ್ನು ಬಂಧಿಸಿದ್ದಾರೆ.
ಬೇಲೆಕೇರಿಯಲ್ಲಿ ಸೀಜ್ ಆಗಿದ್ದಂತಹ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ ಸಾಗಾಟ ಮಾಡಲಾಗಿತ್ತು. ಈ ಸಂಬಂಧ ಒಟ್ಟು 6 ಪ್ರಕರಣಗಳು ದಾಖಲಾಗಿದ್ದವು.
ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ವಾದ-ಪ್ರತಿವಾದ ಆಲಿಸಿ, ಕಾಂಗ್ರೆಸ್ ಶಾಸಕ ಸತೀಶ್ ಸೈಲ್, ಅರಣ್ಯಾಧಿಕಾರಿ ಮಹೇಶ್ ಬಿಳಿಯೆ, ಮಲ್ಲಿಕಾರ್ಜುನ ಶಿಪ್ಪಿಂಗ್ ಸೇರಿ ಹಲವರನ್ನು ದೋಷಿಗಳು ಎಂಬುದಾಗಿ ತೀರ್ಪು ನೀಡಿದೆ.
ಆರೋಪಿಗಳನ್ನು ಸಿಬಿಐ ಬಂಧಿಸಿ, ಪರಪ್ಪನ ಅಗ್ರಹಾರ ಜೈಲಿನಲ್ಲಿರಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು