7:25 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಸುಗ್ರಿವಾಜ್ಞೆ ಜಾರಿಯಾದರೂ ನಿಲ್ಲದ ಮೈಕ್ರೋ ಫೈನಾನ್ಸ್ ಕಿರುಕುಳ: ಗೃಹ ಸಚಿವರ ತವರಿನಲ್ಲೇ ಇಬ್ಬರು ಆತ್ಮಹತ್ಯೆ!

22/02/2025, 22:01

ತುಮಕೂರು(reporterkarnataka.com): ರಾಜ್ಯ ಸರಕಾರ ಸುಗ್ರೀವಾಜ್ಞೆ ಜಾರಿಗೊಳಿಸಿದರೂ
ಮೈಕ್ರೋ ಫೈನಾನ್ಸ್ ಗಳ ಕಿರುಕುಳ ಇನ್ನೂ ತಪ್ಪಿಲ್ಲ.
ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ತವರು ಕ್ಷೇತ್ರದಲ್ಲೇ ಮೈಕ್ರೋ ಫೈನಾನ್ಸ್ ಹಾವಳಿಗೆ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಒಬ್ಬ ಆಟೋ ಚಾಲಕ ಹಾಗೂ ಒಬ್ಬರು ಮಹಿಳೆ ಆತ್ಮಹತ್ಯೆಗೆ ಶರಣಾದವರು. ಮೃತಪಟ್ಟವರನ್ನು ಅಂಜನಮೂರ್ತಿ (35) ಹಾಗೂ ಅಜೀಜ್ ಉನಿಸಾ ಎಂದು ಗುರುತಿಸಲಾಗಿದೆ.
ಅಂಜನಮೂರ್ತಿ ಅವರು ಬಟವಾಡಿಯ ಮಹಾಲಕ್ಷ್ಮೀ ನಗರದ ನಿವಾಸಿ ಎಂದು ತಿಳಿದು ಬಂದಿದೆ.
ಅಜೀಜ್ ಉನಿಸಾ ಅವರು ಕುಣಿಗಲ್ ತಾಲೂಕಿನ ಕುತ್ತಿಪುರದ ನಿವಾಸಿ.
ಅಜೀಜ್ ಉನಿಸಾ ಅವರು ಇಬ್ಬರು ಹೆಣ್ಣುಮಕ್ಕಳ ಮದುವೆಗೆ 12 ಲಕ್ಷ ರೂಪಾಯಿ ಸಾಲವನ್ನು ಬೇರೆ ಬೇರೆ ಫೈನಾನ್ಸ್ ಗಳಿಂದ ತೆಗೆದಿದ್ದರು.
ಆಶೀರ್ವಾದ, ಸೂರ್ಯೋದಯ, ಬಜಾಜ್ ಸೇರಿದಂತೆ ವಿವಿಧ ಫೈನಾನ್ಸ್ ನಿಂದ ಉನ್ನಿಸಾ ಸಾಲವನ್ನು ಪಡೆದಿದ್ದರು. ಕಳೆದ ಕೆಲವು ತಿಂಗಳಿಂದ ಸಾಲ ಮರುಪಾವತಿ ಮಾಡಿರಲಿಲ್ಲ. ಮನೆಗೆ ಬಂದು ಹಣ ಕಟ್ಟುವಂತೆ ನಿಂದಿಸಿರುವ ಆರೋಪ ಕೇಳಿ ಬಂದಿದೆ.
ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು