10:24 PM Thursday10 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಮೆಟ್ರೊ ದರ ಏರಿಕೆಗೆ ರಾಜ್ಯ ಸರಕಾರವೇ ಶಿಫಾರಸ್ಸು ಮಾಡಿದೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

16/02/2025, 18:35

*ರಾಜಕೀಯ ಕಾರಣಕ್ಕಾಗಿ ಮೈಸೂರು ಗಲವಭೆಕೋರರ ಮೇಲೆ ಕ್ರಮ ಕೈಗೊಳ್ಳುತ್ತಿಲ್ಲ: ಬಸವರಾಜ ಬೊಮ್ಮಾಯಿ*

ಹುಬ್ಬಳ್ಳಿ(reporterkarnataka.com): ಮೆಟ್ರೊ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ. ಮುಖ್ಯ ಮಂತ್ರಿಗಳು ದರ ಏರಿಕೆ ವಿಚಾರವಾಗಿ‌ ನಿರ್ದೇಶನ‌ ಕೊಟ್ಟಿರುವುದೇ ಅದಕ್ಕೆ ಸಾಕ್ಷಿ. ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿರುವುದರಿಂದ ಎಲ್ಲದರ ಏರಿಕೆ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ. ಅದಕ್ಕೆ ಎಲ್ಲ ದರಗಳನ್ನೂ ಏರಿಸುತ್ತಿದೆ. ಮೆಟ್ರೋ‌ ದರ ಏರಿಕೆ ಮಾಡಿದ್ದು ನಾವಲ್ಲ. ದರ ನಿಗದಿ ಮಾಡುವ ಒಂದು ಸಮಿತಿ ಇದೆ. ಮೆಟ್ರೋ ದರ ವಿಚಾರದಲ್ಲಿ ಎಲ್ಲವೂ ಅಧಿಕಾರ ರಾಜ್ಯ ಸರ್ಕಾರಕ್ಕೆ ಇರುತ್ತದೆ. ಅದರಲ್ಲಿ ರಾಜ್ಯದ ಅಧಿಕಾರಿಗಳಿರುತ್ತಾರೆ. ಅದಕ್ಕೆ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ. ಮುಖ್ಯ ಮಂತ್ರಿಗಳು ದರ ಏರಿಕೆ ವಿಚಾರವಾಗಿ‌ ನಿರ್ದೇಶನ‌ ಕೊಟ್ಟಿರುವುದೇ ಅದಕ್ಕೆ ಸಾಕ್ಷಿ ಎಂದು ಹೇಳಿದರು.
ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿರುವುದರಿಂದ ಎಲ್ಲದರ ಏರಿಕೆ ಮಾಡುತ್ತಿದೆ. ವಿದ್ಯುತ್, ನೀರು, ಹಾಲಿನ‌ ದರ ಸೇರಿದಂತೆ ಎಲ್ಲ ದರ ಏರಿಸಿದೆ. ಸರ್ಕಾರ ಹಣಕಾಸಿನ‌‌ ನಿರ್ವಹಣೆಯಲ್ಲಿ ವಿಫಲವಾಗಿದೆ ಎಂದರು.
ಮೈಸೂರಿನ ಉದಯಗಿರಿ ಗಲಾಟೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾವಾಗ ಸರ್ಕಾರ ಹಳೇ ಹುಬ್ಬಳ್ಳಿ ಪ್ರಕರಣವನ್ನು ಹಿಂತೆಗೆದರೋ‌ ಆಗ ಸರ್ಕಾರ ಯಾರ ಪರ ಇದೆ ಅನ್ನುವುದು ಗೊತ್ತಾಗಿದೆ. ಪೊಲೀಸ್ ಠಾಣೆ ಮೇಲೆ ದಾಳಿ ಮಾಡುವುದರ ಹಿಂದೆ ಯಾರ ಕುಮ್ಮಕ್ಕು ಇದೆ ಅನ್ನುವುದು ಗೊತ್ತಾಗುತ್ತದೆ. ಈ‌ ಹಿಂದೆ ತನ್ವೀರ್ ಸೇಠ್ ಮೇಲೆ ಪಿಎಫ್ ಐ ದಾಳಿ ಮಾಡಿತ್ತು. ಇಂದು ಆ ಶಕ್ತಿಗಳು ಮತ್ತೆ ಒಂದಾಗಿವೆ. ಹೀಗಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವವರೇ ಆತಂಕದಲ್ಲಿದ್ದಾರೆ. ಜನರಿಗೆ ರಕ್ಷಣೆ ಕೊಡುವ ಶಕ್ತಿಯೇ ಅವರಲ್ಲಿ‌ ಇಲ್ಲ. ಮುಖ್ಯಮಂತ್ರಿಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ದಾಳಿ ವಿಚಾರವಾಗಿ ಪೊಲೀಸರಿಗೆ ಎಲ್ಲವೂ ಗೊತ್ತಿದೆ. ಆದರೆ, ರಾಜಕೀಯ ಒತ್ತಡದಿಂದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು