11:48 AM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ

23/11/2024, 16:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಗುಡಿಸಲಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಳೆಗದ್ದೆ ಹೊಸಪುರ ಗ್ರಾಮದಲ್ಲಿ ನಡೆದಿದೆ.


ಹೊಸಪುರ ಗ್ರಾಮದ ಪರಿಶಿಷ್ಟ ಪಂಗಡ ಸಮುದಾಯದ ಕುಟುಂಬವೊಂದರ ಗುಡಿಸಲು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಪರಿಶಿಷ್ಟ ಪಂಗಡದ ಹಸಲರು ಜನಾಂಗದ ಜ್ಯೋತಿ ಚಂದ್ರು ದಂಪತಿಗಳ ಗುಡಿಸಲು ಬೆಂಕಿಗೆ ಆಹುತಿಯಾಗಿದೆ. ವಾಸ ಮಾಡಲು ಮನೆಯಿಲ್ಲದೇ ಬೇಲಿಯ ಗುಡಿಸಲು ಕಟ್ಟಿಕೊಂಡು ಬಡತನದಲ್ಲಿ ಜೀವನ ಸಾಗಿಸುತ್ತಿದ್ದ ದಂಪತಿ ತಡಿಕೆಯಿಂದಲೇ ಮನೆ ನಿರ್ಮಿಸಿಕೊಂಡಿದ್ದರು. ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದು, ದಂಪತಿ ಕೂಲಿಗೆ ಹೋಗಿದ್ದಾಗ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಬೆಂಕಿಯಿಂದ ಮನೆಯ ತಡಿಕೆ, ಪಾತ್ರೆ ಪಗಡೆ, ಬಟ್ಟೆ ಬರೆ, ದಾಖಲೆಗಳೆಲ್ಲಾ ಸುಟ್ಟುಹೋಗಿವೆ.
ಇದರಿಂದ ಬಡ ಕುಟುಂಬದ ದಂಪತಿ ಮತ್ತು ಶಾಲೆಗೆ ಹೋಗುತ್ತಿರುವ ಅವರ ಮಗ ಮತ್ತು ಮಗಳು ಅತಂತ್ರರಾಗಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಮಕ್ಕಳು ಪುಸ್ತಕಗಳು ಸಹ ಸುಟ್ಟುಹೋಗಿವೆ.
ಇವರಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು, ಸರ್ಕಾರದ ವಸತಿ ಯೋಜನೆಗಳಿಂದ ಮನೆ ನಿರ್ಮಾಣ ಮಾಡಿಕೊಡಬೇಕು ಎಂದು ಮೂಡಿಗೆರೆ ತಾಲ್ಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯ ಹರೀಶ್ ಪಲ್ಗುಣಿ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು