9:38 PM Monday18 - May 2026
ಬ್ರೇಕಿಂಗ್ ನ್ಯೂಸ್
ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್…

ಇತ್ತೀಚಿನ ಸುದ್ದಿ

ಸುಗ್ರಿವಾಜ್ಞೆ ಜಾರಿಯಾದರೂ ನಿಲ್ಲದ ಮೈಕ್ರೋ ಫೈನಾನ್ಸ್ ಕಿರುಕುಳ: ಗೃಹ ಸಚಿವರ ತವರಿನಲ್ಲೇ ಇಬ್ಬರು ಆತ್ಮಹತ್ಯೆ!

22/02/2025, 22:01

ತುಮಕೂರು(reporterkarnataka.com): ರಾಜ್ಯ ಸರಕಾರ ಸುಗ್ರೀವಾಜ್ಞೆ ಜಾರಿಗೊಳಿಸಿದರೂ
ಮೈಕ್ರೋ ಫೈನಾನ್ಸ್ ಗಳ ಕಿರುಕುಳ ಇನ್ನೂ ತಪ್ಪಿಲ್ಲ.
ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ತವರು ಕ್ಷೇತ್ರದಲ್ಲೇ ಮೈಕ್ರೋ ಫೈನಾನ್ಸ್ ಹಾವಳಿಗೆ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಒಬ್ಬ ಆಟೋ ಚಾಲಕ ಹಾಗೂ ಒಬ್ಬರು ಮಹಿಳೆ ಆತ್ಮಹತ್ಯೆಗೆ ಶರಣಾದವರು. ಮೃತಪಟ್ಟವರನ್ನು ಅಂಜನಮೂರ್ತಿ (35) ಹಾಗೂ ಅಜೀಜ್ ಉನಿಸಾ ಎಂದು ಗುರುತಿಸಲಾಗಿದೆ.
ಅಂಜನಮೂರ್ತಿ ಅವರು ಬಟವಾಡಿಯ ಮಹಾಲಕ್ಷ್ಮೀ ನಗರದ ನಿವಾಸಿ ಎಂದು ತಿಳಿದು ಬಂದಿದೆ.
ಅಜೀಜ್ ಉನಿಸಾ ಅವರು ಕುಣಿಗಲ್ ತಾಲೂಕಿನ ಕುತ್ತಿಪುರದ ನಿವಾಸಿ.
ಅಜೀಜ್ ಉನಿಸಾ ಅವರು ಇಬ್ಬರು ಹೆಣ್ಣುಮಕ್ಕಳ ಮದುವೆಗೆ 12 ಲಕ್ಷ ರೂಪಾಯಿ ಸಾಲವನ್ನು ಬೇರೆ ಬೇರೆ ಫೈನಾನ್ಸ್ ಗಳಿಂದ ತೆಗೆದಿದ್ದರು.
ಆಶೀರ್ವಾದ, ಸೂರ್ಯೋದಯ, ಬಜಾಜ್ ಸೇರಿದಂತೆ ವಿವಿಧ ಫೈನಾನ್ಸ್ ನಿಂದ ಉನ್ನಿಸಾ ಸಾಲವನ್ನು ಪಡೆದಿದ್ದರು. ಕಳೆದ ಕೆಲವು ತಿಂಗಳಿಂದ ಸಾಲ ಮರುಪಾವತಿ ಮಾಡಿರಲಿಲ್ಲ. ಮನೆಗೆ ಬಂದು ಹಣ ಕಟ್ಟುವಂತೆ ನಿಂದಿಸಿರುವ ಆರೋಪ ಕೇಳಿ ಬಂದಿದೆ.
ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು