3:30 AM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ

23/11/2024, 16:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಗುಡಿಸಲಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಳೆಗದ್ದೆ ಹೊಸಪುರ ಗ್ರಾಮದಲ್ಲಿ ನಡೆದಿದೆ.


ಹೊಸಪುರ ಗ್ರಾಮದ ಪರಿಶಿಷ್ಟ ಪಂಗಡ ಸಮುದಾಯದ ಕುಟುಂಬವೊಂದರ ಗುಡಿಸಲು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಪರಿಶಿಷ್ಟ ಪಂಗಡದ ಹಸಲರು ಜನಾಂಗದ ಜ್ಯೋತಿ ಚಂದ್ರು ದಂಪತಿಗಳ ಗುಡಿಸಲು ಬೆಂಕಿಗೆ ಆಹುತಿಯಾಗಿದೆ. ವಾಸ ಮಾಡಲು ಮನೆಯಿಲ್ಲದೇ ಬೇಲಿಯ ಗುಡಿಸಲು ಕಟ್ಟಿಕೊಂಡು ಬಡತನದಲ್ಲಿ ಜೀವನ ಸಾಗಿಸುತ್ತಿದ್ದ ದಂಪತಿ ತಡಿಕೆಯಿಂದಲೇ ಮನೆ ನಿರ್ಮಿಸಿಕೊಂಡಿದ್ದರು. ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದು, ದಂಪತಿ ಕೂಲಿಗೆ ಹೋಗಿದ್ದಾಗ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಬೆಂಕಿಯಿಂದ ಮನೆಯ ತಡಿಕೆ, ಪಾತ್ರೆ ಪಗಡೆ, ಬಟ್ಟೆ ಬರೆ, ದಾಖಲೆಗಳೆಲ್ಲಾ ಸುಟ್ಟುಹೋಗಿವೆ.
ಇದರಿಂದ ಬಡ ಕುಟುಂಬದ ದಂಪತಿ ಮತ್ತು ಶಾಲೆಗೆ ಹೋಗುತ್ತಿರುವ ಅವರ ಮಗ ಮತ್ತು ಮಗಳು ಅತಂತ್ರರಾಗಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಮಕ್ಕಳು ಪುಸ್ತಕಗಳು ಸಹ ಸುಟ್ಟುಹೋಗಿವೆ.
ಇವರಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು, ಸರ್ಕಾರದ ವಸತಿ ಯೋಜನೆಗಳಿಂದ ಮನೆ ನಿರ್ಮಾಣ ಮಾಡಿಕೊಡಬೇಕು ಎಂದು ಮೂಡಿಗೆರೆ ತಾಲ್ಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯ ಹರೀಶ್ ಪಲ್ಗುಣಿ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು