2:08 AM Tuesday7 - July 2026
ಬ್ರೇಕಿಂಗ್ ನ್ಯೂಸ್
ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಸುಗ್ರಿವಾಜ್ಞೆ ಜಾರಿಯಾದರೂ ನಿಲ್ಲದ ಮೈಕ್ರೋ ಫೈನಾನ್ಸ್ ಕಿರುಕುಳ: ಗೃಹ ಸಚಿವರ ತವರಿನಲ್ಲೇ ಇಬ್ಬರು ಆತ್ಮಹತ್ಯೆ!

22/02/2025, 22:01

ತುಮಕೂರು(reporterkarnataka.com): ರಾಜ್ಯ ಸರಕಾರ ಸುಗ್ರೀವಾಜ್ಞೆ ಜಾರಿಗೊಳಿಸಿದರೂ
ಮೈಕ್ರೋ ಫೈನಾನ್ಸ್ ಗಳ ಕಿರುಕುಳ ಇನ್ನೂ ತಪ್ಪಿಲ್ಲ.
ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ತವರು ಕ್ಷೇತ್ರದಲ್ಲೇ ಮೈಕ್ರೋ ಫೈನಾನ್ಸ್ ಹಾವಳಿಗೆ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಒಬ್ಬ ಆಟೋ ಚಾಲಕ ಹಾಗೂ ಒಬ್ಬರು ಮಹಿಳೆ ಆತ್ಮಹತ್ಯೆಗೆ ಶರಣಾದವರು. ಮೃತಪಟ್ಟವರನ್ನು ಅಂಜನಮೂರ್ತಿ (35) ಹಾಗೂ ಅಜೀಜ್ ಉನಿಸಾ ಎಂದು ಗುರುತಿಸಲಾಗಿದೆ.
ಅಂಜನಮೂರ್ತಿ ಅವರು ಬಟವಾಡಿಯ ಮಹಾಲಕ್ಷ್ಮೀ ನಗರದ ನಿವಾಸಿ ಎಂದು ತಿಳಿದು ಬಂದಿದೆ.
ಅಜೀಜ್ ಉನಿಸಾ ಅವರು ಕುಣಿಗಲ್ ತಾಲೂಕಿನ ಕುತ್ತಿಪುರದ ನಿವಾಸಿ.
ಅಜೀಜ್ ಉನಿಸಾ ಅವರು ಇಬ್ಬರು ಹೆಣ್ಣುಮಕ್ಕಳ ಮದುವೆಗೆ 12 ಲಕ್ಷ ರೂಪಾಯಿ ಸಾಲವನ್ನು ಬೇರೆ ಬೇರೆ ಫೈನಾನ್ಸ್ ಗಳಿಂದ ತೆಗೆದಿದ್ದರು.
ಆಶೀರ್ವಾದ, ಸೂರ್ಯೋದಯ, ಬಜಾಜ್ ಸೇರಿದಂತೆ ವಿವಿಧ ಫೈನಾನ್ಸ್ ನಿಂದ ಉನ್ನಿಸಾ ಸಾಲವನ್ನು ಪಡೆದಿದ್ದರು. ಕಳೆದ ಕೆಲವು ತಿಂಗಳಿಂದ ಸಾಲ ಮರುಪಾವತಿ ಮಾಡಿರಲಿಲ್ಲ. ಮನೆಗೆ ಬಂದು ಹಣ ಕಟ್ಟುವಂತೆ ನಿಂದಿಸಿರುವ ಆರೋಪ ಕೇಳಿ ಬಂದಿದೆ.
ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು