10:01 PM Saturday22 - February 2025
ಬ್ರೇಕಿಂಗ್ ನ್ಯೂಸ್
ಸುಗ್ರಿವಾಜ್ಞೆ ಜಾರಿಯಾದರೂ ನಿಲ್ಲದ ಮೈಕ್ರೋ ಫೈನಾನ್ಸ್ ಕಿರುಕುಳ: ಗೃಹ ಸಚಿವರ ತವರಿನಲ್ಲೇ ಇಬ್ಬರು… ಕಂದಾಯ ಇಲಾಖೆ ಅಧಿಕಾರಿಗಳಿಂದ ಮುಜರಾಯಿ ಇಲಾಖೆಯ ಕೋಟ್ಯಂತರ ಹಣ ಗುಳುಂ: ಬ್ಯಾಂಕ್ ಮೆನೇಜರ್… ಬೆಂಗಳೂರಿನ ಅಭಿವೃದ್ಧಿ ಸೊನ್ನೆ, ಬಿಬಿಎಂಪಿ ಚುನಾವಣೆ ನಡೆಸಿ: ಸರಕಾರಕ್ಕೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್… ಬಾಳೆ ಬೆಳೆಗೆ ದೃಷ್ಟಿ ತಾಗದಂತೆ ಅರೆಬೆತ್ತಲೆ ಮಾಡಲ್ ಗಳ ಫೋಟೋ ಅಳವಡಿಸಿದ ಕಿಲಾಡಿ… ಹಾವೇರಿ ಜಾನಪದ ವಿಶ್ವವಿದ್ಯಾಲಯ ಸಿಬ್ಬಂದಿ ನೇಮಕಾತಿಯಲ್ಲಿ ಅಕ್ರಮ?: ರಾಜಕೀಯ ಕರಿನೆರಳು.!? State Budget | ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ… Deeptech & AI | ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಲು ನವೋದ್ಯಮಗಳಿಗೆ ನೆರವು: ಸಚಿವದ್ವಯರಾದ… ಇಂದಿರಾ ಕ್ಯಾಂಟಿನಿನಲ್ಲಿ ಕಳಪೆ ಗುಣಮಟ್ಟದ ಆಹಾರ: ಗುತ್ತಿಗೆ ರದ್ದುಪಡಿಸಲು ಕರವೇ ಒತ್ತಾಯ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬ್ಲಾಕ್ ಪೇಪರ್ ಬಿಡುಗಡೆ: ಮಾಜಿ ಸಿಎಂ ಬಸವರಾಜ… Lokayukta | ಮುಡಾ ಹಗರಣದಲ್ಲಿ ಸಿಎಂಗೆ ಕ್ಲೀನ್ ಚಿಟ್ ನಿರೀಕ್ಷಿತ: ಹುಬ್ಬಳ್ಳಿಯಲ್ಲಿ ಕೇಂದ್ರ…

ಇತ್ತೀಚಿನ ಸುದ್ದಿ

ಸುಗ್ರಿವಾಜ್ಞೆ ಜಾರಿಯಾದರೂ ನಿಲ್ಲದ ಮೈಕ್ರೋ ಫೈನಾನ್ಸ್ ಕಿರುಕುಳ: ಗೃಹ ಸಚಿವರ ತವರಿನಲ್ಲೇ ಇಬ್ಬರು ಆತ್ಮಹತ್ಯೆ!

22/02/2025, 22:01

ತುಮಕೂರು(reporterkarnataka.com): ರಾಜ್ಯ ಸರಕಾರ ಸುಗ್ರೀವಾಜ್ಞೆ ಜಾರಿಗೊಳಿಸಿದರೂ
ಮೈಕ್ರೋ ಫೈನಾನ್ಸ್ ಗಳ ಕಿರುಕುಳ ಇನ್ನೂ ತಪ್ಪಿಲ್ಲ.
ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ತವರು ಕ್ಷೇತ್ರದಲ್ಲೇ ಮೈಕ್ರೋ ಫೈನಾನ್ಸ್ ಹಾವಳಿಗೆ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಒಬ್ಬ ಆಟೋ ಚಾಲಕ ಹಾಗೂ ಒಬ್ಬರು ಮಹಿಳೆ ಆತ್ಮಹತ್ಯೆಗೆ ಶರಣಾದವರು. ಮೃತಪಟ್ಟವರನ್ನು ಅಂಜನಮೂರ್ತಿ (35) ಹಾಗೂ ಅಜೀಜ್ ಉನಿಸಾ ಎಂದು ಗುರುತಿಸಲಾಗಿದೆ.
ಅಂಜನಮೂರ್ತಿ ಅವರು ಬಟವಾಡಿಯ ಮಹಾಲಕ್ಷ್ಮೀ ನಗರದ ನಿವಾಸಿ ಎಂದು ತಿಳಿದು ಬಂದಿದೆ.
ಅಜೀಜ್ ಉನಿಸಾ ಅವರು ಕುಣಿಗಲ್ ತಾಲೂಕಿನ ಕುತ್ತಿಪುರದ ನಿವಾಸಿ.
ಅಜೀಜ್ ಉನಿಸಾ ಅವರು ಇಬ್ಬರು ಹೆಣ್ಣುಮಕ್ಕಳ ಮದುವೆಗೆ 12 ಲಕ್ಷ ರೂಪಾಯಿ ಸಾಲವನ್ನು ಬೇರೆ ಬೇರೆ ಫೈನಾನ್ಸ್ ಗಳಿಂದ ತೆಗೆದಿದ್ದರು.
ಆಶೀರ್ವಾದ, ಸೂರ್ಯೋದಯ, ಬಜಾಜ್ ಸೇರಿದಂತೆ ವಿವಿಧ ಫೈನಾನ್ಸ್ ನಿಂದ ಉನ್ನಿಸಾ ಸಾಲವನ್ನು ಪಡೆದಿದ್ದರು. ಕಳೆದ ಕೆಲವು ತಿಂಗಳಿಂದ ಸಾಲ ಮರುಪಾವತಿ ಮಾಡಿರಲಿಲ್ಲ. ಮನೆಗೆ ಬಂದು ಹಣ ಕಟ್ಟುವಂತೆ ನಿಂದಿಸಿರುವ ಆರೋಪ ಕೇಳಿ ಬಂದಿದೆ.
ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು