11:42 PM Sunday30 - March 2025
ಬ್ರೇಕಿಂಗ್ ನ್ಯೂಸ್
PDO | ಮಾದರಿ ಗ್ರಾಮ ಪಂಚಾಯತಿ ನಿರ್ಮಾಣದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ… Bangalore | ಸಬಲೀಕರಣ ಜತೆಗೆ ಮಹಿಳಾ ಸುರಕ್ಷತೆ: ‘ಬಿ.ಸೇಫ್’ ಸಮೀಕ್ಷಾ ವರದಿ ಬಿಡುಗಡೆ Bangalore | ಬೇಡಿಕೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಬ್ಯಾಂಕ್ ನಿವೃತ್ತರ ಒಕ್ಕೂಟಗಳ… MSIL | ಸರಕಾರಿ, ಖಾಸಗಿ ಉತ್ಪನ್ನಗಳ ಮಾರಾಟ, ಖರೀದಿಗೆ ನೆರವಾಗಲಿದೆ ಇ ಪೋರ್ಟಲ್‌ Chikkamagaluru | ಬಾಲ ಹಿಡಿದು ಎತ್ತಿದ ಉರಗ ತಜ್ಞರು: ನುಂಗಿದ್ದ 10 ಮೊಟ್ಟೆಗಳನ್ನು… Speaker Talking | ವಿಧಾನ ಸೌಧಕ್ಕೆ ವರ್ಣರಂಜಿತ ದೀಪಾಲಂಕಾರ; ಯಾವಾಗ ಉದ್ಘಾಟನೆ?; ಸ್ಪೀಕರ್… ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ: ಹಾಲು ದರ ಏರಿಕೆಗೆ ಕೇಂದ್ರ… ಕೋಲಾರ ಜಿಲ್ಲೆಯಲ್ಲಿ ಸುಮಾರು 10 ಸಾವಿರ ಎಕರೆ ಅರಣ್ಯ ಭೂಮಿ ಒತ್ತುವರಿ; ತೇರಹಳ್ಳಿ… Protest in Delhi | ‘ಉದ್ಯೋಗ ಕೊಡಿ ಅಥವಾ ಅಧಿಕಾರ ತ್ಯಜಿಸಿ’: ಕೇಂದ್ರ… Medical College | ಗದಗ ಮೆಡಿಕಲ್ ಕಾಲೇಜಿಗೆ ಕೆ.ಎಚ್. ಪಾಟೀಲ್ ಹೆಸರು: ರಾಜ್ಯ…

ಇತ್ತೀಚಿನ ಸುದ್ದಿ

Milk Price | ಬಜೆಟ್‌ ನಲ್ಲಿ ತೆರಿಗೆ ಹಾಕದೆ ಇದೀಗ ಬೆಲೆಯೇರಿಕೆ ಮಾಡಿ ಜನರಿಗೆ ವಂಚನೆ: ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆಕ್ರೋಶ

28/03/2025, 19:56

ಬೆಂಗಳೂರು(reporterkarnataka.com):ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಹಾಲಿನ ದರವನ್ನು ಮೂರು ಬಾರಿ ಒಟ್ಟು 9 ರೂ. ಏರಿಸಿ ಜನರನ್ನು ಲೂಟಿ ಮಾಡಲಾಗಿದೆ. ಬಜೆಟ್‌ನಲ್ಲಿ ಯಾವುದೇ ತೆರಿಗೆಗಳನ್ನು ಹಾಕದೆ, ಹಿಡನ್‌ ಅಜೆಂಡಾ ಮಾಡಿ ಬಳಿಕ ತೆರಿಗೆ/ ದರ ಏರಿಕೆ ಮಾಡಲಾಗಿದೆ. ಪಾಪರ್‌ ಆಗಿಲ್ಲವೆಂದರೆ ಯಾಕಿಷ್ಟು ದರ ಏರಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನೆ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ ಸುಳ್ಳು, ಮುಂದೆ ಮಾರಿಹಬ್ಬ ಇದೆ ಎಂದು ಎಚ್ಚರಿಕೆ ನೀಡಿದ್ದೆ. ಬಜೆಟ್‌ನಲ್ಲೇ ತೆರಿಗೆಗಳನ್ನು ಹಾಕಬೇಕಿತ್ತು. ಆದರೆ ಬಜೆಟ್‌ ಮುಗಿದ ನಂತರ ತೆರಿಗೆ, ದರ ಏರಿಕೆ ಮಾಡಿದ್ದಾರೆ. ಬಜೆಟ್‌ ನಂತರ ಎಲ್ಲ ಮಾಧ್ಯಮಗಳಲ್ಲಿ ಶಹಭಾಸ್‌ಗಿರಿ ಬರಬೇಕೆಂದು ಈ ರೀತಿ ಮೋಸ ಮಾಡಿದ್ದಾರೆ. ಮೋಸ ಮಾಡುವುದರಲ್ಲಿ ಸಿದ್ದರಾಮಯ್ಯ ನಂ.1 ಆಗಿದ್ದಾರೆ. ಧೈರ್ಯ ಇದ್ದಿದ್ದರೆ ತೆರಿಗೆ ಹೆಚ್ಚಳ ಕುರಿತು ಬಜೆಟ್‌ನಲ್ಲೇ ಘೋಷಿಸಬೇಕಿತ್ತು ಎಂದರು.
ಇಡೀ ಆರ್ಥಿಕತೆ ವಿದ್ಯುತ್‌ ಹಾಗೂ ಪೆಟ್ರೋಲ್‌ ಮೇಲೆ ಅವಲಂಬಿತವಾಗಿದೆ. ಇದರ ದರ ಏರಿಕೆಯಾದರೆ ಎಲ್ಲ ವಸ್ತುಗಳ ದರ ಹೆಚ್ಚಾಗುತ್ತದೆ. ಕಾಂಗ್ರೆಸ್‌ ಸರ್ಕಾರ ಕೊಡುವ 2,000 ರೂಪಾಯಿಗಾಗಿ ಜನರು ಬವಣೆ ಅನುಭವಿಸಬೇಕಾಗಿದೆ. ಗ್ಯಾರಂಟಿ ಅನುಷ್ಠಾನ ಸಮಿತಿ ವೇಸ್ಟ್‌ ಬಾಡಿಯಾಗಿದ್ದು, ಅದರ ಮೂಲಕ ಕಾಂಗ್ರೆಸ್‌ ಕಾರ್ಯಕರ್ತರಿಗೆ ಅನವಶ್ಯಕವಾಗಿ 150 ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಈ ಸಮಿತಿ ರದ್ದು ಮಾಡಿದ್ದರೆ ಇಷ್ಟು ಹಣ ಉಳಿಸಬಹುದಿತ್ತು. ಒಂದು ಕಡೆ ಪಕ್ಷಕ್ಕಾಗಿ ತೆರಿಗೆ ಹಣ ಬಳಸಲಾಗುತ್ತಿದೆ. ಮತ್ತೊಂದು ಕಡೆ ಜನರಿಗೆ ಹೊರೆ ಹಾಕಲಾಗುತ್ತಿದೆ ಎಂದು ದೂರಿದರು.
ಯುಗಾದಿ ಹೊಸ ವರ್ಷ ಬರುವ ಸಮಯದಲ್ಲೇ ತೆರಿಗೆ ಹಾಕಲಾಗಿದೆ. ಹಬ್ಬಕ್ಕೆ ಬಳಸುವ ಹಾಲಿಗೂ ದರ ಏರಿಕೆಯಾಗಿದೆ. ಈ ಬಗ್ಗೆ ಪ್ರಶ್ನೆ ಮಾಡಿದರೆ ಸಚಿವ ರಾಜಣ್ಣ ಅವರು ಉಡಾಫೆ ಮಾತಾಡಿದ್ದಾರೆ. ಚುನಾವಣೆಗೆ ಮೊದಲು ಎಲ್ಲವೂ ಫ್ರೀ ಎಂದು ಹೇಳಿ, ನಂತರ ಎಲ್ಲ ದರ ಏರಿಕೆ ಮಾಡಿದ್ದಾರೆ. ಈ 20 ತಿಂಗಳಲ್ಲಿ ಯಾವುದೇ ಜಲಾಶಯದ ಎತ್ತರಿಸಿಲ್ಲ. ಮೇಕೆದಾಟು ಯೋಜನೆ ಜಾರಿಯಾಗಿಲ್ಲ. ಬೆಂಗಳೂರಿನಲ್ಲಿ ಕಸದ ಮೇಲೆ ಹಸಿರು ಸೆಸ್‌ ಹಾಕಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕಗಳನ್ನು ಹೆಚ್ಚಿಸಲಾಗಿದೆ. ಈಗ ಬ್ರ್ಯಾಂಡ್‌ ಬೆಂಗಳೂರು ಹೋಗಿ ದುಬಾರಿ ಬೆಂಗಳೂರು ಸೃಷ್ಟಿಯಾಗಿದೆ ಎಂದರು.
ಅಳಿಯ ಅಲ್ಲ ಮಗಳ ಗಂಡ ಎಂಬಂತೆ ಕೋರ್ಟ್‌ ಆದೇಶದಿಂದ ವಿದ್ಯುತ್‌ ದರ ಏರಿಸಲಾಗಿದೆ ಎಂದು ಸರ್ಕಾರ ಸ್ಪಷ್ಟನೆ ನೀಡಿದೆ. ನೌಕರರ ಪಿಂಚಣಿಯನ್ನು ಸರ್ಕಾರ ನೀಡುವ ಬದಲು ಜನರೇ ನೀಡಬೇಕಾಗಿದೆ. ಇದರಿಂದಾಗಿ ಎಲ್ಲ ವಸ್ತುಗಳ ಬೆಲೆಯೂ ಏರಿಕೆಯಾಗಲಿದೆ. ಜನರು ಇವರನ್ನು ನಂಬಿ ಮತ ನೀಡಿದ್ದರೆ, ಬದುಕು ನರಕ ಮಾಡಿದ್ದಾರೆ ಎಂದರು.
*ಬಿಜೆಪಿಯಿಂದ ಹೋರಾಟ:*
ದರ ಏರಿಕೆ ವಿರುದ್ಧ ಬಿಜೆಪಿ ರಾಜ್ಯದಾದ್ಯಂತ ಹೋರಾಟ ಮಾಡಲಿದೆ. ಯುಗಾದಿ ಹಬ್ಬದ ಕಳೆದ ನಂತರ ಇದರ ದಿನಾಂಕ ನಿಗದಿ ಮಾಡಲಾಗುವುದು. ಈವರೆಗೆ ಹೆಚ್ಚು ಮಾಡಿದ 9 ರೂ. ನಲ್ಲಿ ಲಾಭವನ್ನು ರೈತರಿಗೆ ನೀಡಿಲ್ಲ. ಪ್ರೋತ್ಸಾಹಧನವನ್ನು ಇನ್ನೂ ಬಾಕಿ ಉಳಿಸಿಕೊಳ್ಳಲಾಗಿದೆ. ಈಗ ಹೆಚ್ಚು ಮಾಡಿದ ದರದಲ್ಲಿ ಎಷ್ಟು ಸರ್ಕಾರಕ್ಕೆ ಹೋಗಲಿದೆ ಎಂಬುದು ಗೊತ್ತಿಲ್ಲ. ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಪ್ರೋತ್ಸಾಹಧನ ಹೆಚ್ಚಳ ಕುರಿತು ಘೋಷಣೆ ಮಾಡಿತ್ತು. ಅದನ್ನು ಇನ್ನೂ ಜಾರಿ ಮಾಡಿಲ್ಲ ಎಂದರು.
ಬಿಜೆಪಿ ಅವಧಿಯಲ್ಲಿ ಮಾರ್ಗಸೂಚಿ ದರ ಇಳಿಸಲಾಗಿತ್ತು. ಬಸ್‌ ಟಿಕೆಟ್‌ ದರ, ನೀರಿನ ದರ ಏರಿಸಿರಲಿಲ್ಲ. ಹಿಂದಿನ ಯಾವುದೇ ಮುಖ್ಯಮಂತ್ರಿ ಮಾಡದಷ್ಟು ಸಾಲವನ್ನು ಸಿಎಂ ಸಿದ್ದರಾಮಯ್ಯ ಒಬ್ಬರೇ ಮಾಡಿದ್ದಾರೆ. ಅಂದರೆ 65% ನಷ್ಟು ಸಾಲವನ್ನು ಇವರೊಬ್ಬರೇ ಮಾಡಿದ್ದಾರೆ ಎಂದರು.
ಬಿಜೆಪಿಯಲ್ಲಿ ನಾವೆಲ್ಲರೂ ಒಂದಾಗಿ ಹೋಗಬೇಕು ಎಂಬ ಅಭಿಪ್ರಾಯ ನನ್ನದು. ಪಕ್ಷದ ಹಿರಿಯರು ಕೈಗೊಂಡ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ. ಯಾರೂ ಕೂಡ ಪಕ್ಷದ ವಿರುದ್ಧವಾಗಿ ಮಾತಾಡಬಾರದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು