3:09 PM Thursday13 - February 2025
ಬ್ರೇಕಿಂಗ್ ನ್ಯೂಸ್
ಮೈಸೂರಿನಲ್ಲಿ ಗಲಭೆಕೋರರಿಗೆ ಇಡೀ ಸರಕಾರ ಬೆಂಬಲ ನೀಡಿದೆ: ಪ್ರತಿಪಕ್ಷದ ನಾಯಕ ಆರ್. ಆಶೋಕ್ ಕ್ವಿನ್ ಸಿಟಿ ಆಗಲಿದೆ ಹೆಲ್ತ್ ಸಿಟಿ: ಜಾಗತಿಕ ಹೂಡಿಕೆದಾರರ ಚರ್ಚಾಗೋಷ್ಠಿಯಲ್ಲಿ ಸಚಿವ ಶರಣ್… Chitradurga | ಚಳ್ಳಕೆರೆ: ನಿಧಿಯಾಸೆಗೆ ನರಬಲಿ; ಡ್ರಾಪ್ ಕೊಡುವ ನೆಪದಲ್ಲಿ ಕೊಲೆ; ಜ್ಯೋತಿಷಿ… ಕಾಂಗ್ರೆಸ್‌ ಸರಕಾರ ಪ್ರಕರಣ ವಾಪಸ್‌ ಪಡೆಯುವುದರಿಂದ ಮತಾಂಧರಿಗೆ ಹಲ್ಲೆ ಮಾಡುವ ಧೈರ್ಯ ಬಂದಿದೆ:… ಬೀರೂರು: ರಥ ಟರ್ನ್ ಆಗಲು ಜಾಗದ ವಿವಾದ ತಣ್ಣಗಾಗುತ್ತಿದ್ದಂತೆ ಹೊತ್ತಿ ಉರಿದ ಟ್ರ್ಯಾಕ್ಟರ್,… ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಅಪ್ಲೋಡ್ ಮಾಡುವ ಮುನ್ನ ಎಚ್ಚರ ಇರಲಿ: ಹೆಣ್ಮಕ್ಕಳಿಗೆ ಎಸಿಪಿ… ಪರಶುರಾಂಪುರ ತಾಲೂಕು ಮಾಡುವುದು ನನ್ನ ಸಂಕಲ್ಪ: ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ನಂಜನಗೂಡು: ಶ್ರೀ ಮುರಗಿ ಸ್ವಾಮಿ ಮಠದ ನೂತನ ಗದ್ದುಗೆ, ರಾಜದ್ವಾರ ಲೋಕಾರ್ಪಣೆ ಮಂಗಳೂರಿನ ವೆನ್ಲಾಕ್ ಗೆ ʼರೀಜನಲ್ ಆಸ್ಪತ್ರೆʼ ಸ್ಥಾನಮಾನ: ಸಿಎಂಗೆ ಸಂಸದ ಕ್ಯಾ. ಬ್ರಿಜೇಶ್… ಇನ್ವೆಸ್ಟ್‌ ಕರ್ನಾಟಕ 2025; ಜಾಗತಿಕ ಬಂಡವಾಳ ಹೂಡಿಕೆಯ ಶಕ್ತಿಕೇಂದ್ರ: ಕೈಗಾರಿಕಾ ಸಚಿವ ಎಂ.ಬಿ.…

ಇತ್ತೀಚಿನ ಸುದ್ದಿ

Metro ಪ್ರಯಾಣ ದರ ಏರಿಕೆಯಲ್ಲಿ ರಾಜ್ಯ ಸರಕಾರದ ಪಾತ್ರವಿಲ್ಲ, ಬಿಜೆಪಿಯವರು ಎಡೆಬಿಡಂಗಿಗಳು: ಸಚಿವ ರಾಮಲಿಂಗಾ ರೆಡ್ಡಿ

12/02/2025, 21:19

ಮಂಗಳೂರು(reporterkarnataka.com): ಬೆಂಗಳೂರು ಮೆಟ್ರೋ ಪ್ರಯಾಣ ದರ ಏರಿಕೆಯಲ್ಲಿ ರಾಜ್ಯ ಸರಕಾರದ ಪಾತ್ರವಿಲ್ಲ, ಕೇಂದ್ರ ಸರಕಾರದ ನಗರಾಡಳಿತ ಕಾರ್ಯದರ್ಶಿ ಮೆಟ್ರೋ ಅಧ್ಯಕ್ಷರು, ರಾಜ್ಯದ ಪ್ರತಿನಿಧಿ ಇರುತ್ತಾರೆ ಅಷ್ಟೇ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದ ಜತೆ ಮಾತನಾಡಿದ ಸಚಿವರು, ಇದೆಲ್ಲ ಮಾಜಿ ಸಚಿವ ಡಿ.ವಿ.ಸದಾನಂದ ಗೌಡರಿಗೆ, ಸಂಸದ ಪಿ.ಸಿ.ಮೋಹನ್ ಅವರಿಗೆ ಗೊತ್ತಾಗಿಲ್ವೇ?
ಬಿಜೆಪಿಯವರು ಎಡೆಬಿಡಂಗಿಗಳು. ಒಳ್ಳೆಯದಾದರೆ ತಾವು ಮಾಡಿದ್ದು ಜನರಿಗೆ ತೊಂದರೆ ಅದರೆ ಕಾಂಗ್ರೆಸ್ ಮಾಡಿದ್ದು ಎನ್ನುವ ಚಾಳಿ ಅವರದ್ದು ಎಂದು ಕಿಡಿಕಾರಿದರು.
ಮೆಟ್ರೋ ಪ್ರಯಾಣ ದರ ಏರಿಕೆಯಾದ ಬೆನ್ನಲ್ಲೇ ಪ್ರಯಾಣಿಕರು ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ್ದು, ಇದರ ಬೆನ್ನಲ್ಲೇ ಬಿಜೆಪಿ ನಾಯಕರು ಕೂಡಾ ರಾಜ್ಯ ಸರಕಾರದ ಮೇಲೆ ಬೊಟ್ಟು ಮಾಡಿದ್ದು ಈ ವಿಚಾರವಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದ್ದಾರೆ.


ಈ ಬಾರಿಯ ಬಜೆಟ್‌ನಲ್ಲಿ 3500 ಹೊಸ ಬಸ್ ಹಾಗೂ ಮೂರು ನೂತನ ಅರ್‌ಟಿಒ ಕಚೇರಿ ಕೇಳಿದ್ದೇವೆ. ಶಕ್ತಿ ಯೋಜನೆಯ 1500 ಕೋಟಿ ರೂ. ಬರುವುದು ಬಾಕಿ ಇದೆ. ರಾಜ್ಯದಲ್ಲಿ ಈ ವರ್ಷಾಂತ್ಯದ ಒಳಗೆ 43 ಸ್ವಯಂಚಾಲಿತ ಟೆಸ್ಟಿಂಗ್ ಸೆಂಟರ್‌ಗಳು, 11 ಸ್ವಯಂಚಾಲಿತ ಫಿಟೈಸ್ ಟೆಸ್ಟ್ ಸೆಂಟರ್‌ಗಳು ಕಾರ್ಯಾರಂಭಿಸಲಿವೆ. ಈ ಮೂಲಕ ಡಿಎಲ್, ಫಿಟೈಸ್ ಸರ್ಟಿಫಿಕೇಟ್ ಇತ್ಯಾದಿ ಕೆಲಸ ತ್ವರಿತಗೊಳ್ಳಲಿದೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು