4:34 PM Sunday10 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ

23/11/2024, 16:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಗುಡಿಸಲಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಳೆಗದ್ದೆ ಹೊಸಪುರ ಗ್ರಾಮದಲ್ಲಿ ನಡೆದಿದೆ.


ಹೊಸಪುರ ಗ್ರಾಮದ ಪರಿಶಿಷ್ಟ ಪಂಗಡ ಸಮುದಾಯದ ಕುಟುಂಬವೊಂದರ ಗುಡಿಸಲು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಪರಿಶಿಷ್ಟ ಪಂಗಡದ ಹಸಲರು ಜನಾಂಗದ ಜ್ಯೋತಿ ಚಂದ್ರು ದಂಪತಿಗಳ ಗುಡಿಸಲು ಬೆಂಕಿಗೆ ಆಹುತಿಯಾಗಿದೆ. ವಾಸ ಮಾಡಲು ಮನೆಯಿಲ್ಲದೇ ಬೇಲಿಯ ಗುಡಿಸಲು ಕಟ್ಟಿಕೊಂಡು ಬಡತನದಲ್ಲಿ ಜೀವನ ಸಾಗಿಸುತ್ತಿದ್ದ ದಂಪತಿ ತಡಿಕೆಯಿಂದಲೇ ಮನೆ ನಿರ್ಮಿಸಿಕೊಂಡಿದ್ದರು. ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದು, ದಂಪತಿ ಕೂಲಿಗೆ ಹೋಗಿದ್ದಾಗ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಬೆಂಕಿಯಿಂದ ಮನೆಯ ತಡಿಕೆ, ಪಾತ್ರೆ ಪಗಡೆ, ಬಟ್ಟೆ ಬರೆ, ದಾಖಲೆಗಳೆಲ್ಲಾ ಸುಟ್ಟುಹೋಗಿವೆ.
ಇದರಿಂದ ಬಡ ಕುಟುಂಬದ ದಂಪತಿ ಮತ್ತು ಶಾಲೆಗೆ ಹೋಗುತ್ತಿರುವ ಅವರ ಮಗ ಮತ್ತು ಮಗಳು ಅತಂತ್ರರಾಗಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಮಕ್ಕಳು ಪುಸ್ತಕಗಳು ಸಹ ಸುಟ್ಟುಹೋಗಿವೆ.
ಇವರಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು, ಸರ್ಕಾರದ ವಸತಿ ಯೋಜನೆಗಳಿಂದ ಮನೆ ನಿರ್ಮಾಣ ಮಾಡಿಕೊಡಬೇಕು ಎಂದು ಮೂಡಿಗೆರೆ ತಾಲ್ಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯ ಹರೀಶ್ ಪಲ್ಗುಣಿ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು