9:49 PM Friday6 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

ಮೈಕ್ರೋ ಫೈನಾನ್ಸ್‌ ಕಾಟದಿಂದ ತತ್ತರಿಸಿದ್ದ ಮತ್ತೊಂದು ಕುಟುಂಬಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೆರವು

04/02/2025, 22:29

ಬೆಳಗಾವಿ(reporterkarnataka.com): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು, ಮೈಕ್ರೋ ಫೈನಾನ್ಸ್‌ ಕಾಟಕ್ಕೆ ಬೇಸತ್ತಿದ್ದ ಮತ್ತೊಂದು ಕುಟುಂಬಕ್ಕೆ ನೆರವಾಗಿದ್ದಾರೆ.
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಸರಿಕಟ್ಟಿಯ ಬಸವರಾಜ ಮಾರುತಿ ಕೊಂಡಸ್ಕೊಪ್ಪ ಅವರು ಖಾಸಗಿ ಹಣಕಾಸು ಸಂಸ್ಥೆಯಿಂದ 7 ಲಕ್ಷ ರೂಪಾಯಿ ಸಾಲ ಪಡೆದುಕೊಂಡಿದ್ದರು.
ಸಾಲ ಮರುಪಾವತಿಸಲು ವಿಫಲರಾದ ಹಿನ್ನೆಲೆಯಲ್ಲಿ ಖಾಸಗಿ ಹಣಕಾಸು ಸಂಸ್ಥೆಯವರು 3 ತಿಂಗಳ ಹಿಂದೆ ಬಸವರಾಜ ಅವರ ಮನೆಗೆ ಬೀಗ ಹಾಕಿದ್ದರು.
ಮೈಕ್ರೋ ಫೈನಾನ್ಸ್‌ ಅವರ ಕಾಟಕ್ಕೆ ಬೇಸತ್ತ ಬಸವರಾಜ ಸಚಿವರ ಬಳಿಕ ತಮ್ಮ ಅಳಲು ತೋಡಿಕೊಂಡಿದ್ದರು. ನೊಂದ ರೈತನ ಮನವಿ ಸ್ವೀಕರಿಸಿದ ಸಚಿವರು,ತಮ್ಮ ಆಪ್ತ ಸಹಾಯಕ ಮಹಾಂತೇಶ್‌ ಹಿರೇಮಠ ಮೂಲಕ ಖಾಸಗಿ ಹಣಕಾಸು ಸಂಸ್ಥೆ ಸಿಬ್ಬಂದಿ ಜೊತೆ ಮಾತುಕತೆ ನಡೆಸಿ, ಸಾಲ ಮರು ಪಾವತಿಸಲು ಎರಡು ತಿಂಗಳ ಸಮಯಾವಕಾಶ ಕೊಡಿಸಿದರು. ಜೊತೆಗೆ ಅನಾವಶ್ಯಕವಾಗಿ ಸಾಲಗಾರರಿಗೆ ಕಾಟ ನೀಡದಂತೆ ಖಾಸಗಿ ಹಣಕಾಸು ಸಂಸ್ಥೆಯವರಿಗೆ ಸಚಿವರು ತಾಕೀತು ಮಾಡಿದರು.
ಕಳೆದ ವಾರವಷ್ಟೇ ಬೆಳಗಾವಿ ತಾಲೂಕಿನ ತಾರಿಹಾಳ ಗ್ರಾಮದ ಮಾಧುರಿ ಲೋಹಾರ್‌ ಎನ್ನುವ ಬಾಣಂತಿ ಮತ್ತು ಅವರ ಕುಟುಂಬದವರು ಸಾಲ ತೀರಿಸಿಲ್ಲ ಎಂದು ಆರೋಪಿಸಿ ಖಾಸಗಿ ಹಣಕಾಸು ಸಂಸ್ಥೆಯವರು ಹಸಿ ಬಾಣಂತಿ ಸೇರಿದಂತೆ ಕುಟುಂಬ ಸದಸ್ಯರನ್ನು ಮನೆಯಿಂದ ಹೊರಹಾಕಿದ್ದರು. ಈ ವೇಳೆ ಮಧ್ಯಪ್ರವೇಶಿಸಿದ ಸಚಿವರು, ಸಾಲ ಮರುಪಾವತಿಸಲು ಸಮಯಾವಕಾಶ ಕೊಡಿಸಿದ್ದಲ್ಲದೆ, ಮನೆಯ ಬೀಗ ತೆರವು ಮಾಡಿಸಿದ್ದರು.

* *ಸಚಿವರ ಕಾರ್ಯಕ್ಕೆ ಸಾರ್ವಜನಿಕರ ಪ್ರಶಂಸೆ:*
ಅಪಘಾತದಿಂದ ಗಾಯಗೊಂಡು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ವಿಶ್ರಾಂತಿಯಲ್ಲಿದ್ದರೂ ಮೈಕ್ರೋ ಫೈನಾನ್ಸ್‌ ಕಾಟದಿಂದ ಬಳಲುತ್ತಿರುವ ಜನರಿಗೆ ನೆರವಾಗಿದ್ದಕ್ಕೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಜನವರಿ 14 ರಂದು ಬೆಳಗಾವಿಯ ಕಿತ್ತೂರು ಬಳಿ ಸಚಿವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು. 13 ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ವೈದ್ಯರು ಸಚಿವರಿಗೆ ಒಂದು ತಿಂಗಳ ಕಾಲ ವಿಶ್ರಾಂತಿ ಸೂಚಿಸಿದರೂ ಸಚಿವರು ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯವೈಖರಿ ಬಗ್ಗೆ ನಿಗಾವಹಿಸುತ್ತಿದ್ದಾರೆ. ಜೊತೆಗೆ ಮೈಕ್ರೋ ಫೈನಾನ್ಸ್‌ ಕಾಟದಿಂದ ಬೇಸತ್ತಿರುವ ಜನರ ನೆರವಿಗೂ ಬರುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು