2:11 AM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಮಿನಿ ಒಲಿಂಪಿಕ್ಸ್ ಕ್ರೀಡಾಕೂಟ; ರಾಯಚೂರು ಜಿಲ್ಲೆಯಿಂದ 12 ಮಂದಿ ಕ್ರೀಡಾಪಟುಗಳು ಆಯ್ಕೆ

09/12/2021, 10:43

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲಾ ಅಮೇಚೂರ್ ಖೋಖೋ ಅಸೋಸಿಯೇಷನ್ ಮತ್ತು ಮಸ್ಕಿ ತಾಲೂಕು ಅಮೆಚೂರ ಖೋಖೋ ಅಸೋಸಿಯೇಷನ್ ವತಿಯಿಂದ ಜಿಲ್ಲಾ ಮಟ್ಟದ ಖೋಖೋ ತಂಡದ ಆಯ್ಕೆ ಪುರುಷ ಮತ್ತು ಮಹಿಳೆಯರಿಗಾಗಿ ನಡೆಸಲಾಗಿದ್ದು, ಸುಮಾರು 206 ಗಂಡು ಮಕ್ಕಳು 46 ಹೆಣ್ಣು ಮಕ್ಕಳು ಭಾಗವಹಿಸಿದ್ದರು.

ಇವರಲ್ಲಿ ಉತ್ತಮ 12 ಪುರುಷ ಹಾಗೂ ಮಹಿಳಾ ಕ್ರೀಡಾಪಟುಗಳನ್ನು ಆಯ್ಕೆ ಮಾಡಿ ಡಿಸೆಂಬರ್ 3,4, ಮತ್ತು 5 ರಂದು ಬೆಂಗಳೂರಿನ ಹೆನ್ನಾಗರದಲ್ಲಿ ನಡೆಯುವ ರಾಜ್ಯ ಮಟ್ಟದ ಚಾಂಪಿಯನ್ ಶಿಪ್ ಗೆ ಆಯ್ಕೆ ಮಾಡಲಾಗಿದೆ. ಅದರಲ್ಲಿ ರಾಯಚೂರು ಜಿಲ್ಲೆಯ ಪುರುಷ ಹಾಗೂ ಮಹಿಳಾ ತಂಡಗಳು ಉತ್ತಮ ಪ್ರದರ್ಶನ ನೀಡಿದ್ದವು. ಕನಾ೯ಟಕ ರಾಜ್ಯ ಚಾಂಪಿಯನ್ ಶಿಪ್ ನಲ್ಲಿ ಒಟ್ಟಾರೆ 16 ಜಿಲ್ಲೆಯಿಂದ ಪುರುಷ ಹಾಗೂ 12  ಜಿಲ್ಲೆಯಿಂದ ಮಹಿಳಾ ತಂಡಗಳು ಪ್ರತಿನಿಧಿಸಿದ್ದವು. ಪುರುಷ ವಿಭಾಗದಿಂದ ಒಟ್ಟಾರೆಯಾಗಿ 16 ತಂಡಗಳಿಂದ ನಾಲ್ಕು ಗುಂಪುಗಳಾಗಿ ವಿಂಗಡೆನೆ ಮಾಡಿ ಅದರಲ್ಲಿ ಉತ್ತಮ ಪ್ರದರ್ಶನ ನೀಡುವ 8 ತಂಡಗಳನ್ನು ಮಾತ್ರ ಮುಂದಿನ ತಿಂಗಳು ರಾಜ್ಯ ಸರ್ಕಾರದ ವತಿಯಿಂದ ಮಂಗಳೂರು, ಉಡುಪಿಯಲ್ಲಿ ನಡೆಸಲ್ಪಡುವ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಕಳುಹಿಸಿ ಕೊಡುವ ಉದ್ದೇಶವನ್ನು ಹೊಂದಿದೆ. ಅದರಲ್ಲಿ 


ರಾಯಚೂರು ತಂಡವು ಮಂಡ್ಯ ಮತ್ತು ಚಾಮರಾಜ ನಗರ ತಂಡವನ್ನು ಇನ್ನಿಂಗ್ಸ್ ಅಂತರದಲ್ಲಿ ಸೋಲಿಸಿ ಮಿನಿ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆ ಯಾಗಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು