6:12 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ದ. ಕ. ಮತ್ತು ಉಡುಪಿ ಜಿಲ್ಲೆಗಳ ನಗರಾಭಿವೃದ್ಧಿ ಪ್ರಾಧಿಕಾರಗಳ ಒಕ್ಕೂಟದಿಂದ ಸಚಿವ ಭೈರತಿ ಸುರೇಶ್ ಭೇಟಿ

02/07/2025, 23:23

ಬೆಂಗಳೂರು(reporterkarnataka.com): ದ. ಕ. ಮತ್ತು ಉಡುಪಿ ಜಿಲ್ಲೆಗಳ ನಗರಾಭಿವೃದ್ಧಿ ಮತ್ತು ಯೋಜನಾ ಪ್ರಾಧಿಕಾರಗಳ ಒಕ್ಕೂಟದ ವತಿಯಿಂದ ಇಂದು ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಮತ್ತು ನಗರಯೋಜನೆ ಸಚಿವ ಭೈರತಿ ಸುರೇಶ್, ವಿಧಾನ ಪರಿಷತ್ ಶಾಸಕರಾದ ಐವನ್ ಡಿ ‘ ಸೋಜಾ, ಕೆಪಿಸಿಸಿ ಕಾರ್ಯಧ್ಯಕ್ಷ ಮತ್ತು ವಿಧಾನ ಪರಿಷತ್ ಶಾಸಕರಾದ ಮಂಜುನಾಥ್ ಭಂಡಾರಿ, ಮಾಜಿ ಸಚಿವರುಗಳಾದ ಶ್ರೀ ಬಿ. ರಮಾನಾಥ ರೈ ಶ್ರೀ ವಿನಯಕುಮಾರ್ ಸೊರಕೆ, ಕರ್ನಾಟಕ ನಗರ ಮತ್ತು ಗ್ರಾಮಾoತರ ಯೋಜನಾ ಇಲಾಖೆಯ ಆಯುಕ್ತ ವೆಂಕಟಾಚಾಲಪತಿ ಐ. ಎ. ಎಸ್ ಮೊದಲಾದ ವರನ್ನು ಭೇಟಿ ಮಾಡಿ ಕರಾವಳಿ ಜಿಲ್ಲೆಗಳಿಗೆ ಪ್ರತ್ಯೇಕ ವಲಯ ನಿಯಮಾವಳಿ, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 9/11 ವಿನ್ಯಾಸ ಅನುಮೋದನೆ, ಕನ್ವರ್ಷನ್, ಕಟ್ಟಡ ನಿರ್ಮಾಣ ಪರವಾನಿಗೆ ಮೊದಲಾದ ನಿಯಮಗಳಲ್ಲಿ ಸರಳೀಕರಣ ಮಾಡುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸದಾಶಿವ ಉಳ್ಳಾಲ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ, ಒಕ್ಕೂಟದ ಸಂಚಾಲಕ ದಿನಕರ್ ಹೆರೂರ್, ಒಕ್ಕೂಟದ ಸಂಚಾಲಕ, ಸುಳ್ಯ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ. ಎಂ. ಮುಸ್ತಫ ಸುಳ್ಯ, ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಬೇಬಿ ಕುಂದರ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಸದಸ್ಯರು ಗಳಾದ ಅಬ್ದುಲ್ ಜಲೀಲ್ ನೀರಜ್ ಪಾಲ್, ಮೂಡಬಿದ್ರಿ ಪ್ರಾಧಿಕಾರ ಸದಸ್ಯ ಸತೀಶ್. ಕೆ. ಉಡುಪಿ ಪ್ರಾಧಿಕಾರ ಸದಸ್ಯ ಗಿರೀಶ್ ಕುಂದರ್, ಉಡುಪಿ ಭೂ ನ್ಯಾಯ ಮಂಡಳಿ ಸದಸ್ಯರೋಯ್ಸ್ ಉದ್ಯಾವರ, ಕಾಂಗ್ರೆಸ್ ಮುಖಂಡರಾದ ತಾಯಿನಾತ್ ಬೊಳoಜ ಮೊದಲಾದವರು ನಿಯೋಗದಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು