12:25 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮೈಕ್ರೋ ಫೈನಾನ್ಸ್ ವಿರುದ್ಧ ನಂಜನಗೂಡು ತಾಲೂಕು ಆಡಳಿತ ಗರಂ: ಫೈನಾನ್ಸ್ ಸಿಬ್ಬಂದಿಗಳ ಬೆವರಳಿಸಿದ ಹುಲ್ಲಹಳ್ಳಿ ಪೊಲೀಸರು

22/01/2025, 22:52

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮೈಕ್ರೋ ಫೈನಾನ್ಸ್ ವಿರುದ್ಧ ನಂಜನಗೂಡು ತಾಲೂಕು ಆಡಳಿತ ಗರಂ ಆಗಿದೆ.
ನಂಜನಗೂಡು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಅವರ ಆದೇಶದ ಮೇರೆಗೆ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಸಭೆ ನಡೆಸಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ತರಾಟೆಗೆ ತೆಗೆದುಕೊಳ್ಳಲಾಗಿದೆ.
ಇಪ್ಪತ್ತಕ್ಕೂ ಹೆಚ್ಚು ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಜತೆ ವೃತ್ತ ನಿರೀಕ್ಷಕ ಚಂದ್ರಶೇಖರ್ ಮತ್ತು ಹುಲ್ಲಹಳ್ಳಿ ಪಿಎಸ್ಐ ಚೇತನ್ ಕುಮಾರ್ ಅವರು ಸಭೆ ನಡೆಸಿದ್ದಾರೆ.
ಹುಲ್ಲಹಳ್ಳಿ ಪೊಲೀಸ್ ಠಾಣ ವ್ಯಾಪ್ತಿಯ ಹಳ್ಳಿಗಳ ನೂರಾರು ಕುಟುಂಬಗಳಿಗೆ ನೀಡಿರುವ ಸಾಲದ ವಿವರವನ್ನು ಕೇಳಿ ಮಾಹಿತಿಯನ್ನು ಪೊಲೀಸರು ಪಡೆದರು.
*ಕೂಲಿ ಕಾರ್ಮಿಕರಿಗೆ ಸಾಲ ನೀಡುವ ಮುನ್ನ ನೀವು ಸಾಲ ವಸೂಲಾತಿಯಲ್ಲೂ ತಮ್ಮ ಜವಾಬ್ದಾರಿ ಹಾಗೂ ಕಠಿಣ ಕ್ರಮದ ಬಗ್ಗೆ ಮಾಹಿತಿಯನ್ನು ಏಕೆ ತಿಳಿಸಿಲ್ಲ ಎಂದು ಫೈನಾನ್ಸ್ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡರು.

*ಸಾಲ ನೀಡಿದ ಮೇಲೆ ಕಿರುಕುಳದ ಅವಶ್ಯಕತೆ ಏಕೆ ?

*ಸಾಲ ನೀಡಿದ್ದೇವೆ ಎಂದು ಒಬ್ಬಂಟಿ ಮಹಿಳೆಯರ ಮನೆಗೆ ಹೋಗಿ ದಮ್ಕಿ ಹಾಕುವುದು ಎಷ್ಟರ ಮಟ್ಟಿಗೆ ಸರಿ ?

*ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳಾದ ನೀವು ಕೂಲಿ ಕಾರ್ಮಿಕರು ಬಡ ರೈತರಿಂದ ಸಾಲ ನೀಡಿ ಎಷ್ಟು ಪರ್ಸೆಂಟ್ ಬಡ್ಡಿಯನ್ನು ತೆಗೆದುಕೊಳ್ಳುತ್ತಿದ್ದೀರಿ?

*ನೀವು ತೆಗೆದುಕೊಳ್ಳುವ ಬಡ್ಡಿಯ ಮಾಹಿತಿಯನ್ನು ಆರ್ ಬಿಐ ಅಥವಾ ತಾಲೂಕು ದಂಡಾಧಿಕಾರಿಗಳು ಇಲ್ಲಾ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದೀರಾ ?

*ನಿಮ್ಮ ಕಿರುಕುಳ ತಾಳಲಾರದೆ ನೀವು ಸಾಲ ನೀಡಿದ ಎಷ್ಟು ಕುಟುಂಬಗಳು ಬೀದಿಗೆ ಬಿದ್ದಿವೆ ಮನೆಯನ್ನು ತೊರೆದು ನಾಪತ್ತೆಯಾಗಿದ್ದಾರೆ ?

*ಖಾಸಗಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳಿಗೆ ಹತ್ತು ಹಲವು ಪ್ರಶ್ನೆಗಳ ಸುರಿಮಳೆಗೈದು ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳಿಗೆ ಚಾರ್ಜ್ ಮಾಡಿದ ವೃತ ನಿರೀಕ್ಷಕ ಚಂದ್ರಶೇಖರ್ ಮತ್ತು ಪಿಎಸ್ಐ ಚೇತನ್ ಕುಮಾರ್
ನಂಜನಗೂಡಿನ ತಹಸಿಲ್ದಾರ್ ಶಿವಕುಮಾರ್ ಕಾಸನೂರು ರವರ ಆದೇಶದ ಮೇರೆಗೆ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಸಭೆ ಮಾಡಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳಿಗೆ ಹುಲ್ಲಹಳ್ಳಿ ಪೊಲೀಸರು ಬೆವರಳ್ಳಿಸಿದ್ದಾರೆ.


ಪೊಲೀಸರ ಖಡಕ್ ಎಚ್ಚರಿಕೆಗೆ ತಬ್ಬಿಬಾದ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳು ಯಾವುದೇ ಉತ್ತರ ನೀಡದೆ ಮೌನಕ್ಕೆ ಶರಣಾಗಿದ್ದಾರೆ. ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳಾದ ನೀವು ಸಾಲ ನೀಡಿದ್ದೀರಿ ಆದರೆ ಅದನ್ನು ಕಾನೂನು ಬದ್ಧವಾಗಿ ವಸೂಲಾತಿಗೆ ಮುಂದಾಗಬೇಕು.
ಸಾಲ ನೀಡಿದ್ದೇವೆ ಎಂದು ಯಾವುದೇ ದರ್ಪ, ಕಿರುಕುಳ ನೀಡಬಾರದು. ಅವರ ಮನೆಯ ಮುಂಭಾಗಕ್ಕೆ ಹೋಗಿ ಬೆದರಿಕೆ ಹಾಕುವುದಾಗಲಿ ನೋಟೀಸ್ ಅಂಟಿಸುವುದಾಗಲಿ ಮಾಡಬಾರದು.
ಹಾಗೇನಾದರೂ ಮಾಹಿತಿ ಕಂಡು ಬಂದಲ್ಲಿ ತಹಸೀಲ್ದಾರ್ ಅವರ ಆದೇಶದ ಮೇರೆಗೆ ಪೋಲಿಸ್ ವರಿಷ್ಠಾಧಿಕಾರಿಗಳ ಗಮನಕ್ಕೆ ತಂದು ನಿಮ್ಮ ಮೇಲೆ ಕ್ರಿಮಿನಲ್ ಪ್ರಕರಣ ದಾಖಲು ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಸಭೆಯಲ್ಲಿ ವೃತ್ತ ನಿರೀಕ್ಷಕ ಚಂದ್ರಶೇಖರ್, ಪಿಎಸ್ಐ ಚೇತನ್ ಕುಮಾರ್ ದಫೆದರ್ ದೊಡ್ಡಯ್ಯ ಸೇರಿದಂತೆ ಸಿಬ್ಬಂದಿಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು